• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಸೊಂಟ ಮುರಿದ, ಸ್ಕ್ರೂ ಉಳಿದ ಕೋನ್ ಗಳ ಬಗ್ಗೆ ಯಾರಿಗೂ ಕೇರ್ ಇಲ್ಲ!

TNN Correspondent Posted On July 10, 2017
0


0
Shares
  • Share On Facebook
  • Tweet It

ಬಹುಶ: ಟ್ರಾಫಿಕ್ ಕೋನ್ ನೋಡದವರು ನಗರಗಳಲ್ಲಿ ಯಾರೂ ಇರಲಿಕ್ಕಿಲ್ಲ. ಓ, ಟ್ರಾಫಿಕ್ ಕೋನ್ ಎಂದರೆ ಏನೂ ಎಂದು ಗೊತ್ತಾಗಿಲ್ವ, ಈ ಫೋಟೋ ನೋಡಿ.

ಇದೇನೂ ಒಂದು ನೆಟ್ಟಗೆ ನಿಂತುಕೊಂಡಿದೆ. ಒಂದು ಅರ್ಧ ಮಲಗಿಕೊಂಡಿದೆ. ಒಂದಕ್ಕೆ ಸೊಂಟಕ್ಕೆ ಬಲ ಇಲ್ಲದ ಹಾಗೆ ಬಿದ್ದುಕೊಂಡಿದೆ ಎಂದು ಅರ್ಧಕೊಂಡಿರಾ. ಇವುಗಳು ಇಲ್ಲಿ ನೆಡುವಾಗ ಸರಿಯಾಗಿಯೇ ಇರುತ್ತವೆ. ನಂತರ ಬಸ್ ಸ್ಟಾಪಿಗೆ ಬರುವ ಬಸ್ಸುಗಳು ಇದಕ್ಕೆ ಹೊಡೆದು ಹೊಡೆದು ಇವು ಕ್ರಮೇಣ ನಿಜೀರ್ವ ಅವಸ್ಥೆಗೆ ಬಂದು ಮುಟ್ಟುತ್ತವೆ.
ಮಂಗಳೂರು ಮಹಾನಗರ ಪಾಲಿಕೆ, ರಾಜ್ಯ ಸರಕಾರ ಮತ್ತು ಗೃಹ ಇಲಾಖೆ ಪ್ರತಿ ವರ್ಷ ವಿವಿಧ ಯೋಜನೆಗಳಲ್ಲಿ ರಸ್ತೆ ಸುರಕ್ಷತೆಗೆಂದು ಇಂತಿಷ್ಟು ಹಣವನ್ನು ಮೀಸಲಿಡುವ ಸಂಪ್ರದಾಯವಿದೆ. ಅದರಂತೆ ಪ್ರತಿ ರಸ್ತೆಯ ಅವಶ್ಯಕತೆಗೆ ಅನುಗುಣವಾಗಿ ಆ ಅನುದಾನವನ್ನು ಖರ್ಚು ಮಾಡಲಾಗುತ್ತದೆ. ಉದಾಹರಣೆಗೆ ಬಸ್ ಬೇ ನಿಮರ್ಾಣಕ್ಕೆ. ಮಂಗಳೂರಿನಲ್ಲಿ ಪಾಲಿಕೆ ಒಂದಿಷ್ಟು ಬಸ್ ಬೇಗಳ ನಿಮರ್ಾಣ ಮಾಡಿದೆ. ಆದರೆ ಅದರ ಒಳಗೆ ಹೋಗುವ ಬಸ್ ಗಳು ಕಡಿಮೆ. ಇನ್ನು ಹಲವೆಡೆ ಬಸ್ ಗಳು ತಮಗೆ ಇಷ್ಟ ಬಂದ ಕಡೆ ನಿಲ್ಲವುದು ಬೇಡಾ ಎಂದು ಪೊಲೀಸ್ ಇಲಾಖೆಯವರು ಅನೇಕ ಬಸ್ ಸ್ಟಾಪ್ ಗಳ ಎದುರು ಈ ಟ್ರಾಫಿಕ್ ಕೋನ್ ಗಳನ್ನು ಬಸ್ ಸ್ಟಾಪಿನ ಉದ್ದಗಲಕ್ಕೆ ಅನುಗುಣವಾಗಿ ಅಳವಡಿಸುತ್ತಾರೆ. ಪ್ರಾರಂಭದ ದಿನಗಳಲ್ಲಿ ಇವು ನೋಡಲು ಸುಂದರವಾಗಿ ಕಾಣುತ್ತವೆ. ಆದರೆ ಬರುಬುರುತ್ತಾ ಇವು ಅರ್ಧ ಅಲ್ಲೇ ಪಕ್ಕದ ಚರಂಡಿಯಲ್ಲಿ ಬಿದ್ದು ಅದಕ್ಕೆ ಹೊಡೆದ ಸ್ಕ್ರೂಗಳು ಮತ್ತು ಕೆಳಗಿನ ತುಂಡು ಮಾತ್ರ ರಸ್ತೆಯಲ್ಲಿ ಉಳಿದಿರುತ್ತದೆ.
ಇದರಿಂದ ಏನಾಗುತ್ತದೆ? ಮೊದಲನೇಯದಾಗಿ ನಗರದ ಸೌಂದರ್ಯಕ್ಕೆ ಇವು ಮುಳುವಾಗುತ್ತದೆ. ನೀವು ದೂರದಿಂದ ನೋಡಿದರೆ ಅವು ಬಸ್ಸುಗಳ ಕರಿ ತಾಗಿ ಕಪ್ಪು ಬಣ್ಣಕ್ಕೆ ತಿರುಗಿರುತ್ತವೆ. ಅರ್ಧ ಬಿದ್ದ ರೀತಿಯಲ್ಲಿರುವ ಕೋನ್ ಗಳನ್ನು ನಿಲ್ಲಿಸಲು ಸಾಧ್ಯವಿಲ್ಲದೆ ಅವು ಜೀವ ಕಳೆದುಕೊಳ್ಳುವ ಸ್ಥಿತಿಗೆ ಬಂದು ಮುಟ್ಟಿರುತ್ತವೆ. ಅದನ್ನು ಹಾಗೆ ಬಿಡುವುದರಿಂದ ಅವು ಇಡೀ ಬಸ್ ನಿಲ್ದಾಣಕ್ಕೆ ದೃಷ್ಟಿಬೊಟ್ಟು ಇಟ್ಟಂತೆ ಕಾಣುತ್ತವೆ. ಆದರೆ ಅದನ್ನು ಸರಿಪಡಿಸಲು ಯಾರೂ ಕೂಡ ಮುಂದಾಗುವುದಿಲ್ಲ. ಯಾರೂ ಎಂದರೆ ಜನಸಾಮಾನ್ಯರಲ್ಲ, ಅಧಿಕಾರಿ ವಲಯ.
ಇನ್ನು ಎರಡನೇಯದಾಗಿ ಅನೇಕ ಕಡೆ ನಾವು ನೀವು ನೋಡಿದ ಹಾಗೆ, ಈ ಟ್ರಾಫಿಕ್ ಕೋನ್ ಗಳ ಜಾಗದಲ್ಲಿ ಅದು ಗಟ್ಟಿಯಾಗಿ ನಿಲ್ಲಲು ಸ್ಕ್ರೂ ಅಳವಡಿಸಿರುತ್ತಾರೆ. ಕೋನ್ ಗಳು ಮಾಯವಾದರೂ ಅದಕ್ಕೆ ಅಳವಡಿಸುವ ಸ್ಕ್ರೂಗಳು ಅಲ್ಲೇ ಗೂಟ ಹೊಡೆದು ಇರುತ್ತವೆ. ಇವು ಜನಸಾಮಾನ್ಯರಿಗೆ ನಡೆದುಕೊಂಡು ಹೋಗುವ ತಾಗಿ ಅನೇಕರು ಬಿದ್ದ ಉದಾಹರಣೆಗಳು ಕೂಡ ಇವೆ. ಅಷ್ಟೇ ಅಲ್ಲದೆ ಇದು ಕಾಲಿಗೆ ತಾಗಿ ರಕ್ತ ಬರುವಷ್ಟು ಅಪಾಯಕಾರಿಯಾಗಿ ಕೂಡ ಪರಿಣಮಿಸುತ್ತವೆ. ಆದ್ದರಿಂದ ಸಂಬಂಧಪಟ್ಟವರು ಜನರ ಸುರಕ್ಷತೆ ಮತ್ತು ನಗರದ ಸೌಂದರ್ಯಕ್ಕಾದರೂ ಕೋನ್ ಗಳ ಬಗ್ಗೆ ಎಚ್ಚರಿಕೆ ವಹಿಸಿಕೊಂಡರೆ ಸೂಕ್ತ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search