• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯೋಗದತ್ತ ಮುಸ್ಲಿಂ ಮಹಿಳೆಯರ ಚಿತ್ತ

TNN Correspondent Posted On January 5, 2018


  • Share On Facebook
  • Tweet It

ಲಖನೌ:  ಮುಸ್ಲಿಂ ಮಹಿಳೆಯರು ಯೋಗ ಮಾಡಬಾರದು, ಯೋಗ ತರಬೇತಿ ಕೇಂದ್ರಗಳಿಗೆ ಹೋಗಬಾರದು ಎಂಬ ಮುಸ್ಲಿಂ ಮೌಲ್ವಿಗಳ ಫತ್ವಾದ ಮಧ್ಯೆ ಹಲವು ಮಹಿಳೆಯರು ಯೋಗದತ್ತ ಮನಸ್ಸು ವಾಲಿಸುತ್ತಿದ್ದಾರೆ. ವಿಶೇಷವಾಗಿ ಇತ್ತೀಚೆಗೆ ಯೋಗ ಶಿಕ್ಷಕಿಗೆ ಫತ್ವಾ ಹೊರಡಿಸಿದ್ದರಿಂದ, ಯೋಗಾಭ್ಯಾಸಕ್ಕೆ ಮುಂದಾಗಿರುವ ಮಹಿಳೆಯರ ಸಂಖ್ಯೆ ಹೆಚ್ಚಳವಾಗುತ್ತಿದೆ.

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಫತ್ವಾ ವಿರೋಧಿಸಿ ಯೋಗ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಯುವತಿಯೊಬ್ಬಳು ಮಾತನಾಡಿ ‘ಯೋಗ ಮಾನಸಿಕ, ದೈಹಿಕ ರೋಗಗಳಿಗೆ ಪರಿಹಾರ ನೀಡುತ್ತದೆ. ದೇಹಸ್ಥಿತಿಯನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾಳೆ.

ಫತ್ವಾ ಹೊರಡಿಸಿದ್ದರಿಂದ ಸ್ಫೂರ್ತಿ ಪಡೆದಿರುವ ಮುಸ್ಲಿಂ ಯುವತಿಯರು ಉತ್ತರ ಪ್ರದೇಶದ ರಾಂಪುರದ ಗುಲ್ಶನ್ ವೆಲಫೇರ್ ಸೊಸೈಟಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕೇವಲ ಮಹಿಳೆಯರಿಗೆ ಮೀಸಲಾಗಿ ತರಗತಿಯನ್ನು ನಡೆಸಲಾಗುತ್ತಿದ್ದು, ಯಾವುದೇ ಧರ್ಮದ ನಿಬಂಧನೆಗಳು ಈ ಕೇಂದ್ರದಲ್ಲಿ ಇಲ್ಲ. ಈ ಕೇಂದ್ರದಲ್ಲಿ ಅತಿ ಹೆಚ್ಚು ಮುಸ್ಲಿಂ ಯುವತಿಯರೇ ಬರುತ್ತಿರುವುದು ವಿಶೇಷ. ಎಲ್ಲರಿಗೂ ಯೋಗದಿಂದ ಸದೃಡ ಆರೋಗ್ಯ ಕಾಪಾಡಿಕೊಳ್ಳುತ್ತೇವೆ ಎಂಬ ಭರವಸೆ ಮೂಡಿದೆ.

ಕೆಲವು ದಿನಗಳಿಂದ ಯೋಗ ತರಬೇತಿ ಪಡೆಯುತ್ತಿರುವ ಹಲವು ಮಹಿಳೆಯರಲ್ಲಿ ಕಾಣಿಸಿಕೊಂಡಿದ್ದ ಕಾಲಿನ ಕೀಲು ನೋವು ಸೇರಿ ನಾನಾ ಸಮಸ್ಯೆಗಳು ಕಡಿಮೆಯಾಗಿವೆ ಎಂದು ಹೇಳಿಕೊಂಡಿದ್ದಾರೆ. ಕಳೆದ ವರ್ಷದ ಜಾರ್ಖಂಡ್ ನ ರಾಂಚಿಯ ಮುಸ್ಲಿಂ ಯೋಗ ಶಿಕ್ಷಕಿ ವಿರುದ್ಧ ಫತ್ವಾ ಹೊರಡಿಸಲಾಗಿತ್ತು, ಅಲ್ಲದೇ ತರಬೇತಿ ನೀಡುವುದನ್ನು ನಿಲ್ಲಿಸುವಂತೆ ಮನೆ ಮೇಲೆ ದಾಳಿ ನಡೆಸಲಾಗಿತ್ತು.

  • Share On Facebook
  • Tweet It


- Advertisement -


Trending Now
ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
Tulunadu News June 27, 2022
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
Leave A Reply

  • Recent Posts

    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
  • Popular Posts

    • 1
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 2
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 3
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 4
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 5
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search