• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾರ್ಗಿಲ್ ಯುದ್ಧದ ಹುತಾತ್ಮನ ಯೋಧನ ಪತ್ನಿಯನ್ನೇ ಹೀಗೆ ನಡೆಸಿಕೊಳ್ಳುವುದು ಸರೀನಾ?

TNN Correspondent Posted On December 31, 2017
0


0
Shares
  • Share On Facebook
  • Tweet It

ಚಂಡೀಗಡ: 1999ರ ಕಾರ್ಗಿಲ್ ಯುದ್ಧದ ವಿಜಯ ಎಂದರೆ ಪ್ರತಿ ಭಾರತೀಯನೂ ಹೆಮ್ಮೆಪಡುತ್ತಾನೆ. ಹೀಗೆ ಹೆಮ್ಮಪಡುವ ಹಿಂದೆ ಹಲವು ಯೋಧರು ಹುತಾತ್ಮರಾಗಿದ್ದಾರೆ ಎಂಬುದನ್ನು ನಾವು ಪ್ರತಿಕ್ಷಣ ನೆನಪಿಲ್ಲಡಬೇಕು ಹಾಗೂ ಅವರಿಗೆ ಋಣಿಯಾಗಿರಬೇಕು.

ಆದರೆ ಹೀಗೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧನ ಪತ್ನಿ ಬಳಿ ಆಧಾರ್ ಕಾರ್ಡ್ ಇಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಹರಿಯಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಲಾಗಿದೆ ಎಂದರೆ ನಂಬಲೇಬೇಕು ಹಾಗೂ ಇದನ್ನು ಎಲ್ಲರೂ ಖಂಡಿಸಲೇಬೇಕು.

ಹೌದು, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣಬಿಟ್ಟ ಯೋಧ ವಿ.ಎನ್.ಥಾಪರ್ ಅವರ ಪತ್ನಿ ಸೋನಿಪತ್ ನ ಆಸ್ಪತ್ರೆಗೆ ತೆರಳಿದ್ದು, ಸಿಬ್ಬಂದಿ ಕುಟುಂಬಸ್ಥರಿಗೆ ಮಹಿಳೆಯ ಆಧಾರ್ ಕಾರ್ಡ್ ಕೇಳಿದ್ದಾರೆ. ಆಗ ಅವರ ಆಧಾರ್ ಕಾರ್ಡ್ ಇಲ್ಲ ಎಂದು ಹೇಳಿದ್ದು, ಇದೊಂದೇ ಕಾರಣಕ್ಕೆ ಚಿಕಿತ್ಸೆ ನೀಡಿಲ್ಲ ಎಂದು ಯೋಧನ ಪತ್ನಿಯ ಸಂಬಂಧಿಕರು ಆರೋಪಿಸಿದ್ದಾರೆ.

ಘಟನೆ ಕುರಿತು ಮಾತನಾಡಿರುವ ವಿ.ಎನ್.ಥಾಪರ್ ತಂದೆ ವಿಜಯಂತ್ ಥಾಪರ್, “ಆಸ್ಪತ್ರೆಯಲ್ಲಿ ಹೀಗೆ ವರ್ತಿಸಿದ್ದು ನನಗೆ ಅಚ್ಚರಿ ಹಾಗೂ ಅಸಹ್ಯ ಹುಟಿಸಿದೆ. ನಾವು ಮಾನವ ಜೀವನದಿಂದ ದೂರ ಉಳಿದಿದ್ದೇವೋ ಏನೋ ಎನಿಸುತ್ತಿದೆ. ಇದು ಸೈನಿಕರ ನೈತಿಕತೆಯನ್ನೇ ಘಾಸಿಗೊಳಿಸುವಂತಹ ಘಟನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತ್ತ ಘಟನೆ ಕುರಿತು ಸುದ್ದಿ ಹಾಗೂ ಆಕ್ರೋಶ ವ್ಯಕ್ತವಾಗುತ್ತಲೇ ಎಚ್ಚೆತ್ತುಕೊಂಡಿರುವ ಸರ್ಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ನಮ್ಮ ಇಲಾಖೆ ತನಿಖೆ ನಡೆಸುತ್ತದೆ. ಇಂಥ ಪ್ರಕರಣ ತಡೆಯಲೆಂದೇ ಕೇಂದ್ರ ಸರ್ಕಾರ ಕ್ಲಿನಿಕಲ್ ಎಸ್ಟಾಬ್ಲಿಷ್ ಮೆಂಟ್ ಆ್ಯಕ್ಟ್ ಜಾರಿಗೆ ಸೂಚಿಸಿದೆ. ಆದರೂ ಪ್ರಕರಣ ನಡೆದಿರುವುದು ಸರಿಯಲ್ಲ. ತನಿಖೆ ನಡೆಸಲಾಗುವುದು” ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೇ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search