• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂತೂ ಬುದ್ಧಿ ಕಲಿತ ಪಾಕಿಸ್ತಾನ, ಸಯೀದ್ ಸಂಘಟನೆಗೆ ದೇಣಿಗೆ ಪಡೆಯದಂತೆ ನಿಷೇಧ!

TNN Correspondent Posted On January 2, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಇದುವರೆಗೂ ಉಗ್ರ ಹಫೀಜ್ ಸಯೀದ್ ಬೆಂಬಲಕ್ಕೆ ನಿಂತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ಎಂದರೆ ಉಗ್ರರ ಪರ ಎಂಬ ಮಾತು ಕೇಳಿಬರುವಂತೆ ಮಾಡಿಕೊಂಡಿದ್ದ ಪಾಕಿಸ್ತಾನ ಕೊನೆಗೂ ಬುದ್ಧಿ ಕಲಿತಿದೆ.

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನ ಜಮಾತ್ ಉದ್ ದವಾ ಉಗ್ರ ಸಂಘಟನೆ ಹಾಗೂ ಪಲಾಹ್ ಇ ಇನ್ಸಾನಿಯತ್ ಉಗ್ರ ಸಂಘಟನೆ ಸೇರಿ ಹಲವು ಉಗ್ರ ಸಂಘಟನೆಗಳು ದೇಣಿಗೆ ಪಡೆಯುವಂತಿಲ್ಲ ಎಂದು ಪಾಕಿಸ್ತಾನ ವಿತ್ತೀಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ ಎಂದು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದೆ.

ವಿಶ್ವಸಂಸ್ಥೆ ನಿಷೇಧಿಸಿರುವ ಲಷ್ಕರೆ ತಯ್ಯಬಾ ಸೇರಿ ಯಾವುದೇ ನಿಷೇಧಿತ ಸಂಘಟನೆಗಳು ದೇಣಿಗೆ ಪಡೆಯುವಂತಿಲ್ಲ ಎಂದು ಪಾಕಿಸ್ತಾನದ ಭದ್ರತೆ ಹಾಗೂ ವಿನಿಮಯ ಆಯೋಗ ಆದೇಶಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜಮಾತ್ ಉದ್ ದವಾ, ಲಷ್ಕರೆ ತಯ್ಯಬಾ, ಪಲಾಹ್ ಇ ಇನ್ಸಾನಿಯತ್, ಪಾಸ್ಬಾನ್ ಇ ಅಲ್ಹೆ ಹದಿತ್, ಪಾಸ್ಬಾನ್ ಇ ಕಾಶ್ಮೀರ್ ಸಂಘಟನೆಗಳು ದೇಣಿಗೆ ನಿಷೇಧಿತ ಸಂಘಟನೆಗಳಲ್ಲಿ ಪ್ರಮುಖವಾಗಿವೆ ಎಂದು ಡಾನ್ ವರದಿ ಮಾಡಿದೆ.

ಇತ್ತೀಚೆಗಷ್ಟೇ ಹಫೀಜ್ ಸಯೀದ್ ನನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ್ದ ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ ಹಾಕಿಸಿಕೊಂಡ ಬಳಿಕ ಮತ್ತೆ ಗೃಹಬಂಧನದಲ್ಲಿಟ್ಟಿತ್ತು. ಈಗ ಉಗ್ರ ಸಂಘಟನೆಗಳು ದೇಣಿಗೆ ಪಡೆಯುವುದನ್ನು ನಿಷೇಧಿಸಿರುವುದು ಉತ್ತಮ ನಡೆಯಾದರೂ ಅದನ್ನು ಎಷ್ಟರಮಟ್ಟಿಗೆ ಉಳಿಸಿಕೊಳ್ಳುತ್ತದೆ ಹಾಗೂ ಎಷ್ಟರಮಟ್ಟಿಗೆ ಉಗ್ರರನ್ನು ಪೋಷಣೆ ಮಾಡದೆ ಶಿಕ್ಷಿಸುತ್ತದೆ ಎಂಬುದರ ಮೇಲೆ ಭಯೋತ್ಪಾದನೆ ಕುರಿತು ಪಾಕಿಸ್ತಾನದ ನಿಲುವನ್ನು ಅರ್ಥಮಾಡಿಕೊಳ್ಳಬಹುದಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search