• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಈ ಬಾರಿಯ ಗಣರಾಜ್ಯೋತ್ಸವಕ್ಕೆ ಆಸಿಯಾನ್ ದೇಶಗಳ 10 ಮುಖಂಡರು ಅತಿಥಿಗಳು: ಮನ್ ಕೀ ಬಾತ್ ನಲ್ಲಿ ಮೋದಿ

TNN Correspondent Posted On December 31, 2017


  • Share On Facebook
  • Tweet It

ದೆಹಲಿ: ಈ ಬಾರಿಯ ಗಣರಾಜ್ಯೋತ್ಸವ ದಿನದಂದು ಆಸಿಯಾನ್ ರಾಷ್ಟ್ರಗಳ 10 ಪ್ರಮುಖ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಮನ್ ಕೀ ಬಾತ್ ಸರಣಿಯ ವರ್ಷದ ಕೊನೆಯ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣರಾಜ್ಯೋತ್ಸವ ನಮ್ಮ ದೇಶದ ಪಾಲಿಗೆ ಐತಿಹಾಸಿಕ. ಈ ಬಾರಿಯ ಆಚರಣೆ ವೇಳೆ ಆಸಿಯಾನ್ ದೇಶಗಳ ನಾಯಕರು ಪಾಲ್ಗೊಳ್ಳಲಿದ್ದಾರೆ. ದೇಶದ ಇತಿಹಾಸದಲ್ಲೇ ಆಸಿಯಾನ್ ನಾಯಕರು ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡಿಲ್ಲ. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದು ಭಾರತದ ಪಾಲಿಗೆ ಐತಿಹಾಸಿಕವಾಗಲಿದೆ ಎಂದಿದ್ದಾರೆ.

ಭಾರತದ ಅಭಿವೃದ್ಧಿ ಕುರಿತು ಸಹ ಮಾತನಾಡಿದ ಅವರು, ನವ ಭಾರತದ ನಿರ್ಮಾಣವೇ ನಮ್ಮ ಉದ್ದೇಶವಾಗಿದ್ದು, ಜಾತಿ, ಕೋಮುವಾದ, ಭ್ರಷ್ಟಾಚಾರ ಹಾಗೂ ಬಡತನದಿಂದ ಮುಕ್ತಗೊಳಿಸುವುದೇ ಆಗಿದೆ. ನವ ಭಾರತ ಎಂದರೆ ಅಲ್ಲಿ, ಶಾಂತಿ, ಏಕತೆ, ಸದ್ಭಾವನೆ ಸ್ಥಾಪಿಸುವುದೇ ಆಗಿದೆ ಎಂದು ಘೋಷಿಸಿದ್ದಾರೆ.

ನವ ಭಾರತದ ಕಲ್ಪನೆಯಲ್ಲೇ ಮಾತನಾಡುತ್ತ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರ ಒಂದು ಮತವೂ ಅಂತಿಮ ಪಾತ್ರ ನಿರ್ವಹಿಸಲಿದ್ದು, ಆ ಒಂದು ಮತವೇ ದೇಶದ ರೂಪಾಂತರಕ್ಕೆ ಸಾಕ್ಷಿಯಾಗುತ್ತದೆ. ನವಭಾರತದ ಯುವಕರು ಈ ದಿಸೆಯಲ್ಲಿ ಮಹತ್ವದ ಪಾತ್ರ ವಹಿಸಲಿದ್ದು, ಎಲ್ಲರೂ ಮತ ಹಾಕಬೇಕು ಎಂದರು.

ನಾಳೆಯ ಜನವರಿ 1 ವಿಶೇಷ ದಿನವಾಗಿದೆ. 2000ನೇ ಇಸವಿಯಲ್ಲಿ ಜನಿಸಿದವರೆಲ್ಲರೂ ಈ ಹೊಸ ವರ್ಷಕ್ಕೆ 18 ವರ್ಷದವರಾಗಲಿದ್ದು, ಎಲ್ಲರೂ ಮತ ಹಾಕುವ ಹಕ್ಕು ಪಡೆದುಕೊಳ್ಳುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವರೆಲ್ಲರನ್ನೂ ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

 

 

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search