• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ನೀಡಿದ ಏಟಿಗೆ ನಾಲ್ಕು ವರ್ಷದಲ್ಲಿ ಉಗ್ರರ ಶಕ್ತಿ ಉಡುಗಿ ಹೋಗಿದೆ..!

TNN Correspondent Posted On January 3, 2018
0


0
Shares
  • Share On Facebook
  • Tweet It

ದೆಹಲಿ: ದೇಶದ ಮುಕುಟ ಕಾಶ್ಮೀರ ಕಣಿವೆ ಸೇರಿ ದೇಶಾದ್ಯಂತ ಉಗ್ರ ಉಪಟಳವನ್ನು ನಿಯಂತ್ರಣ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ನಡೆದ ಉಗ್ರ ದಾಳಿಗಳಿಗಿಂತ ಪ್ರಸ್ತುತ ಕೇಂದ್ರ ಸರ್ಕಾರದ ಆಡಳಿತದಲ್ಲಿ ಉಗ್ರ ದಾಳಿಯಲ್ಲಿ ಭಾರಿ ಪ್ರಮಾಣದ ಇಳಿಕೆ ಕಂಡು ಬಂದಿದೆ.

2010ರಿಂದ 2013ರವರೆಗೆ ಯುಪಿಎ ಆಡಳಿದಲ್ಲಿ ದೇಶದಲ್ಲಿ 1218 ವಿಧ್ವಂಸಕ ಕೃತ್ಯಗಳು, ಭಯೋತ್ಪಾದನೆ ಸಂಬಂಧಿ ದುರ್ಘಟನೆಗಳು ನಡೆದಿದ್ದವು, ಯಾವುದೇ ಉಗ್ರರನ್ನು ಮರಳಿ ಸಮಾಜದ ಮುಖ್ಯವಾಹಿನಿಗೆ ತರುವ ಕಾರ್ಯವಾಗಿರಲಿಲ್ಲ. ಅಲ್ಲದೇ ಭಯೋತ್ಪಾದಕ ಅಟ್ಟಹಾಸ ಮಟ್ಟಹಾಕಲು ಕಠಿಣ ಕ್ರಮಗಳನ್ನು ಡಾ.ಮನಮೋಹನ್  ಸಿಂಗ್ ಪ್ರಧಾನಿ ನೇತೃತ್ವದ ಅಂದಿನ ಕೇಂದ್ರ ಸರ್ಕಾರ ಕೈಗೊಂಡಿರಲಿಲ್ಲ.

ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರದ ಸಾರಥ್ಯ ವಹಿಸಿಕೊಂಡಾಗಿನಿಂದ ಇದುವರೆಗೆ ಕೇವಲ 1094 ಘಟನೆಗಳು ನಡೆದಿದ್ದು, ನೂರಾರು ಭಯೋತ್ಪಾದಕರು ಗನ್ ಕೆಳಗಿಟ್ಟು, ಮುಖ್ಯವಾಹಿನಿಗೆ ಬಂದಿದ್ದಾರೆ. ಅಲ್ಲದೇ ನಾಲ್ಕು ವರ್ಷದಲ್ಲಿ 580 ಉಗ್ರರನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ.  ಅದರಲ್ಲಿ ಉಗ್ರ ಸಂಘಟನೆಯ ಮುಖಂಡರು ಹಲವು ಎಂಬುದು ಗಮನಾರ್ಹ.

ನಾಲ್ಕು ವರ್ಷದಲ್ಲಿ ಉಗ್ರರ ದಾಳಿಯಲ್ಲಿ ಮೃತಪಡುವ ನಾಗರಿಕರ ಸಂಖ್ಯೆಯಲ್ಲೂ ಇಳಿಕೆಯಾಗಿದ್ದು, ನಾಲ್ಕು ವರ್ಷದಲ್ಲಿ ಕೇವಲ 100 ಸಾರ್ವಜನಿಕರು ಮೃತಪಟ್ಟಿದ್ದಾರೆ. ಕೇಂದ್ರ ಸರ್ಕಾರದ ಭಯೋತ್ಪಾದನೆ ವಿರುದ್ಧ ಕೈಗೊಂಡಿರುವ ಕಠಿಣ ಕ್ರಮಗಳಿಂದ ನಿಯಂತ್ರಣಕ್ಕೆ ಬಂದಿದ್ದು, ವಿಶೇಷವಾಗಿ ಕಾಶ್ಮೀರ ಕಣಿವೆಯಲ್ಲಿ ಪ್ರತ್ಯೇಕವಾದಿಗಳ ಉಪಟಳ ಕಡಿಮೆಯಾಗಿದ್ದು, ಕಲ್ಲೆಸೆಯುವವರ ಸಂಖ್ಯೆ ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂಕಿ ಸಂಖ್ಯೆಗಳಿಂದ ಸಾಬೀತಾಗಿದೆ.

ಕಳೆದ ತಿಂಗಳು ಕೇಂದ್ರ ಗೃಹ ಇಲಾಖೆ ಭಯೋತ್ಪಾದನೆ ನಿಯಂತ್ರಣಕ್ಕೆ ನೋಟು ನಿಷೇಧ, ಪ್ರತ್ಯೇಕವಾದಿಗಳ ವಿರುದ್ಧ ಎನ್ಐಎ ತನಿಖೆ, ಭಯೋತ್ಪಾದಕ ಮುಖಂಡರ ಹತ್ಯೆ ಮತ್ತು ಕಾಶ್ಮೀರ ಕಣಿವೆಯ ಸಂವಹನಕಾರ ದಿನೇಶ್ವರ ಶರ್ಮಾ ಅವರ ಕಾರ್ಯ ವೈಖರಿ ಎಂಬ ನಾಲ್ಕು ಕಾರಣಗಳನ್ನು ನೀಡಿತ್ತು.

ಕೇಂದ್ರ ಸರ್ಕಾರ ಭಯೋತ್ಪಾದನೆಗೆ ಶಾಶ್ವತ ಕಡಿವಾಣ ಹಾಕಬೇಕು. ಆ ನಿಟ್ಟಿನಲ್ಲಿ ಭಾರತೀಯ ಸೈನಿಕರು ಕಾರ್ಯನಿರ್ವಹಿಸಬೇಕು. ದಾಳಿಯಾದರೆ ಯಾವುದೇ ಕಾರಣಕ್ಕೂ ಕೈಕಟ್ಟಿ ಕುಳಿತುಕೊಳದೇ ಪ್ರತಿ ದಾಳಿ ನಡೆಸಬೇಕು. ಭಾರತ ಅಶಕ್ತ ರಾಷ್ಟ್ರವಲ್ಲ, ಬಲಿಷ್ಠ ರಾಷ್ಟ್ರ ಎಂಬ ಸಂದೇಶವನ್ನು ತಕ್ಕ ಪ್ರತ್ಯುತ್ತರ ನೀಡುತ್ತಲೇ ಕಳುಹಿಸಬೇಕು ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿರುವುದು ಭಾರತೀಯ ಸೈನ್ಯಕ್ಕೆ ಮತ್ತಷ್ಟು ಸ್ಫೂರ್ತಿ ತುಂಬಿದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search