• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಣ್ಣೂರಿನಲ್ಲಿ ಐಸಿಸ್  20 ಜನರ ಸ್ಲೀಪರ್ ಸೆಲ್: ಗುಪ್ತಚರ ಮಾಹಿತಿ

TNN Correspondent Posted On December 31, 2017


  • Share On Facebook
  • Tweet It

ಕಣ್ಣೂರು: ವಿಶ್ವಕ್ಕೆ ಮಾರಕವಾಗಿರುವ ಭಯೋತ್ಪಾದಕ ಸಂಘಟನೆ ಐಸಿಸ್ಗೆ ಕೇರಳದ ಕಣ್ಣೂರಿನ 20 ಜನರು ಸ್ಥಳೀಯ ಯುವಕರನ್ನು ನೇಮಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಮಾಹಿತಿ ಕೇರಳ ಗುಪ್ತಚರ ಇಲಾಖೆಗೆ ಮಾಹಿತಿ ದೊರಕಿದೆ. ಈ ಮಾಹಿತಿ ಇಡೀ ಕೇರಳವನ್ನು ಬೆಚ್ಚಿ ಬೀಳಿಸಿದ್ದು, ಕಣ್ಣೂರಿನಲ್ಲಿ ಐಸಿಸ್ ಉಗ್ರ ಸ್ಲೀಪರ್ ಸೇಲ್ ಕಾರ್ಯ ನಿರ್ವಹಿಸುತ್ತಿದೆ ಎಂಬ ಅನುಮಾನಕ್ಕೆ ಮತ್ತಷ್ಟು ಪುಷ್ಟಿ ದೊರಕಿದೆ.

ಕೇರಳ ಗುಪ್ತಚರ ವಿಭಾಗ ಕಣ್ಣೂರು ಭಾಗದಲ್ಲಿ ಹೆಚ್ಚು ನಿಗಾವಹಿಸಿದ್ದು, ಕೇರಳದ ಯುವಕರನ್ನುಐಸಿಸ್ ಗೆ ಸೇರಿಸಲು 20 ಜನರ ತಂಡ ಗೌಪ್ಯವಾಗಿ ಕಾರ್ಯ ತಂತ್ರ  ರೂಪಿಸಿರುವ ಬಗ್ಗೆ ಮಾಹಿತಿ ಕಲೆ ಹಾಕಿದೆ. 20 ಜನರ ಸಂಘಟನೆ, ಅವರ ಕಾರ್ಯತಂತ್ರ, ಚಟುವಟಿಕೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ.

ಕಣ್ಣೂರು ನಿವಾಸಿ ಹಂಸಾ ಎಂಬಾತನನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು. ಈತ ಕಾಸರಗೋಡು ಜಿಲ್ಲೆಯ ಪಡನ್ನ, ಕಣ್ಣೂರು ಜಿಲ್ಲೆಯ ಕನಕಮಲೆ ಹಾಗೂ ಬೆಹರೇನ್ ನ ಕೇರಳದ ಯುವಕ, ಯುವತಿಯರನ್ನು ಐಸಿಸ್​ಗೆ ಸೇರ್ಪಡೆಗೊಳಿಸುವ ಜಾಲದ ಪ್ರಧಾನ ಸೂತ್ರಧಾರ ಎನ್ನಲಾಗಿದೆ. ಹಂಸಾ ನೀಡಿದ ಮಾಹಿತಿ ಆಧಾರದಲ್ಲಿ ಕಣ್ಣೂರು ಜಿಲ್ಲೆಯ ಇತರ ಐವರನ್ನು ಬಂಧಿಸಲಾಗಿತ್ತು. ಈ ಐವರು ತುರ್ಕಿಯ ಐಸಿಸ್ ಕೇಂದ್ರಕ್ಕೆ ಸಾಗುವ ದಾರಿ ಮಧ್ಯೆ ತುರ್ಕಿ ಪೊಲೀಸರು ಇವರನ್ನು ತಡೆದು ಭಾರತಕ್ಕೆ ಗಡೀಪಾರು ಮಾಡಿದ್ದರು. ನಂತರ ವಳಪಟ್ಟಣ ಪೊಲೀಸರು ಇವರನ್ನು ಬಂಧಿಸಿದ್ದರು.

ಕೇರಳದಲ್ಲಿ ವಿವಿಧ ಸಂಘಟನೆಗಳ ಹೆಸರಲ್ಲಿ ಐಸಿಸ್ ನಂಟು ಹೊಂದಿರುವ 20 ಮಂದಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಹಂಸಾ ಪೊಲೀಸರ ಮುಂದೆ ಬಾಯಿಬಿಟ್ಟಿದ್ದ. ಎನ್​ಐಎ ಪ್ರಕರಣವನ್ನು ನಾನಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ತನಿಖೆ ವಿದೇಶದಲ್ಲೂ ನಡೆಯುವ ಸಾಧ್ಯತೆಗಳು ಇವೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search