• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣ್ಣೂರಿನಲ್ಲಿ ಐಸಿಸ್  20 ಜನರ ಸ್ಲೀಪರ್ ಸೆಲ್: ಗುಪ್ತಚರ ಮಾಹಿತಿ

TNN Correspondent Posted On December 31, 2017
0


0
Shares
  • Share On Facebook
  • Tweet It

ಕಣ್ಣೂರು: ವಿಶ್ವಕ್ಕೆ ಮಾರಕವಾಗಿರುವ ಭಯೋತ್ಪಾದಕ ಸಂಘಟನೆ ಐಸಿಸ್ಗೆ ಕೇರಳದ ಕಣ್ಣೂರಿನ 20 ಜನರು ಸ್ಥಳೀಯ ಯುವಕರನ್ನು ನೇಮಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಮಾಹಿತಿ ಕೇರಳ ಗುಪ್ತಚರ ಇಲಾಖೆಗೆ ಮಾಹಿತಿ ದೊರಕಿದೆ. ಈ ಮಾಹಿತಿ ಇಡೀ ಕೇರಳವನ್ನು ಬೆಚ್ಚಿ ಬೀಳಿಸಿದ್ದು, ಕಣ್ಣೂರಿನಲ್ಲಿ ಐಸಿಸ್ ಉಗ್ರ ಸ್ಲೀಪರ್ ಸೇಲ್ ಕಾರ್ಯ ನಿರ್ವಹಿಸುತ್ತಿದೆ ಎಂಬ ಅನುಮಾನಕ್ಕೆ ಮತ್ತಷ್ಟು ಪುಷ್ಟಿ ದೊರಕಿದೆ.

ಕೇರಳ ಗುಪ್ತಚರ ವಿಭಾಗ ಕಣ್ಣೂರು ಭಾಗದಲ್ಲಿ ಹೆಚ್ಚು ನಿಗಾವಹಿಸಿದ್ದು, ಕೇರಳದ ಯುವಕರನ್ನುಐಸಿಸ್ ಗೆ ಸೇರಿಸಲು 20 ಜನರ ತಂಡ ಗೌಪ್ಯವಾಗಿ ಕಾರ್ಯ ತಂತ್ರ  ರೂಪಿಸಿರುವ ಬಗ್ಗೆ ಮಾಹಿತಿ ಕಲೆ ಹಾಕಿದೆ. 20 ಜನರ ಸಂಘಟನೆ, ಅವರ ಕಾರ್ಯತಂತ್ರ, ಚಟುವಟಿಕೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ.

ಕಣ್ಣೂರು ನಿವಾಸಿ ಹಂಸಾ ಎಂಬಾತನನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು. ಈತ ಕಾಸರಗೋಡು ಜಿಲ್ಲೆಯ ಪಡನ್ನ, ಕಣ್ಣೂರು ಜಿಲ್ಲೆಯ ಕನಕಮಲೆ ಹಾಗೂ ಬೆಹರೇನ್ ನ ಕೇರಳದ ಯುವಕ, ಯುವತಿಯರನ್ನು ಐಸಿಸ್​ಗೆ ಸೇರ್ಪಡೆಗೊಳಿಸುವ ಜಾಲದ ಪ್ರಧಾನ ಸೂತ್ರಧಾರ ಎನ್ನಲಾಗಿದೆ. ಹಂಸಾ ನೀಡಿದ ಮಾಹಿತಿ ಆಧಾರದಲ್ಲಿ ಕಣ್ಣೂರು ಜಿಲ್ಲೆಯ ಇತರ ಐವರನ್ನು ಬಂಧಿಸಲಾಗಿತ್ತು. ಈ ಐವರು ತುರ್ಕಿಯ ಐಸಿಸ್ ಕೇಂದ್ರಕ್ಕೆ ಸಾಗುವ ದಾರಿ ಮಧ್ಯೆ ತುರ್ಕಿ ಪೊಲೀಸರು ಇವರನ್ನು ತಡೆದು ಭಾರತಕ್ಕೆ ಗಡೀಪಾರು ಮಾಡಿದ್ದರು. ನಂತರ ವಳಪಟ್ಟಣ ಪೊಲೀಸರು ಇವರನ್ನು ಬಂಧಿಸಿದ್ದರು.

ಕೇರಳದಲ್ಲಿ ವಿವಿಧ ಸಂಘಟನೆಗಳ ಹೆಸರಲ್ಲಿ ಐಸಿಸ್ ನಂಟು ಹೊಂದಿರುವ 20 ಮಂದಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಹಂಸಾ ಪೊಲೀಸರ ಮುಂದೆ ಬಾಯಿಬಿಟ್ಟಿದ್ದ. ಎನ್​ಐಎ ಪ್ರಕರಣವನ್ನು ನಾನಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ತನಿಖೆ ವಿದೇಶದಲ್ಲೂ ನಡೆಯುವ ಸಾಧ್ಯತೆಗಳು ಇವೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search