• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರದಲ್ಲಿ ಸೈನಿಕರು ಹತ್ಯೆ ಮಾಡಿದ್ದ ಆ ಮೂರನೇ ಉಗ್ರನ ಬಳಿ ಸಿಕ್ಕ ಚೀಟಿಯಲ್ಲಿ ಏನಿತ್ತು ಗೊತ್ತಾ?

TNN Correspondent Posted On January 2, 2018


  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೈನಿಕರು ಬರೋಬ್ಬರಿ 37 ತಾಸು ಕೈಗೊಂಡ ಕಾರ್ಯಾಚರಣೆ ಫಲ ನೀಡಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ಉಗ್ರರಲ್ಲಿ ಮೂರನೇಯದಾಗಿ ಹೊಡೆದುರುಳಿಸಿದ ಉಗ್ರ ಮಾತ್ರ ಭಯಂಕರವಾಗಿದ್ದು, ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಈ ಮೂರನೇ ಉಗ್ರ ಸಂಸತ್ ಮೇಲಿನ ದಾಳಿಯ ರೂವಾರಿ ಅಫ್ಜಲ್ ಗುರುವಿನ ಸಹಚರ ಎಂದು ತಿಳಿದುಬಂದಿದ್ದು, ಆತನ ಬಳಿ “ಅಫ್ಜಲ್ ಗುರು ಕಾ ಬದ್ಲಾ, (ಅಫ್ಜಲ್ ಗುರು ಗಲ್ಲಿಗೇರಿಸಿದ್ದಕ್ಕೆ ಸೇಡು)” ಎಂದು ಬರೆಯಲಾದ ಚೀಟಿಯೊಂದು ಸಿಕ್ಕಿದೆ ಎಂದು ಸಿಆರ್ ಪಿಎಫ್ ಮೂಲಗಳು ತಿಳಿಸಿವೆ.

2013ರಲ್ಲಿ ಉಗ್ರ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ ಬಳಿಕ, ಅಂದರೆ 2014-15ರ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಾದ ಸರಣಿ ದಾಳಿಗಳಲ್ಲೂ ಚೀಟಿಗಳು ಸಿಕ್ಕಿದ್ದು, ಬಹುತೇಕ ಚೀಟಿಗಳ ಮೇಲೆ “ಅಫ್ಜಲ್ ಗುರು ನೇಣಿಗೇರಿಸಿದ್ದಕ್ಕೆ ಸೇಡು” ಎಂಬ ಒಕ್ಕಣೆ ಇರುವುದು ಪತ್ತೆಯಾಗಿದೆ. ಹಾಗಾಗಿ ಈ ಮೂರನೇ ಉಗ್ರನನ್ನು ಹತ್ಯೆ ಮಾಡಿರುವುದು ಮುನ್ನಡೆಯಾಗಿದೆ ಎಂದು ತಿಳಿದುಬಂದಿದೆ.

2016ರಲ್ಲಿ ಉಗ್ರರು ನಡೆಸಿದ ಪಠಾಣ್ ಕೋಟ್ ದಾಳಿ ವೇಳೆಯಲ್ಲೂ ಚೀಟಿಯೊಂದು ಪತ್ತೆಯಾಗಿತ್ತು ಹಾಗೂ ಅದರಲ್ಲಿ ನಾವು ಅಫ್ಜಲ್ ಗುರು ತಂಡದವರು ಎಂದು ಉಲ್ಲೇಖಿಸಲಾಗಿತ್ತು. ಈ ಅಂಶಗಳನ್ನು ಗಮನಿಸಿದರೆ ಅಫ್ಜಲ್ ಗುರು ಸಹಚರರೇ ಈ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಸೇನೆ ಮತ್ತಷ್ಟು ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ಹೊಡೆದುರುಳಿಸಲಿ ಎನ್ನುವುದೇ ಆಶಯ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search