• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣ್ಣೂರಿನಲ್ಲಿ ಐಸಿಸ್  20 ಜನರ ಸ್ಲೀಪರ್ ಸೆಲ್: ಗುಪ್ತಚರ ಮಾಹಿತಿ

TNN Correspondent Posted On December 31, 2017
0


0
Shares
  • Share On Facebook
  • Tweet It

ಕಣ್ಣೂರು: ವಿಶ್ವಕ್ಕೆ ಮಾರಕವಾಗಿರುವ ಭಯೋತ್ಪಾದಕ ಸಂಘಟನೆ ಐಸಿಸ್ಗೆ ಕೇರಳದ ಕಣ್ಣೂರಿನ 20 ಜನರು ಸ್ಥಳೀಯ ಯುವಕರನ್ನು ನೇಮಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಮಾಹಿತಿ ಕೇರಳ ಗುಪ್ತಚರ ಇಲಾಖೆಗೆ ಮಾಹಿತಿ ದೊರಕಿದೆ. ಈ ಮಾಹಿತಿ ಇಡೀ ಕೇರಳವನ್ನು ಬೆಚ್ಚಿ ಬೀಳಿಸಿದ್ದು, ಕಣ್ಣೂರಿನಲ್ಲಿ ಐಸಿಸ್ ಉಗ್ರ ಸ್ಲೀಪರ್ ಸೇಲ್ ಕಾರ್ಯ ನಿರ್ವಹಿಸುತ್ತಿದೆ ಎಂಬ ಅನುಮಾನಕ್ಕೆ ಮತ್ತಷ್ಟು ಪುಷ್ಟಿ ದೊರಕಿದೆ.

ಕೇರಳ ಗುಪ್ತಚರ ವಿಭಾಗ ಕಣ್ಣೂರು ಭಾಗದಲ್ಲಿ ಹೆಚ್ಚು ನಿಗಾವಹಿಸಿದ್ದು, ಕೇರಳದ ಯುವಕರನ್ನುಐಸಿಸ್ ಗೆ ಸೇರಿಸಲು 20 ಜನರ ತಂಡ ಗೌಪ್ಯವಾಗಿ ಕಾರ್ಯ ತಂತ್ರ  ರೂಪಿಸಿರುವ ಬಗ್ಗೆ ಮಾಹಿತಿ ಕಲೆ ಹಾಕಿದೆ. 20 ಜನರ ಸಂಘಟನೆ, ಅವರ ಕಾರ್ಯತಂತ್ರ, ಚಟುವಟಿಕೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ.

ಕಣ್ಣೂರು ನಿವಾಸಿ ಹಂಸಾ ಎಂಬಾತನನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು. ಈತ ಕಾಸರಗೋಡು ಜಿಲ್ಲೆಯ ಪಡನ್ನ, ಕಣ್ಣೂರು ಜಿಲ್ಲೆಯ ಕನಕಮಲೆ ಹಾಗೂ ಬೆಹರೇನ್ ನ ಕೇರಳದ ಯುವಕ, ಯುವತಿಯರನ್ನು ಐಸಿಸ್​ಗೆ ಸೇರ್ಪಡೆಗೊಳಿಸುವ ಜಾಲದ ಪ್ರಧಾನ ಸೂತ್ರಧಾರ ಎನ್ನಲಾಗಿದೆ. ಹಂಸಾ ನೀಡಿದ ಮಾಹಿತಿ ಆಧಾರದಲ್ಲಿ ಕಣ್ಣೂರು ಜಿಲ್ಲೆಯ ಇತರ ಐವರನ್ನು ಬಂಧಿಸಲಾಗಿತ್ತು. ಈ ಐವರು ತುರ್ಕಿಯ ಐಸಿಸ್ ಕೇಂದ್ರಕ್ಕೆ ಸಾಗುವ ದಾರಿ ಮಧ್ಯೆ ತುರ್ಕಿ ಪೊಲೀಸರು ಇವರನ್ನು ತಡೆದು ಭಾರತಕ್ಕೆ ಗಡೀಪಾರು ಮಾಡಿದ್ದರು. ನಂತರ ವಳಪಟ್ಟಣ ಪೊಲೀಸರು ಇವರನ್ನು ಬಂಧಿಸಿದ್ದರು.

ಕೇರಳದಲ್ಲಿ ವಿವಿಧ ಸಂಘಟನೆಗಳ ಹೆಸರಲ್ಲಿ ಐಸಿಸ್ ನಂಟು ಹೊಂದಿರುವ 20 ಮಂದಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಹಂಸಾ ಪೊಲೀಸರ ಮುಂದೆ ಬಾಯಿಬಿಟ್ಟಿದ್ದ. ಎನ್​ಐಎ ಪ್ರಕರಣವನ್ನು ನಾನಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ತನಿಖೆ ವಿದೇಶದಲ್ಲೂ ನಡೆಯುವ ಸಾಧ್ಯತೆಗಳು ಇವೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search