• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತಕ್ಕೆ ರಾಜತಾಂತ್ರಿಕ ಜಯ: ಸಯೀದ್ ರ್ಯಾಲಿಯಲ್ಲಿ ಭಾಗವಹಿಸಿದ ಪ್ಯಾಲೆಸ್ತೀನ್ ರಾಯಭಾರಿ ವಾಪಸ್

TNN Correspondent Posted On December 31, 2017
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದ ರ್ಯಾಲಿಯಲ್ಲಿ 26/11 ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ಜತೆ ವೇದಿಕೆ ಹಂಚಿಕೊಂಡಿದ್ದ ಪ್ಯಾಲೆಸ್ತೀನ್ ರಾಯಭಾರಿಯನ್ನು ಪ್ಯಾಲೆಸ್ತೀನ್ ಭಾರತದ ಒತ್ತಡಕ್ಕೆ ಮಣಿದು ವಾಪಸ್ ಕರೆಸಿಕೊಂಡಿದೆ.

ಕಟ್ಟರ್ ಮುಸ್ಲಿಂ ರಾಷ್ಟ್ರವಾಗಿರುವ ಪ್ಯಾಲೆಸ್ತೀನ್ ಹಫೀಜ್ ಸಯೀದ್ ನನ್ನು ದೂರವಿಟ್ಟಿದ್ದು, ಭಾರತಕ್ಕೆ ದೊರೆತ  ರಾಜತಾಂತ್ರಿಕ ಜಯವಾಗಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಪಾಕಿಸ್ತಾನ ಮತ್ತು ಉಗ್ರ ಹಫೀಜ್ ಸಯೀದ್ ಗೆ ಕಠೋರ ಸಂದೇಶ ನೀಡಿದ್ದಾರೆ.

ಪಾಕಿಸ್ತಾನದಲ್ಲಿ ನಡೆದ ರ್ಯಾಲಿಯಲ್ಲಿ ಉಗ್ರ ಹಫೀಜ್ ಸಯೀದ್ ಜತೆ ಪ್ಯಾಲೆಸ್ತೀನ್ ರಾಯಭಾರಿ ವಲೀದ್ ಅಬು ವಾಲಿ ವೇದಿಕೆ  ಹಂಚಿಕೊಂಡಿದ್ದ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಭಾರತದ ಆಕ್ಷೇಪಕ್ಕೆ ಪ್ರತಿಕ್ರಿಯೆ ನೀಡಿರುವ ಭಾರತದಲ್ಲಿರುವ ಪ್ಯಾಲೆಸ್ತೀನ್ ರಾಯಭಾರಿ ಅದ್ನಾನ್ ಅಬು ಅಲ್ ಹೈಜಾ ‘ಭಾರತದ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಪ್ಯಾಲೆಸ್ತೀನ್ ಸದಾ ಬೆಂಬಲಿಸುತ್ತದೆ. ರಾಯಭಾರಿಯನ್ನು ವಾಪಸ್ಸ್ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಇತ್ತೀಚೆಗೆ ಜೇರುಸೆಲಂ ಇಸ್ರೇಲ್ ರಾಜಧಾನಿ ಎಂದು ಘೋಷಿಸಿದ್ದ ಅಮೆರಿಕಾದ ನಿರ್ಧಾರಕ್ಕೆ ಭಾರತ ಅಮೆರಿಕ ವಿರುದ್ಧ ನಿಲುವು ತಾಳಿತ್ತು. ಅಲ್ಲದೇ ಪ್ಯಾಲೆಸ್ತೀನ್ ಗೆ ಬೆಂಬಲ ಸೂಚಿಸಿತ್ತು. ಅಂದು ಭಾರತ ನೀಡಿದ ಬೆಂಬಲದಿಂದ ಇಂದು ಉಗ್ರ ಹಫೀಜ್ ಸಯೀದ್ ಜತೆ ವೇದಿಕೆ ಹಂಚಿಕೊಂಡ ರಾಯಭಾರಿ ಅಬು ವಲಿಯನ್ನು ವಾಪಸ್ಸ್ ಕರೆಸಿಕೊಂಡಿದ್ದು, ರಾಜತಾಂತ್ರಿಕವಾಗಿ ಮತ್ತು ವಿಶ್ವಮಟ್ಟದಲ್ಲಿ ಭಾರತಕ್ಕೆ ದೊರೆತ ಗೌರವ ಎಂದು ವಿಶ್ಲೇಷಣೆ ಮಾಡಲಾಗಿದೆ. ಮುಂದಿನ ವರ್ಷ ಪ್ರಧಾನಿ ನರೇಂದ್ರ ಮೋದಿ ಪ್ಯಾಲೆಸ್ತೀನ್ ಗೆ ಭೇಟಿ ನೀಡುತ್ತಿರುವುದು ಕೂಡ ಪ್ಯಾಲೆಸ್ತೀನ್ ಈ ನಿರ್ಧಾರಕ್ಕೆ ಕೈಗೊಳ್ಳಲು ಕಾರಣ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search