• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ಬಾರಿಯ ಗಣರಾಜ್ಯೋತ್ಸವಕ್ಕೆ ಆಸಿಯಾನ್ ದೇಶಗಳ 10 ಮುಖಂಡರು ಅತಿಥಿಗಳು: ಮನ್ ಕೀ ಬಾತ್ ನಲ್ಲಿ ಮೋದಿ

TNN Correspondent Posted On December 31, 2017
0


0
Shares
  • Share On Facebook
  • Tweet It

ದೆಹಲಿ: ಈ ಬಾರಿಯ ಗಣರಾಜ್ಯೋತ್ಸವ ದಿನದಂದು ಆಸಿಯಾನ್ ರಾಷ್ಟ್ರಗಳ 10 ಪ್ರಮುಖ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಮನ್ ಕೀ ಬಾತ್ ಸರಣಿಯ ವರ್ಷದ ಕೊನೆಯ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣರಾಜ್ಯೋತ್ಸವ ನಮ್ಮ ದೇಶದ ಪಾಲಿಗೆ ಐತಿಹಾಸಿಕ. ಈ ಬಾರಿಯ ಆಚರಣೆ ವೇಳೆ ಆಸಿಯಾನ್ ದೇಶಗಳ ನಾಯಕರು ಪಾಲ್ಗೊಳ್ಳಲಿದ್ದಾರೆ. ದೇಶದ ಇತಿಹಾಸದಲ್ಲೇ ಆಸಿಯಾನ್ ನಾಯಕರು ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡಿಲ್ಲ. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದು ಭಾರತದ ಪಾಲಿಗೆ ಐತಿಹಾಸಿಕವಾಗಲಿದೆ ಎಂದಿದ್ದಾರೆ.

ಭಾರತದ ಅಭಿವೃದ್ಧಿ ಕುರಿತು ಸಹ ಮಾತನಾಡಿದ ಅವರು, ನವ ಭಾರತದ ನಿರ್ಮಾಣವೇ ನಮ್ಮ ಉದ್ದೇಶವಾಗಿದ್ದು, ಜಾತಿ, ಕೋಮುವಾದ, ಭ್ರಷ್ಟಾಚಾರ ಹಾಗೂ ಬಡತನದಿಂದ ಮುಕ್ತಗೊಳಿಸುವುದೇ ಆಗಿದೆ. ನವ ಭಾರತ ಎಂದರೆ ಅಲ್ಲಿ, ಶಾಂತಿ, ಏಕತೆ, ಸದ್ಭಾವನೆ ಸ್ಥಾಪಿಸುವುದೇ ಆಗಿದೆ ಎಂದು ಘೋಷಿಸಿದ್ದಾರೆ.

ನವ ಭಾರತದ ಕಲ್ಪನೆಯಲ್ಲೇ ಮಾತನಾಡುತ್ತ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರ ಒಂದು ಮತವೂ ಅಂತಿಮ ಪಾತ್ರ ನಿರ್ವಹಿಸಲಿದ್ದು, ಆ ಒಂದು ಮತವೇ ದೇಶದ ರೂಪಾಂತರಕ್ಕೆ ಸಾಕ್ಷಿಯಾಗುತ್ತದೆ. ನವಭಾರತದ ಯುವಕರು ಈ ದಿಸೆಯಲ್ಲಿ ಮಹತ್ವದ ಪಾತ್ರ ವಹಿಸಲಿದ್ದು, ಎಲ್ಲರೂ ಮತ ಹಾಕಬೇಕು ಎಂದರು.

ನಾಳೆಯ ಜನವರಿ 1 ವಿಶೇಷ ದಿನವಾಗಿದೆ. 2000ನೇ ಇಸವಿಯಲ್ಲಿ ಜನಿಸಿದವರೆಲ್ಲರೂ ಈ ಹೊಸ ವರ್ಷಕ್ಕೆ 18 ವರ್ಷದವರಾಗಲಿದ್ದು, ಎಲ್ಲರೂ ಮತ ಹಾಕುವ ಹಕ್ಕು ಪಡೆದುಕೊಳ್ಳುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವರೆಲ್ಲರನ್ನೂ ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

 

 

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search