• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾರ್ಗಿಲ್ ಯುದ್ಧದ ಹುತಾತ್ಮನ ಯೋಧನ ಪತ್ನಿಯನ್ನೇ ಹೀಗೆ ನಡೆಸಿಕೊಳ್ಳುವುದು ಸರೀನಾ?

TNN Correspondent Posted On December 31, 2017


  • Share On Facebook
  • Tweet It

ಚಂಡೀಗಡ: 1999ರ ಕಾರ್ಗಿಲ್ ಯುದ್ಧದ ವಿಜಯ ಎಂದರೆ ಪ್ರತಿ ಭಾರತೀಯನೂ ಹೆಮ್ಮೆಪಡುತ್ತಾನೆ. ಹೀಗೆ ಹೆಮ್ಮಪಡುವ ಹಿಂದೆ ಹಲವು ಯೋಧರು ಹುತಾತ್ಮರಾಗಿದ್ದಾರೆ ಎಂಬುದನ್ನು ನಾವು ಪ್ರತಿಕ್ಷಣ ನೆನಪಿಲ್ಲಡಬೇಕು ಹಾಗೂ ಅವರಿಗೆ ಋಣಿಯಾಗಿರಬೇಕು.

ಆದರೆ ಹೀಗೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧನ ಪತ್ನಿ ಬಳಿ ಆಧಾರ್ ಕಾರ್ಡ್ ಇಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಹರಿಯಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಲಾಗಿದೆ ಎಂದರೆ ನಂಬಲೇಬೇಕು ಹಾಗೂ ಇದನ್ನು ಎಲ್ಲರೂ ಖಂಡಿಸಲೇಬೇಕು.

ಹೌದು, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣಬಿಟ್ಟ ಯೋಧ ವಿ.ಎನ್.ಥಾಪರ್ ಅವರ ಪತ್ನಿ ಸೋನಿಪತ್ ನ ಆಸ್ಪತ್ರೆಗೆ ತೆರಳಿದ್ದು, ಸಿಬ್ಬಂದಿ ಕುಟುಂಬಸ್ಥರಿಗೆ ಮಹಿಳೆಯ ಆಧಾರ್ ಕಾರ್ಡ್ ಕೇಳಿದ್ದಾರೆ. ಆಗ ಅವರ ಆಧಾರ್ ಕಾರ್ಡ್ ಇಲ್ಲ ಎಂದು ಹೇಳಿದ್ದು, ಇದೊಂದೇ ಕಾರಣಕ್ಕೆ ಚಿಕಿತ್ಸೆ ನೀಡಿಲ್ಲ ಎಂದು ಯೋಧನ ಪತ್ನಿಯ ಸಂಬಂಧಿಕರು ಆರೋಪಿಸಿದ್ದಾರೆ.

ಘಟನೆ ಕುರಿತು ಮಾತನಾಡಿರುವ ವಿ.ಎನ್.ಥಾಪರ್ ತಂದೆ ವಿಜಯಂತ್ ಥಾಪರ್, “ಆಸ್ಪತ್ರೆಯಲ್ಲಿ ಹೀಗೆ ವರ್ತಿಸಿದ್ದು ನನಗೆ ಅಚ್ಚರಿ ಹಾಗೂ ಅಸಹ್ಯ ಹುಟಿಸಿದೆ. ನಾವು ಮಾನವ ಜೀವನದಿಂದ ದೂರ ಉಳಿದಿದ್ದೇವೋ ಏನೋ ಎನಿಸುತ್ತಿದೆ. ಇದು ಸೈನಿಕರ ನೈತಿಕತೆಯನ್ನೇ ಘಾಸಿಗೊಳಿಸುವಂತಹ ಘಟನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತ್ತ ಘಟನೆ ಕುರಿತು ಸುದ್ದಿ ಹಾಗೂ ಆಕ್ರೋಶ ವ್ಯಕ್ತವಾಗುತ್ತಲೇ ಎಚ್ಚೆತ್ತುಕೊಂಡಿರುವ ಸರ್ಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ನಮ್ಮ ಇಲಾಖೆ ತನಿಖೆ ನಡೆಸುತ್ತದೆ. ಇಂಥ ಪ್ರಕರಣ ತಡೆಯಲೆಂದೇ ಕೇಂದ್ರ ಸರ್ಕಾರ ಕ್ಲಿನಿಕಲ್ ಎಸ್ಟಾಬ್ಲಿಷ್ ಮೆಂಟ್ ಆ್ಯಕ್ಟ್ ಜಾರಿಗೆ ಸೂಚಿಸಿದೆ. ಆದರೂ ಪ್ರಕರಣ ನಡೆದಿರುವುದು ಸರಿಯಲ್ಲ. ತನಿಖೆ ನಡೆಸಲಾಗುವುದು” ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೇ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
Tulunadu News March 23, 2023
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
Leave A Reply

  • Recent Posts

    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
  • Popular Posts

    • 1
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 2
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 3
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 4
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 5
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search