• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ನರೇಂದ್ರ ಮೋದಿ ಮುಸ್ಲಿಂ ವಿರೋಧಿಯಾಗಿದ್ದರೆ ಇಷ್ಟೆಲ್ಲ ಮಾಡುತ್ತಿದ್ದರೇ ವಿರೋಧಿಗಳೇ?

ನೂತನ್ ಜೋಷಿ ಉಡುಪಿ Posted On January 1, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಒಬ್ಬ ಕೋಮುವಾದಿ ಎಂದು ಜರಿಯುತ್ತಾರೆ. ಅವರೊಬ್ಬ ಹಿಟ್ಲರ್ ಗೆ ಸಮ ಎಂದು ಪರೋಕ್ಷವಾಗಿ ಪ್ರಕಾಶ್ ರೈ ಅವರಂಥ ನಟರು ಆರೋಪಿಸುತ್ತಾರೆ. ಇನ್ನು ಮೋದಿ ಅವರು ಮುಸ್ಲಿಂ ವಿರೋಧಿ ಎಂದು ಬಿಂಬಿಸುವವರಿಗೇನು ಕಡಿಮೆಯಿಲ್ಲ.

ಹೀಗೆ ವಿರೋಧಿಸಬೇಕು, ಟೀಕಿಸಬೇಕು ಎಂಬ ಒಂದೇ ಕಾರಣಕ್ಕೆ ಬಾಯಿಗೆ ಬಂದಹಾಗೆ ಮಾತನಾಡಿದರೂ ಆರೋಪ ಮಾಡಿದರೂ ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರ ಸಬ್ ಕಾ ವಿಕಾಸ್ ಎಂಬ ತಮ್ಮ ಮನೋಭಾವ ಬಿಡದೆ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದಕ್ಕೆ ದ್ಯೋತಕವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸರ್ಕಾರ ತ್ರಿವಳಿ ತಲಾಖ್ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ಗಮನಿಸಬೇಕು. ತ್ರಿವಳಿ ತಲಾಖ್ ವಿರುದ್ಧ ಮಹಿಳೆಯರು ಸಹಿ ಆಂದೋಲನ ನಡೆಸುತ್ತಲೇ, ಪ್ರಕರಣ ನ್ಯಾಯಾಲಯದ ಮೆಟ್ಟಿಲೇರುತ್ತಲೇ ನರೇಂದ್ರ ಮೋದಿ ಅವರು ಸಹ ತ್ರಿವಳಿ ತಲಾಖ್ ಅನ್ನು ಸಾರ್ವಜನಿಕವಾಗಿ ವಿರೋಧಿಸಿದರು.

ಅಷ್ಟೇ ಅಲ್ಲ ಸುಪ್ರೀಂ ಕೊರ್ಟ್ ತ್ರಿವಳಿ ತಲಾಖ್ ನಿಷೇಧಿಸಿ ಇದರ ವಿರುದ್ಧ ಕಾನೂನು ರಚಿಸಿ ಎಂದು ನಿರ್ದೇಶನ ನೀಡಿದ ಬಳಿಕದ ಮೊದಲ ಅಧಿವೇಶನದಲ್ಲೇ, ಅಂದರೆ ಪ್ರಸ್ತುತ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೇ ತ್ರಿವಳಿ ತಲಾಖ್ ವಿರುದ್ಧ ಲೋಕಸಭೆಯಲ್ಲಿ ಅಂಗೀಕಾರ ಪಡೆಯಲಾಗಿದೆ. ಇದರಿಂದ ದೇಶದ ಲಕ್ಷಾಂತರ ಮುಸ್ಲಿಂ ಮಹಿಳೆಯರು ನಿಟ್ಟುಸಿರು ಬಿಡುವಂತಾಗಿದೆ. ಹೇಳಿ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂ ವಿರೋಧಿಯಾಗಿದ್ದರೆ ಇಷ್ಟೆಲ್ಲ ಮಾಡುತ್ತಿದ್ದರೆ?

ಇನ್ನು ಇದುವರೆಗೂ ಮುಸ್ಲಿಂ ಮಹಿಳೆಯರು ಸ್ವತಂತ್ರವಾಗಿ ಅಂದರೆ ಒಬ್ಬರು ಅಥವಾ ಮಹಿಳೆಯರ ಗುಂಪು ಪವಿತ್ರ ಹಜ್ ಯಾತ್ರೆಗೆ ತೆರಳುವಂತಿರಲಿಲ್ಲ. ಅದಕ್ಕೆ ಪುರುಷರ ಉಪಸ್ಥಿತಿ ಕಡ್ಡಾಯ ಎಂಬಂತೆ ಮಹ್ರಮ್ ಪದ್ಧತಿ ಅಸ್ತಿತ್ವದಲ್ಲಿತ್ತು. ಆದರೆ ಈ ತಾರತಮ್ಯ ಹೋಗಲಾಡಿಸಲು ದಿಟ್ಟ ಹೆಜ್ಜೆ ಇಟ್ಟ ನರೇಂದ್ರ ಮೋದಿ ಅವರು ಮಹ್ರಮ್ ಪದ್ಧತಿಯನ್ನು ರದ್ದುಪಡಿಸಿದ್ದಾರೆ. ಆ ಮೂಲಕ ಮಹಿಳೆಯರು ಸ್ವತಂತ್ರವಾಗಿ, ನಾಲ್ಕಾರು ಮಹಿಳೆಯರೊಂದಿಗೆ ಸೇರಿ ಹಜ್ ಯಾತ್ರೆ ಕೈಗೊಳ್ಳುವ ಅವಕಾಶ ಕಲ್ಪಿಸಿದ್ದಾರೆ. ಹೇಳಿ, ಮೋದಿ ಅವರ ಮನದಲ್ಲಿ ನಂಜು ಇದ್ದಿದ್ದರೆ ಹೀಗೆ ಮಾಡುತ್ತಿದ್ದರೆ?

ದೇಶದಲ್ಲಿ ಮುಸ್ಲಿಮರ ಮತ ಪಡೆದು, ಅಲ್ಪಸಂಖ್ಯಾತರ ಪರ ಎಂದು ದಶಕಗಳವರೆಗೆ ಆಡಳಿತಕ್ಕೆ ಬಂದ ಸರ್ಕಾರಗಳು ಮುಸ್ಲಿಮರ ಏಳಿಗೆಗೆ ಏನೂ ಮಾಡಲಿಲ್ಲ. ಆದರೆ ಕೋಮುವಾದಿ, ಮುಸ್ಲಿಂ ವಿರೋಧಿ ಎನಿಸಿಕೊಳ್ಳುತ್ತಲೇ ದೇಶದ ಗದ್ದುಗೆ ಏರಿದ ನರೇಂದ್ರ ಮೋದಿ ಅವರು ತ್ರಿವಳಿ ತಲಾಖ್ ವಿರುದ್ಧ ಕಾನೂನು ರಚಿಸಲು ಮುಂದಾಗಿ ಹಾಗೂ ಮಹ್ರಮ್ ಪದ್ಧತಿ ರದ್ದುಗೊಳಿಸಿ ಮುಸ್ಲಿಂ ಮಹಿಳೆಯರ ಆತ್ಮವಿಶ್ವಾಸ ಹೆಚ್ಚಿಸಿದ್ದಾರೆ. ಕುಡೋಸ್ ಟು ನರೇಂದ್ರ ಮೋದಿ…

 

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
ನೂತನ್ ಜೋಷಿ ಉಡುಪಿ January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
ನೂತನ್ ಜೋಷಿ ಉಡುಪಿ January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search