• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪೊಲೀಸ್ ಪೇದೆಗೆ ಹೊಡೆದ ಕಾಂಗ್ರೆಸ್ ಶಾಸಕಿ ವಿರುದ್ಧ ಪ್ರಕರಣ ದಾಖಲು!

TNN Correspondent Posted On December 31, 2017
0


0
Shares
  • Share On Facebook
  • Tweet It

ಶಿಮ್ಲಾ: ಕರ್ತವ್ಯ ನಿರತ ಪೊಲೀಸ್ ಮಹಿಳಾ ಪೇದೆಯ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಹಿಮಾಚಲ ಪ್ರದೇಶ ಕಾಂಗ್ರೆಸ್ ನಾಯಕಿ ಹಾಗೂ ಶಾಸಕಿ ಆಶಾಕುಮಾರಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಿಮ್ಲಾಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿದ್ದು, ಈ ವೇಳೆ ಕಾಂಗ್ರೆಸ್ ಕಚೇರಿ ಒಳಪ್ರವೇಶಿಸಲು ಆಶಾ ಯತ್ನಿಸಿದ್ದು, ಆಗ ತಡೆದಿದ್ದೇನೆ. ಆದರೆ ಇದರಿಂದ ಕುಪಿತರಾದ ಶಾಸಕಿ ನನಗೆ ಹಲ್ಲೆ ಮಾಡಿದ್ದಾರಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೇದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೇದೆ ನೀಡಿದ ದೂರಿನ ಅನ್ವಯ ಆಶಾ ಕುಮಾರಿ ವಿರುದ್ಧ ಭಾರತೀಯ ದಂಡ ಸಂಹಿತೆ 353 ಮತ್ತು 332 (ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿ ಮೇಲೆ ಹಲ್ಲೆ ಮಾಡುವುದು ಅಪರಾಧ) ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಶಾ ಕುಮಾರಿ ಅವರ ಕ್ರಮವನ್ನು ಖಂಡಿಸಿದ್ದಾರೆ. ಶಾಸಕಿ ಆಶಾ ಕುಮಾರಿ ಮಾಡಿರುವುದು ಸರಿಯಲ್ಲ, ಇದು ಸಿಟ್ಟು ಹೊರಹೊಮ್ಮಿಸುವ ಕ್ರಮವಲ್ಲ. ಒಬ್ಬರ ಮೇಲೆ ಕೈ ಎತ್ತುವ ಹಕ್ಕು ಯಾರಿಗೂ ಇಲ್ಲ, ಇದು ಕಾಂಗ್ರೆಸ್ಸಿನ ಸಂಸ್ಕೃತಿಯೂ ಅಲ್ಲ” ಎಂದು ಹೇಳಿದ್ದಾರೆ.

ಈ ಕುರಿತು ಭಾರಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಆಶಾ ಕುಮಾರಿ ಪೇದೆಯ ಕ್ಷಮೆ ಕೇಳಿದ್ದು, ನಾನು ಕಚೇರಿ ಪ್ರವೇಶಿಸುವಾಗ ಪೇದೆ ತಳ್ಳಿದ್ದಾರೆ. ಇದರಿಂದ ನನ್ನ ಕೋಪ ತಡೆದುಕೊಳ್ಳದೆ ಹೊಡೆದೆ. ಈ ಕುರಿತು ವಿಷಾದವಿದೆ” ಎಂದಿದ್ದಾರೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search