• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಣ್ಣೂರಿನಲ್ಲಿ ಐಸಿಸ್  20 ಜನರ ಸ್ಲೀಪರ್ ಸೆಲ್: ಗುಪ್ತಚರ ಮಾಹಿತಿ

TNN Correspondent Posted On December 31, 2017


  • Share On Facebook
  • Tweet It

ಕಣ್ಣೂರು: ವಿಶ್ವಕ್ಕೆ ಮಾರಕವಾಗಿರುವ ಭಯೋತ್ಪಾದಕ ಸಂಘಟನೆ ಐಸಿಸ್ಗೆ ಕೇರಳದ ಕಣ್ಣೂರಿನ 20 ಜನರು ಸ್ಥಳೀಯ ಯುವಕರನ್ನು ನೇಮಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಮಾಹಿತಿ ಕೇರಳ ಗುಪ್ತಚರ ಇಲಾಖೆಗೆ ಮಾಹಿತಿ ದೊರಕಿದೆ. ಈ ಮಾಹಿತಿ ಇಡೀ ಕೇರಳವನ್ನು ಬೆಚ್ಚಿ ಬೀಳಿಸಿದ್ದು, ಕಣ್ಣೂರಿನಲ್ಲಿ ಐಸಿಸ್ ಉಗ್ರ ಸ್ಲೀಪರ್ ಸೇಲ್ ಕಾರ್ಯ ನಿರ್ವಹಿಸುತ್ತಿದೆ ಎಂಬ ಅನುಮಾನಕ್ಕೆ ಮತ್ತಷ್ಟು ಪುಷ್ಟಿ ದೊರಕಿದೆ.

ಕೇರಳ ಗುಪ್ತಚರ ವಿಭಾಗ ಕಣ್ಣೂರು ಭಾಗದಲ್ಲಿ ಹೆಚ್ಚು ನಿಗಾವಹಿಸಿದ್ದು, ಕೇರಳದ ಯುವಕರನ್ನುಐಸಿಸ್ ಗೆ ಸೇರಿಸಲು 20 ಜನರ ತಂಡ ಗೌಪ್ಯವಾಗಿ ಕಾರ್ಯ ತಂತ್ರ  ರೂಪಿಸಿರುವ ಬಗ್ಗೆ ಮಾಹಿತಿ ಕಲೆ ಹಾಕಿದೆ. 20 ಜನರ ಸಂಘಟನೆ, ಅವರ ಕಾರ್ಯತಂತ್ರ, ಚಟುವಟಿಕೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ.

ಕಣ್ಣೂರು ನಿವಾಸಿ ಹಂಸಾ ಎಂಬಾತನನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು. ಈತ ಕಾಸರಗೋಡು ಜಿಲ್ಲೆಯ ಪಡನ್ನ, ಕಣ್ಣೂರು ಜಿಲ್ಲೆಯ ಕನಕಮಲೆ ಹಾಗೂ ಬೆಹರೇನ್ ನ ಕೇರಳದ ಯುವಕ, ಯುವತಿಯರನ್ನು ಐಸಿಸ್​ಗೆ ಸೇರ್ಪಡೆಗೊಳಿಸುವ ಜಾಲದ ಪ್ರಧಾನ ಸೂತ್ರಧಾರ ಎನ್ನಲಾಗಿದೆ. ಹಂಸಾ ನೀಡಿದ ಮಾಹಿತಿ ಆಧಾರದಲ್ಲಿ ಕಣ್ಣೂರು ಜಿಲ್ಲೆಯ ಇತರ ಐವರನ್ನು ಬಂಧಿಸಲಾಗಿತ್ತು. ಈ ಐವರು ತುರ್ಕಿಯ ಐಸಿಸ್ ಕೇಂದ್ರಕ್ಕೆ ಸಾಗುವ ದಾರಿ ಮಧ್ಯೆ ತುರ್ಕಿ ಪೊಲೀಸರು ಇವರನ್ನು ತಡೆದು ಭಾರತಕ್ಕೆ ಗಡೀಪಾರು ಮಾಡಿದ್ದರು. ನಂತರ ವಳಪಟ್ಟಣ ಪೊಲೀಸರು ಇವರನ್ನು ಬಂಧಿಸಿದ್ದರು.

ಕೇರಳದಲ್ಲಿ ವಿವಿಧ ಸಂಘಟನೆಗಳ ಹೆಸರಲ್ಲಿ ಐಸಿಸ್ ನಂಟು ಹೊಂದಿರುವ 20 ಮಂದಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಹಂಸಾ ಪೊಲೀಸರ ಮುಂದೆ ಬಾಯಿಬಿಟ್ಟಿದ್ದ. ಎನ್​ಐಎ ಪ್ರಕರಣವನ್ನು ನಾನಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ತನಿಖೆ ವಿದೇಶದಲ್ಲೂ ನಡೆಯುವ ಸಾಧ್ಯತೆಗಳು ಇವೆ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search