• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾರ್ಗಿಲ್ ಯುದ್ಧದ ಹುತಾತ್ಮನ ಯೋಧನ ಪತ್ನಿಯನ್ನೇ ಹೀಗೆ ನಡೆಸಿಕೊಳ್ಳುವುದು ಸರೀನಾ?

TNN Correspondent Posted On December 31, 2017
0


0
Shares
  • Share On Facebook
  • Tweet It

ಚಂಡೀಗಡ: 1999ರ ಕಾರ್ಗಿಲ್ ಯುದ್ಧದ ವಿಜಯ ಎಂದರೆ ಪ್ರತಿ ಭಾರತೀಯನೂ ಹೆಮ್ಮೆಪಡುತ್ತಾನೆ. ಹೀಗೆ ಹೆಮ್ಮಪಡುವ ಹಿಂದೆ ಹಲವು ಯೋಧರು ಹುತಾತ್ಮರಾಗಿದ್ದಾರೆ ಎಂಬುದನ್ನು ನಾವು ಪ್ರತಿಕ್ಷಣ ನೆನಪಿಲ್ಲಡಬೇಕು ಹಾಗೂ ಅವರಿಗೆ ಋಣಿಯಾಗಿರಬೇಕು.

ಆದರೆ ಹೀಗೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧನ ಪತ್ನಿ ಬಳಿ ಆಧಾರ್ ಕಾರ್ಡ್ ಇಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಹರಿಯಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಲಾಗಿದೆ ಎಂದರೆ ನಂಬಲೇಬೇಕು ಹಾಗೂ ಇದನ್ನು ಎಲ್ಲರೂ ಖಂಡಿಸಲೇಬೇಕು.

ಹೌದು, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣಬಿಟ್ಟ ಯೋಧ ವಿ.ಎನ್.ಥಾಪರ್ ಅವರ ಪತ್ನಿ ಸೋನಿಪತ್ ನ ಆಸ್ಪತ್ರೆಗೆ ತೆರಳಿದ್ದು, ಸಿಬ್ಬಂದಿ ಕುಟುಂಬಸ್ಥರಿಗೆ ಮಹಿಳೆಯ ಆಧಾರ್ ಕಾರ್ಡ್ ಕೇಳಿದ್ದಾರೆ. ಆಗ ಅವರ ಆಧಾರ್ ಕಾರ್ಡ್ ಇಲ್ಲ ಎಂದು ಹೇಳಿದ್ದು, ಇದೊಂದೇ ಕಾರಣಕ್ಕೆ ಚಿಕಿತ್ಸೆ ನೀಡಿಲ್ಲ ಎಂದು ಯೋಧನ ಪತ್ನಿಯ ಸಂಬಂಧಿಕರು ಆರೋಪಿಸಿದ್ದಾರೆ.

ಘಟನೆ ಕುರಿತು ಮಾತನಾಡಿರುವ ವಿ.ಎನ್.ಥಾಪರ್ ತಂದೆ ವಿಜಯಂತ್ ಥಾಪರ್, “ಆಸ್ಪತ್ರೆಯಲ್ಲಿ ಹೀಗೆ ವರ್ತಿಸಿದ್ದು ನನಗೆ ಅಚ್ಚರಿ ಹಾಗೂ ಅಸಹ್ಯ ಹುಟಿಸಿದೆ. ನಾವು ಮಾನವ ಜೀವನದಿಂದ ದೂರ ಉಳಿದಿದ್ದೇವೋ ಏನೋ ಎನಿಸುತ್ತಿದೆ. ಇದು ಸೈನಿಕರ ನೈತಿಕತೆಯನ್ನೇ ಘಾಸಿಗೊಳಿಸುವಂತಹ ಘಟನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತ್ತ ಘಟನೆ ಕುರಿತು ಸುದ್ದಿ ಹಾಗೂ ಆಕ್ರೋಶ ವ್ಯಕ್ತವಾಗುತ್ತಲೇ ಎಚ್ಚೆತ್ತುಕೊಂಡಿರುವ ಸರ್ಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ನಮ್ಮ ಇಲಾಖೆ ತನಿಖೆ ನಡೆಸುತ್ತದೆ. ಇಂಥ ಪ್ರಕರಣ ತಡೆಯಲೆಂದೇ ಕೇಂದ್ರ ಸರ್ಕಾರ ಕ್ಲಿನಿಕಲ್ ಎಸ್ಟಾಬ್ಲಿಷ್ ಮೆಂಟ್ ಆ್ಯಕ್ಟ್ ಜಾರಿಗೆ ಸೂಚಿಸಿದೆ. ಆದರೂ ಪ್ರಕರಣ ನಡೆದಿರುವುದು ಸರಿಯಲ್ಲ. ತನಿಖೆ ನಡೆಸಲಾಗುವುದು” ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೇ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search