• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಯೋತ್ಪಾದನೆ ನಿಲ್ಲಿಸದಿದ್ದರೇ ಪಾಕ್ ಜತೆ ಕ್ರಿಕೆಟ್ ಇಲ್ಲ: ಸುಷ್ಮಾ ಸ್ವರಾಜ್

TNN Correspondent Posted On January 1, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನ ಭಾರತದ ವಿರುದ್ಧ ನಿರಂತರವಾಗಿ ಷಡ್ಯಂತ್ರ ರೂಪಿಸುತ್ತಿದ್ದು, ಪಾಕ್ ಗಡಿಯಲ್ಲಿ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿರುವುದು ಸೇರಿ ಹಲವು ಕಾರ್ಯಚಟುವಟಿಕೆಗಳ ಮೂಲಕ ಭಾರತದ ನೆಮ್ಮದಿಗೆ ಭಂಗ ನೀಡುತ್ತಿರುವ ಪಾಕ್ ಜತೆ ಕ್ರಿಕೆಟ್ ಪಂದ್ಯಾವಳಿ ಸಾಧ್ಯವಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಯೋಧರ ಹತ್ಯೆ ಮತ್ತು ಸೇನಾ ಶಿಬಿರಗಳ ಮೇಲೆ ಪಾಕ್ ಸೈನಿಕರ ದಾಳಿ ಸೇರಿ ಹಲವು ಪಾಕ್ ಉಗ್ರ ಚಟುವಟಿಕೆಗಳಿಗೆ ಪಾಕ್ ಕಡಿವಾಣ ಹಾಕಲು ವಿಫಲವಾಗಿದೆ. ಅಲ್ಲದೇ ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡಲು ಹೋದಾಗ ತಾಯಿ ಮತ್ತು ಪತ್ನಿಯನ್ನು ಅವಮಾನಿಸಿದ್ದರಿಂದ ಕೇಂದ್ರ ಪಾಕ್ ಜೊತೆ ಯಾವುದೇ ರೀತಿಯ ಸಂಬಂಧ ಮುಂದುವರಿಸುವುದು ಕಷ್ಟವಾಗುತ್ತದೆ. ಅಲ್ಲದೇ ಆದ್ದರಿಂದ ಪಾಕಿಸ್ತಾನದ ಜತೆ ಕ್ರಿಕೆಟ್ ಆಡುವುದು ಅಸಾಧ್ಯ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಸಂಸದೀಯ ಸಲಹಾ ಸಮಿತಿ ಜತೆಗಿನ ವಿದೇಶಾಂಗ ವ್ಯವಹಾರಗಳ ಸಭೆಯಲ್ಲಿ ಮಾತನಾಡಿ, ಪಾಕಿಸ್ತಾನ ಭಯೋತ್ಪಾದಕರಿಗೆ ಆಶ್ರಯ ನೀಡಿ, ಭಾರತದಲ್ಲಿ ಉಗ್ರ ಕೃತ್ಯಗಳನ್ನು ನಡೆಸಲು ಪರೋಕ್ಷವಾಗಿ ಬೆಂಬಲಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ಪಾಕ್ ಮಧ್ಯೆ ನಿರ್ಮಾಣವಾಗಿರುವ ಬಿಗುವಿನ ವಾತಾವರಣವನ್ನು ಉಭಯ ರಾಷ್ಟ್ರಗಳ ನಡುವೆ ಕ್ರಿಕೆಟ್ ಪಂದ್ಯ ಏರ್ಪಡಿಸುವ ಮೂಲಕ ಕೈಗೊಳ್ಳಬಹುದಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಸುಷ್ಮಾ ಸ್ವರಾಜ್ ‘ಕ್ರಿಕೆಟ್ ಆಡಲು ಇದು ಸೂಕ್ತ ಸಮಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search