• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿ ದಾಟಿ ಬಂದ ಪಾಕಿಸ್ತಾನದ 12 ವರ್ಷದ ಮೂಕ ಬಾಲಕನನ್ನು ಭಾರತ ಸರ್ಕಾರ ಏನು ಮಾಡಿತು ಗೊತ್ತೆ..?

TNN Correspondent Posted On January 3, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಭಾರತದ ವಿರುದ್ಧ ಹಲ್ಲು ಮಸೆಯುವ ಪಾಕಿಸ್ತಾನ ಮಾನವೀಯತೆ ಮರೆತು ವರ್ತಿಸಿದರೂ, ಭಾರತ ಮಾತ್ರ ತನ್ನ ಕರುಣೆಯನ್ನು ಆಗಗ ತೋರುತ್ತಲೇ ಇದೆ. ಅದಕ್ಕೆ ಸಾಕ್ಷಿ ಎಂಬಂತೆ  ಸುಮಾರು ಏಳು ತಿಂಗಳ ಹಿಂದೆ ಭಾರತದ ಗಡಿ ದಾಟಿ ಬಂದ ಪಾಕಿಸ್ತಾನದ 12 ವರ್ಷದ ಮೂಕ ಬಾಲಕನನ್ನು ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ಕಳುಹಿಸಿ ಕೊಡುವ ಮೂಲಕ ಮಾನವೀಯತೆ ಮೆರೆದಿದೆ.

ಮಾತು ಬಾರದ ಬಾಲಕ ಮೇ 2017ರಂದು ಪ್ರಮಾದ್ ವಶಾತ್ ಭಾರತದ ಗಡಿ ದಾಟಿ ಬಂದಿದ್ದ. ಆತನ ಬಳಿ 20 ರೂಪಾಯಿಯ ಪಾಕಿಸ್ತಾನದ ಡಾಲರ್ ಇದ್ದಿರುವುದು, ಆತ ಪಾಕಿಸ್ತಾನದ ಪ್ರಜೆ ಎಂಬುದು ಪತ್ತೆ ಹಚ್ಚಲು ಸಹಾಯಕವಾಗಿದೆ. ಅಟ್ಟರಿ ವಾಗಾ ಗಡಿಯಲ್ಲಿ ಬಾಲಕನನ್ನು ಭಾರತೀಯ ಸೇನೆಯ ನೇತೃತ್ವದಲ್ಲಿ ವಾಪಸ್ಸ ಪಾಕಿಸ್ತಾನಕ್ಕೆ ಹಸ್ತಾಂತರಿಸಲಾಗಿದೆ.

ಪಾಕಿಸ್ತಾನದ ಹೈ ಕಮಿಷನರ್ ಉಪಸ್ಥಿತಿಯಲ್ಲಿ, ಪಾಕ್ ಭಾರತದ ರಾಯಭಾರಿ ಸೇರಿ ಹಲವು ಅಧಿಕಾರಿಗಳು ಉಪಸ್ಥಿತಿಯಲ್ಲಿ ಬಾಲಕನನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆದಿದೆ.

ಬಾಲಕನ್ನು ಫರೀದ್ ಕೋಟ್ ಜೈಲಿನಲ್ಲಿ ಬಾಲಾಪರಾಧಿ ಎಂದು ವಿಚಾರಣೆ ನಡೆಸಲಾಗಿತ್ತು. ನಂತರ ಪಾಕಿಸ್ತಾನ ವಿದೇಶಾಂಗ ಸಚಿವಾಲಯದೊಂದಿಗೆ ಮಾತುಕತೆ ನಡೆಸಿ ಬಾಲಕನನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕ ಕೆಲವು ಉರ್ದು ಪದಗಳನ್ನು ಬರೆಯುತ್ತಿರುವುದು ಆತನ ಮೂಲ ಪತ್ತೆ ಹಚ್ಚಲು ಅನುಕೂಲವಾಗಿದೆ. ಆತ ಪಾಕಿಸ್ತಾನದ ರೂಪಾಯಿಯನ್ನು, ಪಾಕಿಸ್ತಾನದ ಧ್ವಜವನ್ನು ಗುರುತಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದ ಗಡಿಯೊಳಗೆ ಪ್ರಮಾದ್ ವಶಾತ್ ಪ್ರವೇಶಿಸಿದ ಬಾಲಕನನ್ನು ಭಾರತೀಯ ಅಧಿಕಾರಿಗಳು ಗೌರವಯುತವಾಗಿ ಪಾಕಿಸ್ತಾನಕ್ಕೆ ಕಳುಹಿಸಿಕೊಟ್ಟಿದ್ದಾರೆ. ಆದರೆ ಪಾಕಿಸ್ತಾನ ಭಾರತದ ವಿಷಯದಲ್ಲಿ ಈ ರೀತಿಯ ಮಾನವೀಯ ನಡೆಗಳನ್ನು ಇಡದೆ ತನ್ನ ವಿಧ್ವಂಸಕ ಮನಸ್ಥಿತಿಯನ್ನು ಮುಂದುವರಿಸಿರುವುದು ಮಾತ್ರ ದುರಂತ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search