• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ನರೇಂದ್ರ ಮೋದಿ ಮುಸ್ಲಿಂ ವಿರೋಧಿಯಾಗಿದ್ದರೆ ಇಷ್ಟೆಲ್ಲ ಮಾಡುತ್ತಿದ್ದರೇ ವಿರೋಧಿಗಳೇ?

ನೂತನ್ ಜೋಷಿ ಉಡುಪಿ Posted On January 1, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಒಬ್ಬ ಕೋಮುವಾದಿ ಎಂದು ಜರಿಯುತ್ತಾರೆ. ಅವರೊಬ್ಬ ಹಿಟ್ಲರ್ ಗೆ ಸಮ ಎಂದು ಪರೋಕ್ಷವಾಗಿ ಪ್ರಕಾಶ್ ರೈ ಅವರಂಥ ನಟರು ಆರೋಪಿಸುತ್ತಾರೆ. ಇನ್ನು ಮೋದಿ ಅವರು ಮುಸ್ಲಿಂ ವಿರೋಧಿ ಎಂದು ಬಿಂಬಿಸುವವರಿಗೇನು ಕಡಿಮೆಯಿಲ್ಲ.

ಹೀಗೆ ವಿರೋಧಿಸಬೇಕು, ಟೀಕಿಸಬೇಕು ಎಂಬ ಒಂದೇ ಕಾರಣಕ್ಕೆ ಬಾಯಿಗೆ ಬಂದಹಾಗೆ ಮಾತನಾಡಿದರೂ ಆರೋಪ ಮಾಡಿದರೂ ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರ ಸಬ್ ಕಾ ವಿಕಾಸ್ ಎಂಬ ತಮ್ಮ ಮನೋಭಾವ ಬಿಡದೆ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದಕ್ಕೆ ದ್ಯೋತಕವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸರ್ಕಾರ ತ್ರಿವಳಿ ತಲಾಖ್ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ಗಮನಿಸಬೇಕು. ತ್ರಿವಳಿ ತಲಾಖ್ ವಿರುದ್ಧ ಮಹಿಳೆಯರು ಸಹಿ ಆಂದೋಲನ ನಡೆಸುತ್ತಲೇ, ಪ್ರಕರಣ ನ್ಯಾಯಾಲಯದ ಮೆಟ್ಟಿಲೇರುತ್ತಲೇ ನರೇಂದ್ರ ಮೋದಿ ಅವರು ಸಹ ತ್ರಿವಳಿ ತಲಾಖ್ ಅನ್ನು ಸಾರ್ವಜನಿಕವಾಗಿ ವಿರೋಧಿಸಿದರು.

ಅಷ್ಟೇ ಅಲ್ಲ ಸುಪ್ರೀಂ ಕೊರ್ಟ್ ತ್ರಿವಳಿ ತಲಾಖ್ ನಿಷೇಧಿಸಿ ಇದರ ವಿರುದ್ಧ ಕಾನೂನು ರಚಿಸಿ ಎಂದು ನಿರ್ದೇಶನ ನೀಡಿದ ಬಳಿಕದ ಮೊದಲ ಅಧಿವೇಶನದಲ್ಲೇ, ಅಂದರೆ ಪ್ರಸ್ತುತ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೇ ತ್ರಿವಳಿ ತಲಾಖ್ ವಿರುದ್ಧ ಲೋಕಸಭೆಯಲ್ಲಿ ಅಂಗೀಕಾರ ಪಡೆಯಲಾಗಿದೆ. ಇದರಿಂದ ದೇಶದ ಲಕ್ಷಾಂತರ ಮುಸ್ಲಿಂ ಮಹಿಳೆಯರು ನಿಟ್ಟುಸಿರು ಬಿಡುವಂತಾಗಿದೆ. ಹೇಳಿ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂ ವಿರೋಧಿಯಾಗಿದ್ದರೆ ಇಷ್ಟೆಲ್ಲ ಮಾಡುತ್ತಿದ್ದರೆ?

ಇನ್ನು ಇದುವರೆಗೂ ಮುಸ್ಲಿಂ ಮಹಿಳೆಯರು ಸ್ವತಂತ್ರವಾಗಿ ಅಂದರೆ ಒಬ್ಬರು ಅಥವಾ ಮಹಿಳೆಯರ ಗುಂಪು ಪವಿತ್ರ ಹಜ್ ಯಾತ್ರೆಗೆ ತೆರಳುವಂತಿರಲಿಲ್ಲ. ಅದಕ್ಕೆ ಪುರುಷರ ಉಪಸ್ಥಿತಿ ಕಡ್ಡಾಯ ಎಂಬಂತೆ ಮಹ್ರಮ್ ಪದ್ಧತಿ ಅಸ್ತಿತ್ವದಲ್ಲಿತ್ತು. ಆದರೆ ಈ ತಾರತಮ್ಯ ಹೋಗಲಾಡಿಸಲು ದಿಟ್ಟ ಹೆಜ್ಜೆ ಇಟ್ಟ ನರೇಂದ್ರ ಮೋದಿ ಅವರು ಮಹ್ರಮ್ ಪದ್ಧತಿಯನ್ನು ರದ್ದುಪಡಿಸಿದ್ದಾರೆ. ಆ ಮೂಲಕ ಮಹಿಳೆಯರು ಸ್ವತಂತ್ರವಾಗಿ, ನಾಲ್ಕಾರು ಮಹಿಳೆಯರೊಂದಿಗೆ ಸೇರಿ ಹಜ್ ಯಾತ್ರೆ ಕೈಗೊಳ್ಳುವ ಅವಕಾಶ ಕಲ್ಪಿಸಿದ್ದಾರೆ. ಹೇಳಿ, ಮೋದಿ ಅವರ ಮನದಲ್ಲಿ ನಂಜು ಇದ್ದಿದ್ದರೆ ಹೀಗೆ ಮಾಡುತ್ತಿದ್ದರೆ?

ದೇಶದಲ್ಲಿ ಮುಸ್ಲಿಮರ ಮತ ಪಡೆದು, ಅಲ್ಪಸಂಖ್ಯಾತರ ಪರ ಎಂದು ದಶಕಗಳವರೆಗೆ ಆಡಳಿತಕ್ಕೆ ಬಂದ ಸರ್ಕಾರಗಳು ಮುಸ್ಲಿಮರ ಏಳಿಗೆಗೆ ಏನೂ ಮಾಡಲಿಲ್ಲ. ಆದರೆ ಕೋಮುವಾದಿ, ಮುಸ್ಲಿಂ ವಿರೋಧಿ ಎನಿಸಿಕೊಳ್ಳುತ್ತಲೇ ದೇಶದ ಗದ್ದುಗೆ ಏರಿದ ನರೇಂದ್ರ ಮೋದಿ ಅವರು ತ್ರಿವಳಿ ತಲಾಖ್ ವಿರುದ್ಧ ಕಾನೂನು ರಚಿಸಲು ಮುಂದಾಗಿ ಹಾಗೂ ಮಹ್ರಮ್ ಪದ್ಧತಿ ರದ್ದುಗೊಳಿಸಿ ಮುಸ್ಲಿಂ ಮಹಿಳೆಯರ ಆತ್ಮವಿಶ್ವಾಸ ಹೆಚ್ಚಿಸಿದ್ದಾರೆ. ಕುಡೋಸ್ ಟು ನರೇಂದ್ರ ಮೋದಿ…

 

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
ನೂತನ್ ಜೋಷಿ ಉಡುಪಿ June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
ನೂತನ್ ಜೋಷಿ ಉಡುಪಿ June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search