• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

33 ಶತಕೋಟಿ ಡಾಲರ್ ಸಹಾಯ ನೀಡಿದವರಿಗೆ ಪಾಕ್ ಮೋಸ: ಟ್ರಂಪ್ ಆಕ್ರೋಶ

TNN Correspondent Posted On January 1, 2018
0


0
Shares
  • Share On Facebook
  • Tweet It

ವಾಷಿಂಗಟನ್: ಅಮೆರಿಕ ಪಾಕಿಸ್ತಾನಕ್ಕೆ ಕೋಟ್ಯಂತರ ಹಣ ನೀಡಿದರೂ ಪಾಕಿಸ್ತಾನದಿಂದ ಯಾವುದೇ ಲಾಭ ಪಡೆದಿಲ್ಲ. ಕೇವಲ ಪಾಕ್ ಸುಳ್ಳುಗಳನ್ನು ಮಾತ್ರ ನೀಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕ್ ವಿರುದ್ಧ ಟ್ವೀಟ್ ಮಾಡಿರುವ ಟ್ರಂಪ್ ‘ಅಮೆರಿಕ ಸರ್ಕಾರ ಮೂರ್ಖತನದಿಂದ ಕಳೆದ 15 ವರ್ಷದಲ್ಲಿ ಪಾಕಿಸ್ತಾನಕ್ಕೆ ಇದುವರೆಗೆ 33 ಶತಕೋಟಿ ಡಾಲರ್ ಹಣವನ್ನು ನೀಡಿದೆ. ಆದರೆ ಪಾಕಿಸ್ತಾನ ಅಮೆರಿಕಕ್ಕೆ ಸುಳ್ಳು ಹೇಳುವುದು, ಮೋಸವನ್ನು ಬಳುವಳಿಯಾಗಿ ನೀಡಿದೆ. ಪಾಕಿಸ್ತಾನ ಸರ್ಕಾರ ಅಮೆರಿಕರನ್ನು ಮೂರ್ಖರು ಎಂದು ತಿಳಿದುಕೊಂಡಿದೆ. ಪಾಕಿಸ್ತಾನದವರು ಭಯೋತ್ಪಾದಕರಿಗೆ ಸ್ವರ್ಗವನ್ನು ಅಫಘಾನಿಸ್ತಾದ ಮೂಲಕ ಕಲ್ಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2017ರ ಆಗಸ್ಟ್ 12 ರಂದು ಕೂಡ ಪಾಕಿಸ್ತಾನದ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು. ವಾಷಿಂಗಟನ್ ಇನ್ನು ಪಾಕ್ ಮತ್ತು ತಾಲಿಬಾನ್ ನ ಕುಕೃತ್ಯಗಳನ್ನು ಸಹಿಸಿಕೊಂಡು ಇರಲು ಸಾಧ್ಯವಿಲ್ಲ. ಪಾಕ್ ಮೂಲಭೂತವಾದಿ, ಭಯೋತ್ಪಾದಕರಿಗೆ ತನ್ನ ಬೆಂಬಲ ಮುಂದುವರಿಸಿದೆ ಎಂದು ಆರೋಪಿಸಿದ್ದರು.

ಅಫ್ಘಾನಿಸ್ತಾನದ ಮೇಲಿನ ನಮ್ಮ ಕಾರ್ಯತಂತ್ರವನ್ನು ಬಳಸಿಕೊಂಡು ಪಾಕಿಸ್ತಾನ ಅಮೆರಿಕದಿಂದ ಲಾಭ ಪಡೆದುಕೊಂಡಿದೆ. ಅದರ ಜತೆಗೆ ಭಯೋತ್ಪಾದಕರಿಗೆ ಆಶ್ರಯ ನೀಡಿದೆ. ಪಾಕಿಸ್ತಾನ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೇ ಭಾರಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ಟ್ರಂಪ್ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search