• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತಕ್ಕೆ ರಾಜತಾಂತ್ರಿಕ ಜಯ: ಸಯೀದ್ ರ್ಯಾಲಿಯಲ್ಲಿ ಭಾಗವಹಿಸಿದ ಪ್ಯಾಲೆಸ್ತೀನ್ ರಾಯಭಾರಿ ವಾಪಸ್

TNN Correspondent Posted On December 31, 2017
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದ ರ್ಯಾಲಿಯಲ್ಲಿ 26/11 ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ಜತೆ ವೇದಿಕೆ ಹಂಚಿಕೊಂಡಿದ್ದ ಪ್ಯಾಲೆಸ್ತೀನ್ ರಾಯಭಾರಿಯನ್ನು ಪ್ಯಾಲೆಸ್ತೀನ್ ಭಾರತದ ಒತ್ತಡಕ್ಕೆ ಮಣಿದು ವಾಪಸ್ ಕರೆಸಿಕೊಂಡಿದೆ.

ಕಟ್ಟರ್ ಮುಸ್ಲಿಂ ರಾಷ್ಟ್ರವಾಗಿರುವ ಪ್ಯಾಲೆಸ್ತೀನ್ ಹಫೀಜ್ ಸಯೀದ್ ನನ್ನು ದೂರವಿಟ್ಟಿದ್ದು, ಭಾರತಕ್ಕೆ ದೊರೆತ  ರಾಜತಾಂತ್ರಿಕ ಜಯವಾಗಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಪಾಕಿಸ್ತಾನ ಮತ್ತು ಉಗ್ರ ಹಫೀಜ್ ಸಯೀದ್ ಗೆ ಕಠೋರ ಸಂದೇಶ ನೀಡಿದ್ದಾರೆ.

ಪಾಕಿಸ್ತಾನದಲ್ಲಿ ನಡೆದ ರ್ಯಾಲಿಯಲ್ಲಿ ಉಗ್ರ ಹಫೀಜ್ ಸಯೀದ್ ಜತೆ ಪ್ಯಾಲೆಸ್ತೀನ್ ರಾಯಭಾರಿ ವಲೀದ್ ಅಬು ವಾಲಿ ವೇದಿಕೆ  ಹಂಚಿಕೊಂಡಿದ್ದ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಭಾರತದ ಆಕ್ಷೇಪಕ್ಕೆ ಪ್ರತಿಕ್ರಿಯೆ ನೀಡಿರುವ ಭಾರತದಲ್ಲಿರುವ ಪ್ಯಾಲೆಸ್ತೀನ್ ರಾಯಭಾರಿ ಅದ್ನಾನ್ ಅಬು ಅಲ್ ಹೈಜಾ ‘ಭಾರತದ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಪ್ಯಾಲೆಸ್ತೀನ್ ಸದಾ ಬೆಂಬಲಿಸುತ್ತದೆ. ರಾಯಭಾರಿಯನ್ನು ವಾಪಸ್ಸ್ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಇತ್ತೀಚೆಗೆ ಜೇರುಸೆಲಂ ಇಸ್ರೇಲ್ ರಾಜಧಾನಿ ಎಂದು ಘೋಷಿಸಿದ್ದ ಅಮೆರಿಕಾದ ನಿರ್ಧಾರಕ್ಕೆ ಭಾರತ ಅಮೆರಿಕ ವಿರುದ್ಧ ನಿಲುವು ತಾಳಿತ್ತು. ಅಲ್ಲದೇ ಪ್ಯಾಲೆಸ್ತೀನ್ ಗೆ ಬೆಂಬಲ ಸೂಚಿಸಿತ್ತು. ಅಂದು ಭಾರತ ನೀಡಿದ ಬೆಂಬಲದಿಂದ ಇಂದು ಉಗ್ರ ಹಫೀಜ್ ಸಯೀದ್ ಜತೆ ವೇದಿಕೆ ಹಂಚಿಕೊಂಡ ರಾಯಭಾರಿ ಅಬು ವಲಿಯನ್ನು ವಾಪಸ್ಸ್ ಕರೆಸಿಕೊಂಡಿದ್ದು, ರಾಜತಾಂತ್ರಿಕವಾಗಿ ಮತ್ತು ವಿಶ್ವಮಟ್ಟದಲ್ಲಿ ಭಾರತಕ್ಕೆ ದೊರೆತ ಗೌರವ ಎಂದು ವಿಶ್ಲೇಷಣೆ ಮಾಡಲಾಗಿದೆ. ಮುಂದಿನ ವರ್ಷ ಪ್ರಧಾನಿ ನರೇಂದ್ರ ಮೋದಿ ಪ್ಯಾಲೆಸ್ತೀನ್ ಗೆ ಭೇಟಿ ನೀಡುತ್ತಿರುವುದು ಕೂಡ ಪ್ಯಾಲೆಸ್ತೀನ್ ಈ ನಿರ್ಧಾರಕ್ಕೆ ಕೈಗೊಳ್ಳಲು ಕಾರಣ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search