• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉಗ್ರ ಹಫೀಜ್ ಸಯೀದ್ ಆಸ್ತಿ ಮುಟ್ಟುಗೋಲಿಗೆ ಪಾಕ್ ನಿರ್ಧಾರ

TNN Correspondent Posted On January 1, 2018


  • Share On Facebook
  • Tweet It

ಭಾರತ ಸೇರಿ ವಿಶ್ವದ ನಾನಾ ರಾಷ್ಟ್ರಗಳಿಗೆ ಕಂಟಕವಾಗಿರುವ ಉಗ್ರ ಹಫೀಜ್ ಸಯೀದ್ ವಿರುದ್ಧ ಪಾಕಿಸ್ತಾನಕ್ಕೆ ವಿಶ್ವ ಸಮುದಾಯ ಆಗ್ರಹಿಸಿದರೂ, ಪದೇ ಪದೆ ಆತನ ರಕ್ಷಣೆಗೆ ನಿಲ್ಲುತ್ತಿದ್ದ ಪಾಕ್ ಸರ್ಕಾರ ಸಯೀದ್ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮುಂಬೈ ದಾಳಿ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ಗೆ ಸಂಬಂಧಿಸಿದ ಸಂಘಟನೆಗಳು, ಸೇವಾ ಸಂಸ್ಥೆಗಳು ಮತ್ತು ಆಸ್ತಿಯನ್ನು ಜಪ್ತಿಮಾಡಲು ಪಾಕ್ ಸರ್ಕಾರ ರಹಸ್ಯ ಸಭೆಯೊಂದರಲ್ಲಿ ನಿರ್ಧರಿಸಿದೆ ಎನ್ನಲಾಗಿದೆ. ಪಾಕಿಸ್ತಾನ ಸರ್ಕಾರ ಉಗ್ರ ಸಂಘಟನೆಗಳನ್ನು ಹತ್ತಿಕ್ಕಲು ಈ ನಿರ್ಧಾರವನ್ನು ಡಿಸೆಂಬರ್ 19 ರಂದು ನಡೆದ ಪ್ರಾಂತಿಯ ಸರ್ಕಾರದ ಪ್ರತಿನಿಧಿಗಳ ರಹಸ್ಯ ಸಭೆಯಲ್ಲಿ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಸಯೀದ್ ಸಂಘಟನೆಗಳಾದ ಜಮಾತ್ ಉದ್ ದಾವಾ  ಮತ್ತು ಫಲಾಹ್ ಇ ಇನ್ಸಾನಿಯತ್ ಸಂಘಟನೆಗಳ ಪೂರ್ಣ ಸ್ವತ್ತನ್ನು ವಶಪಡಿಸಿಕೊಳ್ಳಬೇಕು ಎಂದು ಪಾಕಿಸ್ತಾನ ಸರ್ಕಾರ ಡಿಸೆಂಬರ್ 28ರಂದು ಆದೇಶ ಹೊರಡಿಸಿದೆ.

ಸಯೀದ್ ವಿರುದ್ಧ ಕ್ರಮಕ್ಕೆ ಪಾಕಿಸ್ತಾನ ಸರ್ಕಾರ ದಿಟ್ಟ ನಿರ್ಧಾರವನ್ನು ಕೈಗೊಳ್ಳಲು ಮುಂದಾಗಿದ್ದು, ಸಯೀದ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಈ ರಹಸ್ಯ ಸಭೆ ನಡೆಸಲಾಗಿದೆ. ಅಲ್ಲದೇ ಹಣಕಾಸು ಮತ್ತು ಕಾನೂನು ಇಲಾಖೆಯಿಂದ ಸೂಕ್ತ ದಾಖಲೆಗಳನ್ನು ಸಿದ್ಧಪಡಿಸಿದ್ದು, ಎಲ್ಲ ಆಸ್ತಿಯನ್ನು ವಶಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ.

  • Share On Facebook
  • Tweet It


- Advertisement -


Trending Now
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
Leave A Reply

  • Recent Posts

    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
  • Popular Posts

    • 1
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 2
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 3
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 4
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 5
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search