• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾರ್ಗಿಲ್ ಯುದ್ಧದ ಹುತಾತ್ಮನ ಯೋಧನ ಪತ್ನಿಯನ್ನೇ ಹೀಗೆ ನಡೆಸಿಕೊಳ್ಳುವುದು ಸರೀನಾ?

TNN Correspondent Posted On December 31, 2017
0


0
Shares
  • Share On Facebook
  • Tweet It

ಚಂಡೀಗಡ: 1999ರ ಕಾರ್ಗಿಲ್ ಯುದ್ಧದ ವಿಜಯ ಎಂದರೆ ಪ್ರತಿ ಭಾರತೀಯನೂ ಹೆಮ್ಮೆಪಡುತ್ತಾನೆ. ಹೀಗೆ ಹೆಮ್ಮಪಡುವ ಹಿಂದೆ ಹಲವು ಯೋಧರು ಹುತಾತ್ಮರಾಗಿದ್ದಾರೆ ಎಂಬುದನ್ನು ನಾವು ಪ್ರತಿಕ್ಷಣ ನೆನಪಿಲ್ಲಡಬೇಕು ಹಾಗೂ ಅವರಿಗೆ ಋಣಿಯಾಗಿರಬೇಕು.

ಆದರೆ ಹೀಗೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧನ ಪತ್ನಿ ಬಳಿ ಆಧಾರ್ ಕಾರ್ಡ್ ಇಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಹರಿಯಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಲಾಗಿದೆ ಎಂದರೆ ನಂಬಲೇಬೇಕು ಹಾಗೂ ಇದನ್ನು ಎಲ್ಲರೂ ಖಂಡಿಸಲೇಬೇಕು.

ಹೌದು, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣಬಿಟ್ಟ ಯೋಧ ವಿ.ಎನ್.ಥಾಪರ್ ಅವರ ಪತ್ನಿ ಸೋನಿಪತ್ ನ ಆಸ್ಪತ್ರೆಗೆ ತೆರಳಿದ್ದು, ಸಿಬ್ಬಂದಿ ಕುಟುಂಬಸ್ಥರಿಗೆ ಮಹಿಳೆಯ ಆಧಾರ್ ಕಾರ್ಡ್ ಕೇಳಿದ್ದಾರೆ. ಆಗ ಅವರ ಆಧಾರ್ ಕಾರ್ಡ್ ಇಲ್ಲ ಎಂದು ಹೇಳಿದ್ದು, ಇದೊಂದೇ ಕಾರಣಕ್ಕೆ ಚಿಕಿತ್ಸೆ ನೀಡಿಲ್ಲ ಎಂದು ಯೋಧನ ಪತ್ನಿಯ ಸಂಬಂಧಿಕರು ಆರೋಪಿಸಿದ್ದಾರೆ.

ಘಟನೆ ಕುರಿತು ಮಾತನಾಡಿರುವ ವಿ.ಎನ್.ಥಾಪರ್ ತಂದೆ ವಿಜಯಂತ್ ಥಾಪರ್, “ಆಸ್ಪತ್ರೆಯಲ್ಲಿ ಹೀಗೆ ವರ್ತಿಸಿದ್ದು ನನಗೆ ಅಚ್ಚರಿ ಹಾಗೂ ಅಸಹ್ಯ ಹುಟಿಸಿದೆ. ನಾವು ಮಾನವ ಜೀವನದಿಂದ ದೂರ ಉಳಿದಿದ್ದೇವೋ ಏನೋ ಎನಿಸುತ್ತಿದೆ. ಇದು ಸೈನಿಕರ ನೈತಿಕತೆಯನ್ನೇ ಘಾಸಿಗೊಳಿಸುವಂತಹ ಘಟನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತ್ತ ಘಟನೆ ಕುರಿತು ಸುದ್ದಿ ಹಾಗೂ ಆಕ್ರೋಶ ವ್ಯಕ್ತವಾಗುತ್ತಲೇ ಎಚ್ಚೆತ್ತುಕೊಂಡಿರುವ ಸರ್ಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ನಮ್ಮ ಇಲಾಖೆ ತನಿಖೆ ನಡೆಸುತ್ತದೆ. ಇಂಥ ಪ್ರಕರಣ ತಡೆಯಲೆಂದೇ ಕೇಂದ್ರ ಸರ್ಕಾರ ಕ್ಲಿನಿಕಲ್ ಎಸ್ಟಾಬ್ಲಿಷ್ ಮೆಂಟ್ ಆ್ಯಕ್ಟ್ ಜಾರಿಗೆ ಸೂಚಿಸಿದೆ. ಆದರೂ ಪ್ರಕರಣ ನಡೆದಿರುವುದು ಸರಿಯಲ್ಲ. ತನಿಖೆ ನಡೆಸಲಾಗುವುದು” ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೇ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search