• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣ್ಣೂರಿನಲ್ಲಿ ಐಸಿಸ್  20 ಜನರ ಸ್ಲೀಪರ್ ಸೆಲ್: ಗುಪ್ತಚರ ಮಾಹಿತಿ

TNN Correspondent Posted On December 31, 2017
0


0
Shares
  • Share On Facebook
  • Tweet It

ಕಣ್ಣೂರು: ವಿಶ್ವಕ್ಕೆ ಮಾರಕವಾಗಿರುವ ಭಯೋತ್ಪಾದಕ ಸಂಘಟನೆ ಐಸಿಸ್ಗೆ ಕೇರಳದ ಕಣ್ಣೂರಿನ 20 ಜನರು ಸ್ಥಳೀಯ ಯುವಕರನ್ನು ನೇಮಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಮಾಹಿತಿ ಕೇರಳ ಗುಪ್ತಚರ ಇಲಾಖೆಗೆ ಮಾಹಿತಿ ದೊರಕಿದೆ. ಈ ಮಾಹಿತಿ ಇಡೀ ಕೇರಳವನ್ನು ಬೆಚ್ಚಿ ಬೀಳಿಸಿದ್ದು, ಕಣ್ಣೂರಿನಲ್ಲಿ ಐಸಿಸ್ ಉಗ್ರ ಸ್ಲೀಪರ್ ಸೇಲ್ ಕಾರ್ಯ ನಿರ್ವಹಿಸುತ್ತಿದೆ ಎಂಬ ಅನುಮಾನಕ್ಕೆ ಮತ್ತಷ್ಟು ಪುಷ್ಟಿ ದೊರಕಿದೆ.

ಕೇರಳ ಗುಪ್ತಚರ ವಿಭಾಗ ಕಣ್ಣೂರು ಭಾಗದಲ್ಲಿ ಹೆಚ್ಚು ನಿಗಾವಹಿಸಿದ್ದು, ಕೇರಳದ ಯುವಕರನ್ನುಐಸಿಸ್ ಗೆ ಸೇರಿಸಲು 20 ಜನರ ತಂಡ ಗೌಪ್ಯವಾಗಿ ಕಾರ್ಯ ತಂತ್ರ  ರೂಪಿಸಿರುವ ಬಗ್ಗೆ ಮಾಹಿತಿ ಕಲೆ ಹಾಕಿದೆ. 20 ಜನರ ಸಂಘಟನೆ, ಅವರ ಕಾರ್ಯತಂತ್ರ, ಚಟುವಟಿಕೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ.

ಕಣ್ಣೂರು ನಿವಾಸಿ ಹಂಸಾ ಎಂಬಾತನನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು. ಈತ ಕಾಸರಗೋಡು ಜಿಲ್ಲೆಯ ಪಡನ್ನ, ಕಣ್ಣೂರು ಜಿಲ್ಲೆಯ ಕನಕಮಲೆ ಹಾಗೂ ಬೆಹರೇನ್ ನ ಕೇರಳದ ಯುವಕ, ಯುವತಿಯರನ್ನು ಐಸಿಸ್​ಗೆ ಸೇರ್ಪಡೆಗೊಳಿಸುವ ಜಾಲದ ಪ್ರಧಾನ ಸೂತ್ರಧಾರ ಎನ್ನಲಾಗಿದೆ. ಹಂಸಾ ನೀಡಿದ ಮಾಹಿತಿ ಆಧಾರದಲ್ಲಿ ಕಣ್ಣೂರು ಜಿಲ್ಲೆಯ ಇತರ ಐವರನ್ನು ಬಂಧಿಸಲಾಗಿತ್ತು. ಈ ಐವರು ತುರ್ಕಿಯ ಐಸಿಸ್ ಕೇಂದ್ರಕ್ಕೆ ಸಾಗುವ ದಾರಿ ಮಧ್ಯೆ ತುರ್ಕಿ ಪೊಲೀಸರು ಇವರನ್ನು ತಡೆದು ಭಾರತಕ್ಕೆ ಗಡೀಪಾರು ಮಾಡಿದ್ದರು. ನಂತರ ವಳಪಟ್ಟಣ ಪೊಲೀಸರು ಇವರನ್ನು ಬಂಧಿಸಿದ್ದರು.

ಕೇರಳದಲ್ಲಿ ವಿವಿಧ ಸಂಘಟನೆಗಳ ಹೆಸರಲ್ಲಿ ಐಸಿಸ್ ನಂಟು ಹೊಂದಿರುವ 20 ಮಂದಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಹಂಸಾ ಪೊಲೀಸರ ಮುಂದೆ ಬಾಯಿಬಿಟ್ಟಿದ್ದ. ಎನ್​ಐಎ ಪ್ರಕರಣವನ್ನು ನಾನಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ತನಿಖೆ ವಿದೇಶದಲ್ಲೂ ನಡೆಯುವ ಸಾಧ್ಯತೆಗಳು ಇವೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search