• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣ್ಣೂರಿನಲ್ಲಿ ಐಸಿಸ್  20 ಜನರ ಸ್ಲೀಪರ್ ಸೆಲ್: ಗುಪ್ತಚರ ಮಾಹಿತಿ

TNN Correspondent Posted On December 31, 2017
0


0
Shares
  • Share On Facebook
  • Tweet It

ಕಣ್ಣೂರು: ವಿಶ್ವಕ್ಕೆ ಮಾರಕವಾಗಿರುವ ಭಯೋತ್ಪಾದಕ ಸಂಘಟನೆ ಐಸಿಸ್ಗೆ ಕೇರಳದ ಕಣ್ಣೂರಿನ 20 ಜನರು ಸ್ಥಳೀಯ ಯುವಕರನ್ನು ನೇಮಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಮಾಹಿತಿ ಕೇರಳ ಗುಪ್ತಚರ ಇಲಾಖೆಗೆ ಮಾಹಿತಿ ದೊರಕಿದೆ. ಈ ಮಾಹಿತಿ ಇಡೀ ಕೇರಳವನ್ನು ಬೆಚ್ಚಿ ಬೀಳಿಸಿದ್ದು, ಕಣ್ಣೂರಿನಲ್ಲಿ ಐಸಿಸ್ ಉಗ್ರ ಸ್ಲೀಪರ್ ಸೇಲ್ ಕಾರ್ಯ ನಿರ್ವಹಿಸುತ್ತಿದೆ ಎಂಬ ಅನುಮಾನಕ್ಕೆ ಮತ್ತಷ್ಟು ಪುಷ್ಟಿ ದೊರಕಿದೆ.

ಕೇರಳ ಗುಪ್ತಚರ ವಿಭಾಗ ಕಣ್ಣೂರು ಭಾಗದಲ್ಲಿ ಹೆಚ್ಚು ನಿಗಾವಹಿಸಿದ್ದು, ಕೇರಳದ ಯುವಕರನ್ನುಐಸಿಸ್ ಗೆ ಸೇರಿಸಲು 20 ಜನರ ತಂಡ ಗೌಪ್ಯವಾಗಿ ಕಾರ್ಯ ತಂತ್ರ  ರೂಪಿಸಿರುವ ಬಗ್ಗೆ ಮಾಹಿತಿ ಕಲೆ ಹಾಕಿದೆ. 20 ಜನರ ಸಂಘಟನೆ, ಅವರ ಕಾರ್ಯತಂತ್ರ, ಚಟುವಟಿಕೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ.

ಕಣ್ಣೂರು ನಿವಾಸಿ ಹಂಸಾ ಎಂಬಾತನನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು. ಈತ ಕಾಸರಗೋಡು ಜಿಲ್ಲೆಯ ಪಡನ್ನ, ಕಣ್ಣೂರು ಜಿಲ್ಲೆಯ ಕನಕಮಲೆ ಹಾಗೂ ಬೆಹರೇನ್ ನ ಕೇರಳದ ಯುವಕ, ಯುವತಿಯರನ್ನು ಐಸಿಸ್​ಗೆ ಸೇರ್ಪಡೆಗೊಳಿಸುವ ಜಾಲದ ಪ್ರಧಾನ ಸೂತ್ರಧಾರ ಎನ್ನಲಾಗಿದೆ. ಹಂಸಾ ನೀಡಿದ ಮಾಹಿತಿ ಆಧಾರದಲ್ಲಿ ಕಣ್ಣೂರು ಜಿಲ್ಲೆಯ ಇತರ ಐವರನ್ನು ಬಂಧಿಸಲಾಗಿತ್ತು. ಈ ಐವರು ತುರ್ಕಿಯ ಐಸಿಸ್ ಕೇಂದ್ರಕ್ಕೆ ಸಾಗುವ ದಾರಿ ಮಧ್ಯೆ ತುರ್ಕಿ ಪೊಲೀಸರು ಇವರನ್ನು ತಡೆದು ಭಾರತಕ್ಕೆ ಗಡೀಪಾರು ಮಾಡಿದ್ದರು. ನಂತರ ವಳಪಟ್ಟಣ ಪೊಲೀಸರು ಇವರನ್ನು ಬಂಧಿಸಿದ್ದರು.

ಕೇರಳದಲ್ಲಿ ವಿವಿಧ ಸಂಘಟನೆಗಳ ಹೆಸರಲ್ಲಿ ಐಸಿಸ್ ನಂಟು ಹೊಂದಿರುವ 20 ಮಂದಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಹಂಸಾ ಪೊಲೀಸರ ಮುಂದೆ ಬಾಯಿಬಿಟ್ಟಿದ್ದ. ಎನ್​ಐಎ ಪ್ರಕರಣವನ್ನು ನಾನಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ತನಿಖೆ ವಿದೇಶದಲ್ಲೂ ನಡೆಯುವ ಸಾಧ್ಯತೆಗಳು ಇವೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search