• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಸೊಂಟ ಮುರಿದ, ಸ್ಕ್ರೂ ಉಳಿದ ಕೋನ್ ಗಳ ಬಗ್ಗೆ ಯಾರಿಗೂ ಕೇರ್ ಇಲ್ಲ!

TNN Correspondent Posted On July 10, 2017
0


0
Shares
  • Share On Facebook
  • Tweet It

ಬಹುಶ: ಟ್ರಾಫಿಕ್ ಕೋನ್ ನೋಡದವರು ನಗರಗಳಲ್ಲಿ ಯಾರೂ ಇರಲಿಕ್ಕಿಲ್ಲ. ಓ, ಟ್ರಾಫಿಕ್ ಕೋನ್ ಎಂದರೆ ಏನೂ ಎಂದು ಗೊತ್ತಾಗಿಲ್ವ, ಈ ಫೋಟೋ ನೋಡಿ.

ಇದೇನೂ ಒಂದು ನೆಟ್ಟಗೆ ನಿಂತುಕೊಂಡಿದೆ. ಒಂದು ಅರ್ಧ ಮಲಗಿಕೊಂಡಿದೆ. ಒಂದಕ್ಕೆ ಸೊಂಟಕ್ಕೆ ಬಲ ಇಲ್ಲದ ಹಾಗೆ ಬಿದ್ದುಕೊಂಡಿದೆ ಎಂದು ಅರ್ಧಕೊಂಡಿರಾ. ಇವುಗಳು ಇಲ್ಲಿ ನೆಡುವಾಗ ಸರಿಯಾಗಿಯೇ ಇರುತ್ತವೆ. ನಂತರ ಬಸ್ ಸ್ಟಾಪಿಗೆ ಬರುವ ಬಸ್ಸುಗಳು ಇದಕ್ಕೆ ಹೊಡೆದು ಹೊಡೆದು ಇವು ಕ್ರಮೇಣ ನಿಜೀರ್ವ ಅವಸ್ಥೆಗೆ ಬಂದು ಮುಟ್ಟುತ್ತವೆ.
ಮಂಗಳೂರು ಮಹಾನಗರ ಪಾಲಿಕೆ, ರಾಜ್ಯ ಸರಕಾರ ಮತ್ತು ಗೃಹ ಇಲಾಖೆ ಪ್ರತಿ ವರ್ಷ ವಿವಿಧ ಯೋಜನೆಗಳಲ್ಲಿ ರಸ್ತೆ ಸುರಕ್ಷತೆಗೆಂದು ಇಂತಿಷ್ಟು ಹಣವನ್ನು ಮೀಸಲಿಡುವ ಸಂಪ್ರದಾಯವಿದೆ. ಅದರಂತೆ ಪ್ರತಿ ರಸ್ತೆಯ ಅವಶ್ಯಕತೆಗೆ ಅನುಗುಣವಾಗಿ ಆ ಅನುದಾನವನ್ನು ಖರ್ಚು ಮಾಡಲಾಗುತ್ತದೆ. ಉದಾಹರಣೆಗೆ ಬಸ್ ಬೇ ನಿಮರ್ಾಣಕ್ಕೆ. ಮಂಗಳೂರಿನಲ್ಲಿ ಪಾಲಿಕೆ ಒಂದಿಷ್ಟು ಬಸ್ ಬೇಗಳ ನಿಮರ್ಾಣ ಮಾಡಿದೆ. ಆದರೆ ಅದರ ಒಳಗೆ ಹೋಗುವ ಬಸ್ ಗಳು ಕಡಿಮೆ. ಇನ್ನು ಹಲವೆಡೆ ಬಸ್ ಗಳು ತಮಗೆ ಇಷ್ಟ ಬಂದ ಕಡೆ ನಿಲ್ಲವುದು ಬೇಡಾ ಎಂದು ಪೊಲೀಸ್ ಇಲಾಖೆಯವರು ಅನೇಕ ಬಸ್ ಸ್ಟಾಪ್ ಗಳ ಎದುರು ಈ ಟ್ರಾಫಿಕ್ ಕೋನ್ ಗಳನ್ನು ಬಸ್ ಸ್ಟಾಪಿನ ಉದ್ದಗಲಕ್ಕೆ ಅನುಗುಣವಾಗಿ ಅಳವಡಿಸುತ್ತಾರೆ. ಪ್ರಾರಂಭದ ದಿನಗಳಲ್ಲಿ ಇವು ನೋಡಲು ಸುಂದರವಾಗಿ ಕಾಣುತ್ತವೆ. ಆದರೆ ಬರುಬುರುತ್ತಾ ಇವು ಅರ್ಧ ಅಲ್ಲೇ ಪಕ್ಕದ ಚರಂಡಿಯಲ್ಲಿ ಬಿದ್ದು ಅದಕ್ಕೆ ಹೊಡೆದ ಸ್ಕ್ರೂಗಳು ಮತ್ತು ಕೆಳಗಿನ ತುಂಡು ಮಾತ್ರ ರಸ್ತೆಯಲ್ಲಿ ಉಳಿದಿರುತ್ತದೆ.
ಇದರಿಂದ ಏನಾಗುತ್ತದೆ? ಮೊದಲನೇಯದಾಗಿ ನಗರದ ಸೌಂದರ್ಯಕ್ಕೆ ಇವು ಮುಳುವಾಗುತ್ತದೆ. ನೀವು ದೂರದಿಂದ ನೋಡಿದರೆ ಅವು ಬಸ್ಸುಗಳ ಕರಿ ತಾಗಿ ಕಪ್ಪು ಬಣ್ಣಕ್ಕೆ ತಿರುಗಿರುತ್ತವೆ. ಅರ್ಧ ಬಿದ್ದ ರೀತಿಯಲ್ಲಿರುವ ಕೋನ್ ಗಳನ್ನು ನಿಲ್ಲಿಸಲು ಸಾಧ್ಯವಿಲ್ಲದೆ ಅವು ಜೀವ ಕಳೆದುಕೊಳ್ಳುವ ಸ್ಥಿತಿಗೆ ಬಂದು ಮುಟ್ಟಿರುತ್ತವೆ. ಅದನ್ನು ಹಾಗೆ ಬಿಡುವುದರಿಂದ ಅವು ಇಡೀ ಬಸ್ ನಿಲ್ದಾಣಕ್ಕೆ ದೃಷ್ಟಿಬೊಟ್ಟು ಇಟ್ಟಂತೆ ಕಾಣುತ್ತವೆ. ಆದರೆ ಅದನ್ನು ಸರಿಪಡಿಸಲು ಯಾರೂ ಕೂಡ ಮುಂದಾಗುವುದಿಲ್ಲ. ಯಾರೂ ಎಂದರೆ ಜನಸಾಮಾನ್ಯರಲ್ಲ, ಅಧಿಕಾರಿ ವಲಯ.
ಇನ್ನು ಎರಡನೇಯದಾಗಿ ಅನೇಕ ಕಡೆ ನಾವು ನೀವು ನೋಡಿದ ಹಾಗೆ, ಈ ಟ್ರಾಫಿಕ್ ಕೋನ್ ಗಳ ಜಾಗದಲ್ಲಿ ಅದು ಗಟ್ಟಿಯಾಗಿ ನಿಲ್ಲಲು ಸ್ಕ್ರೂ ಅಳವಡಿಸಿರುತ್ತಾರೆ. ಕೋನ್ ಗಳು ಮಾಯವಾದರೂ ಅದಕ್ಕೆ ಅಳವಡಿಸುವ ಸ್ಕ್ರೂಗಳು ಅಲ್ಲೇ ಗೂಟ ಹೊಡೆದು ಇರುತ್ತವೆ. ಇವು ಜನಸಾಮಾನ್ಯರಿಗೆ ನಡೆದುಕೊಂಡು ಹೋಗುವ ತಾಗಿ ಅನೇಕರು ಬಿದ್ದ ಉದಾಹರಣೆಗಳು ಕೂಡ ಇವೆ. ಅಷ್ಟೇ ಅಲ್ಲದೆ ಇದು ಕಾಲಿಗೆ ತಾಗಿ ರಕ್ತ ಬರುವಷ್ಟು ಅಪಾಯಕಾರಿಯಾಗಿ ಕೂಡ ಪರಿಣಮಿಸುತ್ತವೆ. ಆದ್ದರಿಂದ ಸಂಬಂಧಪಟ್ಟವರು ಜನರ ಸುರಕ್ಷತೆ ಮತ್ತು ನಗರದ ಸೌಂದರ್ಯಕ್ಕಾದರೂ ಕೋನ್ ಗಳ ಬಗ್ಗೆ ಎಚ್ಚರಿಕೆ ವಹಿಸಿಕೊಂಡರೆ ಸೂಕ್ತ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search