• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ವರ್ಷ ರಾಜ್ಯಸಭೆಯಲ್ಲೂ ಪ್ರಾಬಲ್ಯ ಸಾಧಿಸಲಿದೆ ಬಿಜೆಪಿ! ಹೇಗೆ ಗೊತ್ತಾ?

TNN Correspondent Posted On January 2, 2018
0


0
Shares
  • Share On Facebook
  • Tweet It

ದೆಹಲಿ: ವರ್ಷಾಂತ್ಯದಲ್ಲಿ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಮುಕ್ತ ಭಾರತದತ್ತ ದಾಪುಗಾಲು ಇಟ್ಟಿರುವ ಬಿಜೆಪಿಗೆ 2018ರಲ್ಲಿ ಹಲವು ವಿಧಾನಸಭೆ ಚುನಾವಣೆಗಳಲ್ಲಿ ಗೆಲುವು ಮುನ್ನಡೆ ಸಾಧಿಸುವ ಜತೆಗೆ ರಾಜ್ಯಸಭೆಯಲ್ಲೂ ಏಕೈಕ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮುವ ಸಾಧ್ಯತೆಗಳಿವೆ.

ಪ್ರಸಕ್ತ ವರ್ಷ ನಡೆಯುವ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಮೇಲ್ಮನೆಯಲ್ಲಿ ತನ್ನ ಸದಸ್ಯರ ಸಂಖ್ಯೆಯನ್ನು 67ಕ್ಕೆ ಏರಿಸಿಕೊಳ್ಳಲು ನಿರ್ಧರಿಸಿದ್ದು, ಹಾಗೇನಾದರೂ ಇಷ್ಟು ಸಂಖ್ಯೆಗೆ ಏರಿಸಿಕೊಂಡರೆ ರಾಜ್ಯಸಭೆಯಲ್ಲಿ ಎನ್ ಡಿಎ ಬಲ 98 ಆಗಲಿದೆ. ಆ ಮೂಲಕ ರಾಜ್ಯಸಭೆಯಲ್ಲಿ ಹೆಚ್ಚು ಸ್ಥಾನ ಹೊಂದಿದ ಪಕ್ಷವಾಗಿ ಬಿಜೆಪಿ ಹೊರಹೊಮ್ಮಲಿದೆ.

ಹೌದು, ಪ್ರಸಕ್ತ ವರ್ಷದಲ್ಲಿ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಹರಿಯಾಣ, ಜಾರ್ಖಂಡ್ ಹಾಗೂ ಉತ್ತರಾಖಂಡ ರಾಜ್ಯಗಳ ವಿಧಾನಸಭೆಯಿಂದ ರಾಜ್ಯಸಭೆಗೆ ಸದಸ್ಯರನ್ನು ಆಯ್ಕೆ ಮಾಡಲಿದ್ದು, ಚುನಾವಣೆಯಲ್ಲಿ ಬಿಜೆಪಿಯ ಸದಸ್ಯರೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲಿದ್ದಾರೆ. ಈ ಎಲ್ಲ ರಾಜ್ಯಗಳಲ್ಲೂ ಬಿಜೆಪಿ ಸರ್ಕಾರವೇ ಅಸ್ತಿತ್ವದಲ್ಲಿರುವುದರಿಂದ ಸರಾಗವಾಗಿ ಬಿಜೆಪಿ ಸದಸ್ಯರು ರಾಜ್ಯಸಭೆಗೆ ಆಯ್ಕೆಯಾಗುತ್ತಾರೆ. ಹಾಗಾಗಿ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ ಹೆಚ್ಚಾಗಲಿದೆ.

ಅತ್ತ ದೇಶದ 19 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡು ಕೇವಲ ನಾಲ್ಕು ರಾಜ್ಯಗಳ ವಿಧಾನಸಭೆಯಲ್ಲಿ ಅಸ್ತಿತ್ವ ಉಳಿಸಿಕೊಂಡಿರುವ ಕಾಂಗ್ರೆಸ್ ಈ ವರ್ಷ ರಾಜ್ಯಸಭೆಯಲ್ಲೂ ಹಿನ್ನಡೆ ಅನುಭವಿಸಲಿದೆ. ರಾಜಕೀಯ ತಜ್ಞರ ಅಂದಾಜಿನ ಪ್ರಕಾರ 2018ರ ಜುಲೈ ವೇಳೆಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ 57ರಿಂದ 48ಕ್ಕೆ ಇಳಿಯಲಿದೆ ಎಂದು ತಿಳಿದುಬಂದಿದೆ.

ಬಿಜೆಪಿ ಸದಸ್ಯರ ಹೆಚ್ಚಳ ಹಾಗೂ ಕಾಂಗ್ರೆಸ್ ಸದಸ್ಯರ ಅವಧಿ ಮುಗಿಯುವ ಹಿನ್ನೆಲೆಯಲ್ಲಿ ಸಂಖ್ಯೆಯಲ್ಲಿ ಇಳಿಕೆಯಾಗಲಿದೆ ಎನ್ನಲಾಗುತ್ತಿದೆ. ಅಲ್ಲದೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಒಕ್ಕೂಟದ ಸದಸ್ಯರ ಸಂಖ್ಯೆ 72ರಿಂದ 63ಕ್ಕೆ ಇಳಿಯಲಿದೆ. ಒಟ್ಟಿನಲ್ಲಿ ಲೋಕಸಭೆ, ವಿಧಾನಸಭೆಯಲ್ಲಿ ಪ್ರಾಬಲ್ಯ ಸಾಧಿಸಿದ್ದ ಬಿಜೆಪಿ 2018ರಲ್ಲಿ ರಾಜ್ಯಸಭೆಯಲ್ಲೂ ಮುನ್ನಡೆ ಸಾಧಿಸಲಿದೆ.

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search