• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾರ್ಗಿಲ್ ಯುದ್ಧದ ಹುತಾತ್ಮನ ಯೋಧನ ಪತ್ನಿಯನ್ನೇ ಹೀಗೆ ನಡೆಸಿಕೊಳ್ಳುವುದು ಸರೀನಾ?

TNN Correspondent Posted On December 31, 2017
0


0
Shares
  • Share On Facebook
  • Tweet It

ಚಂಡೀಗಡ: 1999ರ ಕಾರ್ಗಿಲ್ ಯುದ್ಧದ ವಿಜಯ ಎಂದರೆ ಪ್ರತಿ ಭಾರತೀಯನೂ ಹೆಮ್ಮೆಪಡುತ್ತಾನೆ. ಹೀಗೆ ಹೆಮ್ಮಪಡುವ ಹಿಂದೆ ಹಲವು ಯೋಧರು ಹುತಾತ್ಮರಾಗಿದ್ದಾರೆ ಎಂಬುದನ್ನು ನಾವು ಪ್ರತಿಕ್ಷಣ ನೆನಪಿಲ್ಲಡಬೇಕು ಹಾಗೂ ಅವರಿಗೆ ಋಣಿಯಾಗಿರಬೇಕು.

ಆದರೆ ಹೀಗೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧನ ಪತ್ನಿ ಬಳಿ ಆಧಾರ್ ಕಾರ್ಡ್ ಇಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಹರಿಯಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಲಾಗಿದೆ ಎಂದರೆ ನಂಬಲೇಬೇಕು ಹಾಗೂ ಇದನ್ನು ಎಲ್ಲರೂ ಖಂಡಿಸಲೇಬೇಕು.

ಹೌದು, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣಬಿಟ್ಟ ಯೋಧ ವಿ.ಎನ್.ಥಾಪರ್ ಅವರ ಪತ್ನಿ ಸೋನಿಪತ್ ನ ಆಸ್ಪತ್ರೆಗೆ ತೆರಳಿದ್ದು, ಸಿಬ್ಬಂದಿ ಕುಟುಂಬಸ್ಥರಿಗೆ ಮಹಿಳೆಯ ಆಧಾರ್ ಕಾರ್ಡ್ ಕೇಳಿದ್ದಾರೆ. ಆಗ ಅವರ ಆಧಾರ್ ಕಾರ್ಡ್ ಇಲ್ಲ ಎಂದು ಹೇಳಿದ್ದು, ಇದೊಂದೇ ಕಾರಣಕ್ಕೆ ಚಿಕಿತ್ಸೆ ನೀಡಿಲ್ಲ ಎಂದು ಯೋಧನ ಪತ್ನಿಯ ಸಂಬಂಧಿಕರು ಆರೋಪಿಸಿದ್ದಾರೆ.

ಘಟನೆ ಕುರಿತು ಮಾತನಾಡಿರುವ ವಿ.ಎನ್.ಥಾಪರ್ ತಂದೆ ವಿಜಯಂತ್ ಥಾಪರ್, “ಆಸ್ಪತ್ರೆಯಲ್ಲಿ ಹೀಗೆ ವರ್ತಿಸಿದ್ದು ನನಗೆ ಅಚ್ಚರಿ ಹಾಗೂ ಅಸಹ್ಯ ಹುಟಿಸಿದೆ. ನಾವು ಮಾನವ ಜೀವನದಿಂದ ದೂರ ಉಳಿದಿದ್ದೇವೋ ಏನೋ ಎನಿಸುತ್ತಿದೆ. ಇದು ಸೈನಿಕರ ನೈತಿಕತೆಯನ್ನೇ ಘಾಸಿಗೊಳಿಸುವಂತಹ ಘಟನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತ್ತ ಘಟನೆ ಕುರಿತು ಸುದ್ದಿ ಹಾಗೂ ಆಕ್ರೋಶ ವ್ಯಕ್ತವಾಗುತ್ತಲೇ ಎಚ್ಚೆತ್ತುಕೊಂಡಿರುವ ಸರ್ಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ನಮ್ಮ ಇಲಾಖೆ ತನಿಖೆ ನಡೆಸುತ್ತದೆ. ಇಂಥ ಪ್ರಕರಣ ತಡೆಯಲೆಂದೇ ಕೇಂದ್ರ ಸರ್ಕಾರ ಕ್ಲಿನಿಕಲ್ ಎಸ್ಟಾಬ್ಲಿಷ್ ಮೆಂಟ್ ಆ್ಯಕ್ಟ್ ಜಾರಿಗೆ ಸೂಚಿಸಿದೆ. ಆದರೂ ಪ್ರಕರಣ ನಡೆದಿರುವುದು ಸರಿಯಲ್ಲ. ತನಿಖೆ ನಡೆಸಲಾಗುವುದು” ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೇ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search