• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿ ದಾಟಿ ಬಂದ ಪಾಕಿಸ್ತಾನದ 12 ವರ್ಷದ ಮೂಕ ಬಾಲಕನನ್ನು ಭಾರತ ಸರ್ಕಾರ ಏನು ಮಾಡಿತು ಗೊತ್ತೆ..?

TNN Correspondent Posted On January 3, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಭಾರತದ ವಿರುದ್ಧ ಹಲ್ಲು ಮಸೆಯುವ ಪಾಕಿಸ್ತಾನ ಮಾನವೀಯತೆ ಮರೆತು ವರ್ತಿಸಿದರೂ, ಭಾರತ ಮಾತ್ರ ತನ್ನ ಕರುಣೆಯನ್ನು ಆಗಗ ತೋರುತ್ತಲೇ ಇದೆ. ಅದಕ್ಕೆ ಸಾಕ್ಷಿ ಎಂಬಂತೆ  ಸುಮಾರು ಏಳು ತಿಂಗಳ ಹಿಂದೆ ಭಾರತದ ಗಡಿ ದಾಟಿ ಬಂದ ಪಾಕಿಸ್ತಾನದ 12 ವರ್ಷದ ಮೂಕ ಬಾಲಕನನ್ನು ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ಕಳುಹಿಸಿ ಕೊಡುವ ಮೂಲಕ ಮಾನವೀಯತೆ ಮೆರೆದಿದೆ.

ಮಾತು ಬಾರದ ಬಾಲಕ ಮೇ 2017ರಂದು ಪ್ರಮಾದ್ ವಶಾತ್ ಭಾರತದ ಗಡಿ ದಾಟಿ ಬಂದಿದ್ದ. ಆತನ ಬಳಿ 20 ರೂಪಾಯಿಯ ಪಾಕಿಸ್ತಾನದ ಡಾಲರ್ ಇದ್ದಿರುವುದು, ಆತ ಪಾಕಿಸ್ತಾನದ ಪ್ರಜೆ ಎಂಬುದು ಪತ್ತೆ ಹಚ್ಚಲು ಸಹಾಯಕವಾಗಿದೆ. ಅಟ್ಟರಿ ವಾಗಾ ಗಡಿಯಲ್ಲಿ ಬಾಲಕನನ್ನು ಭಾರತೀಯ ಸೇನೆಯ ನೇತೃತ್ವದಲ್ಲಿ ವಾಪಸ್ಸ ಪಾಕಿಸ್ತಾನಕ್ಕೆ ಹಸ್ತಾಂತರಿಸಲಾಗಿದೆ.

ಪಾಕಿಸ್ತಾನದ ಹೈ ಕಮಿಷನರ್ ಉಪಸ್ಥಿತಿಯಲ್ಲಿ, ಪಾಕ್ ಭಾರತದ ರಾಯಭಾರಿ ಸೇರಿ ಹಲವು ಅಧಿಕಾರಿಗಳು ಉಪಸ್ಥಿತಿಯಲ್ಲಿ ಬಾಲಕನನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆದಿದೆ.

ಬಾಲಕನ್ನು ಫರೀದ್ ಕೋಟ್ ಜೈಲಿನಲ್ಲಿ ಬಾಲಾಪರಾಧಿ ಎಂದು ವಿಚಾರಣೆ ನಡೆಸಲಾಗಿತ್ತು. ನಂತರ ಪಾಕಿಸ್ತಾನ ವಿದೇಶಾಂಗ ಸಚಿವಾಲಯದೊಂದಿಗೆ ಮಾತುಕತೆ ನಡೆಸಿ ಬಾಲಕನನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕ ಕೆಲವು ಉರ್ದು ಪದಗಳನ್ನು ಬರೆಯುತ್ತಿರುವುದು ಆತನ ಮೂಲ ಪತ್ತೆ ಹಚ್ಚಲು ಅನುಕೂಲವಾಗಿದೆ. ಆತ ಪಾಕಿಸ್ತಾನದ ರೂಪಾಯಿಯನ್ನು, ಪಾಕಿಸ್ತಾನದ ಧ್ವಜವನ್ನು ಗುರುತಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದ ಗಡಿಯೊಳಗೆ ಪ್ರಮಾದ್ ವಶಾತ್ ಪ್ರವೇಶಿಸಿದ ಬಾಲಕನನ್ನು ಭಾರತೀಯ ಅಧಿಕಾರಿಗಳು ಗೌರವಯುತವಾಗಿ ಪಾಕಿಸ್ತಾನಕ್ಕೆ ಕಳುಹಿಸಿಕೊಟ್ಟಿದ್ದಾರೆ. ಆದರೆ ಪಾಕಿಸ್ತಾನ ಭಾರತದ ವಿಷಯದಲ್ಲಿ ಈ ರೀತಿಯ ಮಾನವೀಯ ನಡೆಗಳನ್ನು ಇಡದೆ ತನ್ನ ವಿಧ್ವಂಸಕ ಮನಸ್ಥಿತಿಯನ್ನು ಮುಂದುವರಿಸಿರುವುದು ಮಾತ್ರ ದುರಂತ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search