• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ನೀಡಿದ ಏಟಿಗೆ ನಾಲ್ಕು ವರ್ಷದಲ್ಲಿ ಉಗ್ರರ ಶಕ್ತಿ ಉಡುಗಿ ಹೋಗಿದೆ..!

TNN Correspondent Posted On January 3, 2018


  • Share On Facebook
  • Tweet It

ದೆಹಲಿ: ದೇಶದ ಮುಕುಟ ಕಾಶ್ಮೀರ ಕಣಿವೆ ಸೇರಿ ದೇಶಾದ್ಯಂತ ಉಗ್ರ ಉಪಟಳವನ್ನು ನಿಯಂತ್ರಣ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ನಡೆದ ಉಗ್ರ ದಾಳಿಗಳಿಗಿಂತ ಪ್ರಸ್ತುತ ಕೇಂದ್ರ ಸರ್ಕಾರದ ಆಡಳಿತದಲ್ಲಿ ಉಗ್ರ ದಾಳಿಯಲ್ಲಿ ಭಾರಿ ಪ್ರಮಾಣದ ಇಳಿಕೆ ಕಂಡು ಬಂದಿದೆ.

2010ರಿಂದ 2013ರವರೆಗೆ ಯುಪಿಎ ಆಡಳಿದಲ್ಲಿ ದೇಶದಲ್ಲಿ 1218 ವಿಧ್ವಂಸಕ ಕೃತ್ಯಗಳು, ಭಯೋತ್ಪಾದನೆ ಸಂಬಂಧಿ ದುರ್ಘಟನೆಗಳು ನಡೆದಿದ್ದವು, ಯಾವುದೇ ಉಗ್ರರನ್ನು ಮರಳಿ ಸಮಾಜದ ಮುಖ್ಯವಾಹಿನಿಗೆ ತರುವ ಕಾರ್ಯವಾಗಿರಲಿಲ್ಲ. ಅಲ್ಲದೇ ಭಯೋತ್ಪಾದಕ ಅಟ್ಟಹಾಸ ಮಟ್ಟಹಾಕಲು ಕಠಿಣ ಕ್ರಮಗಳನ್ನು ಡಾ.ಮನಮೋಹನ್  ಸಿಂಗ್ ಪ್ರಧಾನಿ ನೇತೃತ್ವದ ಅಂದಿನ ಕೇಂದ್ರ ಸರ್ಕಾರ ಕೈಗೊಂಡಿರಲಿಲ್ಲ.

ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರದ ಸಾರಥ್ಯ ವಹಿಸಿಕೊಂಡಾಗಿನಿಂದ ಇದುವರೆಗೆ ಕೇವಲ 1094 ಘಟನೆಗಳು ನಡೆದಿದ್ದು, ನೂರಾರು ಭಯೋತ್ಪಾದಕರು ಗನ್ ಕೆಳಗಿಟ್ಟು, ಮುಖ್ಯವಾಹಿನಿಗೆ ಬಂದಿದ್ದಾರೆ. ಅಲ್ಲದೇ ನಾಲ್ಕು ವರ್ಷದಲ್ಲಿ 580 ಉಗ್ರರನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ.  ಅದರಲ್ಲಿ ಉಗ್ರ ಸಂಘಟನೆಯ ಮುಖಂಡರು ಹಲವು ಎಂಬುದು ಗಮನಾರ್ಹ.

ನಾಲ್ಕು ವರ್ಷದಲ್ಲಿ ಉಗ್ರರ ದಾಳಿಯಲ್ಲಿ ಮೃತಪಡುವ ನಾಗರಿಕರ ಸಂಖ್ಯೆಯಲ್ಲೂ ಇಳಿಕೆಯಾಗಿದ್ದು, ನಾಲ್ಕು ವರ್ಷದಲ್ಲಿ ಕೇವಲ 100 ಸಾರ್ವಜನಿಕರು ಮೃತಪಟ್ಟಿದ್ದಾರೆ. ಕೇಂದ್ರ ಸರ್ಕಾರದ ಭಯೋತ್ಪಾದನೆ ವಿರುದ್ಧ ಕೈಗೊಂಡಿರುವ ಕಠಿಣ ಕ್ರಮಗಳಿಂದ ನಿಯಂತ್ರಣಕ್ಕೆ ಬಂದಿದ್ದು, ವಿಶೇಷವಾಗಿ ಕಾಶ್ಮೀರ ಕಣಿವೆಯಲ್ಲಿ ಪ್ರತ್ಯೇಕವಾದಿಗಳ ಉಪಟಳ ಕಡಿಮೆಯಾಗಿದ್ದು, ಕಲ್ಲೆಸೆಯುವವರ ಸಂಖ್ಯೆ ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂಕಿ ಸಂಖ್ಯೆಗಳಿಂದ ಸಾಬೀತಾಗಿದೆ.

ಕಳೆದ ತಿಂಗಳು ಕೇಂದ್ರ ಗೃಹ ಇಲಾಖೆ ಭಯೋತ್ಪಾದನೆ ನಿಯಂತ್ರಣಕ್ಕೆ ನೋಟು ನಿಷೇಧ, ಪ್ರತ್ಯೇಕವಾದಿಗಳ ವಿರುದ್ಧ ಎನ್ಐಎ ತನಿಖೆ, ಭಯೋತ್ಪಾದಕ ಮುಖಂಡರ ಹತ್ಯೆ ಮತ್ತು ಕಾಶ್ಮೀರ ಕಣಿವೆಯ ಸಂವಹನಕಾರ ದಿನೇಶ್ವರ ಶರ್ಮಾ ಅವರ ಕಾರ್ಯ ವೈಖರಿ ಎಂಬ ನಾಲ್ಕು ಕಾರಣಗಳನ್ನು ನೀಡಿತ್ತು.

ಕೇಂದ್ರ ಸರ್ಕಾರ ಭಯೋತ್ಪಾದನೆಗೆ ಶಾಶ್ವತ ಕಡಿವಾಣ ಹಾಕಬೇಕು. ಆ ನಿಟ್ಟಿನಲ್ಲಿ ಭಾರತೀಯ ಸೈನಿಕರು ಕಾರ್ಯನಿರ್ವಹಿಸಬೇಕು. ದಾಳಿಯಾದರೆ ಯಾವುದೇ ಕಾರಣಕ್ಕೂ ಕೈಕಟ್ಟಿ ಕುಳಿತುಕೊಳದೇ ಪ್ರತಿ ದಾಳಿ ನಡೆಸಬೇಕು. ಭಾರತ ಅಶಕ್ತ ರಾಷ್ಟ್ರವಲ್ಲ, ಬಲಿಷ್ಠ ರಾಷ್ಟ್ರ ಎಂಬ ಸಂದೇಶವನ್ನು ತಕ್ಕ ಪ್ರತ್ಯುತ್ತರ ನೀಡುತ್ತಲೇ ಕಳುಹಿಸಬೇಕು ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿರುವುದು ಭಾರತೀಯ ಸೈನ್ಯಕ್ಕೆ ಮತ್ತಷ್ಟು ಸ್ಫೂರ್ತಿ ತುಂಬಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search