• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಈ ಬಾರಿಯ ಗಣರಾಜ್ಯೋತ್ಸವಕ್ಕೆ ಆಸಿಯಾನ್ ದೇಶಗಳ 10 ಮುಖಂಡರು ಅತಿಥಿಗಳು: ಮನ್ ಕೀ ಬಾತ್ ನಲ್ಲಿ ಮೋದಿ

TNN Correspondent Posted On December 31, 2017


  • Share On Facebook
  • Tweet It

ದೆಹಲಿ: ಈ ಬಾರಿಯ ಗಣರಾಜ್ಯೋತ್ಸವ ದಿನದಂದು ಆಸಿಯಾನ್ ರಾಷ್ಟ್ರಗಳ 10 ಪ್ರಮುಖ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಮನ್ ಕೀ ಬಾತ್ ಸರಣಿಯ ವರ್ಷದ ಕೊನೆಯ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣರಾಜ್ಯೋತ್ಸವ ನಮ್ಮ ದೇಶದ ಪಾಲಿಗೆ ಐತಿಹಾಸಿಕ. ಈ ಬಾರಿಯ ಆಚರಣೆ ವೇಳೆ ಆಸಿಯಾನ್ ದೇಶಗಳ ನಾಯಕರು ಪಾಲ್ಗೊಳ್ಳಲಿದ್ದಾರೆ. ದೇಶದ ಇತಿಹಾಸದಲ್ಲೇ ಆಸಿಯಾನ್ ನಾಯಕರು ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡಿಲ್ಲ. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದು ಭಾರತದ ಪಾಲಿಗೆ ಐತಿಹಾಸಿಕವಾಗಲಿದೆ ಎಂದಿದ್ದಾರೆ.

ಭಾರತದ ಅಭಿವೃದ್ಧಿ ಕುರಿತು ಸಹ ಮಾತನಾಡಿದ ಅವರು, ನವ ಭಾರತದ ನಿರ್ಮಾಣವೇ ನಮ್ಮ ಉದ್ದೇಶವಾಗಿದ್ದು, ಜಾತಿ, ಕೋಮುವಾದ, ಭ್ರಷ್ಟಾಚಾರ ಹಾಗೂ ಬಡತನದಿಂದ ಮುಕ್ತಗೊಳಿಸುವುದೇ ಆಗಿದೆ. ನವ ಭಾರತ ಎಂದರೆ ಅಲ್ಲಿ, ಶಾಂತಿ, ಏಕತೆ, ಸದ್ಭಾವನೆ ಸ್ಥಾಪಿಸುವುದೇ ಆಗಿದೆ ಎಂದು ಘೋಷಿಸಿದ್ದಾರೆ.

ನವ ಭಾರತದ ಕಲ್ಪನೆಯಲ್ಲೇ ಮಾತನಾಡುತ್ತ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರ ಒಂದು ಮತವೂ ಅಂತಿಮ ಪಾತ್ರ ನಿರ್ವಹಿಸಲಿದ್ದು, ಆ ಒಂದು ಮತವೇ ದೇಶದ ರೂಪಾಂತರಕ್ಕೆ ಸಾಕ್ಷಿಯಾಗುತ್ತದೆ. ನವಭಾರತದ ಯುವಕರು ಈ ದಿಸೆಯಲ್ಲಿ ಮಹತ್ವದ ಪಾತ್ರ ವಹಿಸಲಿದ್ದು, ಎಲ್ಲರೂ ಮತ ಹಾಕಬೇಕು ಎಂದರು.

ನಾಳೆಯ ಜನವರಿ 1 ವಿಶೇಷ ದಿನವಾಗಿದೆ. 2000ನೇ ಇಸವಿಯಲ್ಲಿ ಜನಿಸಿದವರೆಲ್ಲರೂ ಈ ಹೊಸ ವರ್ಷಕ್ಕೆ 18 ವರ್ಷದವರಾಗಲಿದ್ದು, ಎಲ್ಲರೂ ಮತ ಹಾಕುವ ಹಕ್ಕು ಪಡೆದುಕೊಳ್ಳುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವರೆಲ್ಲರನ್ನೂ ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

 

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search