• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರ್ ಎಸ್ ಎಸ್ ಕಚೇರಿ ಮೇಲೆ ಬಾಂಬ್ ದಾಳಿ ಮಾಡಿದ ಆರೋಪಿ ಮತಾಂಧ ಮುಸ್ತಾಖ್ ಬಂಧನ

TNN Correspondent Posted On January 6, 2018
0


0
Shares
  • Share On Facebook
  • Tweet It

ದೆಹಲಿ: ಚೆನ್ನೈನಲ್ಲಿ 1993ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿ ಮೇಲೆ ದಾಳಿ ಮಾಡಿ, 11 ರಾಷ್ಟ್ರ ಭಕ್ತರ ಸಾವಿಗೆ ಕಾರಣವಾಗಿದ್ದ ಆರೋಪಿ ಮತಾಂಧ ಮುಸ್ತಾಖ್ ನನ್ನು ಕೇಂದ್ರ ತನಿಖಾ ತಂಡ (ಸಿಬಿಐ) ಅಧಿಕಾರಿಗಳು ಬಂಧಿಸಿ, ಜೈಲಿಗಟ್ಟಿದ್ದಾರೆ.

ತಮಿಳುನಾಡು ಮೂಲದ ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್ ಉಮ್ಮಾ ದ ಸದಸ್ಯ 56 ವರ್ಷದ ಮುಸ್ತಾಖ್ ಅಹ್ಮದ್ ನನ್ನು ಚೆನ್ನೈನ ಹೊರವಲಯದಲ್ಲಿ ಬಂಧಿಸಲಾಗಿದೆ. ಮತಾಂಧ ಮುಸ್ತಾಖ್ ನ ಬಗ್ಗೆ ಮಾಹಿತಿ ನೀಡಿದ್ದವರಿಗೆ ಸಿಬಿಐ 10 ಲಕ್ಷ ಹಣ ಘೋಷಿಸಿದ್ದರು.

ಚೆನ್ನೈನ ಚೆತ್ ಪುಟ್ ನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿ ಮೇಲೆ 1993 ಆಗಸ್ಟ್ 8ರಂದು ಬಾಂಬ್ ದಾಳಿ ನಡೆಸಿದ್ದರು. ದಾಳಿಯಲ್ಲಿ 11 ಜನರು ಮೃತಪಟ್ಟು, 7 ಜನರಿಗೆ ಗಾಯಗಳಾಗಿದ್ದವು. ಮುಸ್ತಾಖ್ ವಿರುದ್ಧ ಆರ್ ಡಿಎಕ್ಸ್ ಬಾಂಬ್ ಮೂಲಕ ದಾಳಿ ನಡೆಸುವುದು ಮತ್ತು ಇತರರಿಗೆ ಬಾಂಬ್ ಸರಬರಾಜು ಮಾಡುತ್ತಿರುವ ಆರೋಪವು ಇದೆ.

1994 ಜೂನ್ 8 ರಂದು ತನಿಖಾಧಿಕಾರಿಗಳು 18 ಜನರ ವಿರುದ್ಧ ಭಯೋತ್ಪಾದನೆ ಹಾಗೂ ವಿಧ್ವಂಸಕ ಚಟುವಟಿಕೆಗಳ ಕಾಯಿದೆ ಪ್ರಕಾರ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 2007 ಜೂನ್ 21 ರಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯ 11 ಜನರನ್ನು ಅಪರಾಧಿಗಳೆಂದು ಹಾಗೂ ಸಾಕ್ಷಾಧಾರ ಕೊರತೆ ಹಿನ್ನೆಲೆಯಲ್ಲಿ ನಿಷೇಧಿತ ಉಗ್ರ ಸಂಘಟನೆ ಅಲ್ ಉಮ್ಮಾ ಸ್ಥಾಪಕ ಎಸ್ .ಎ ಭಾಷಾ ಸೇರಿ ನಾಲ್ವರ ವಿರುದ್ಧದ ಪ್ರಕರಣವನ್ನು ಖುಲಾಸೆಗೊಳಿಸಿತ್ತು. ಐಎಸ್ ಐ ಏಜೆಂಟ್ ಇಮಾಮ್ ಅಲಿ ಮದುರೈ ಜೈಲಿನಿಂದ ತಪ್ಪಿಸಿಕೊಂಡು ಹೋಗಿದ್ದಾಗ ಬೆಂಗಳೂರಿನಲ್ಲಿ ಪೊಲೀಸರ ಗುಂಡಿಗೆ ಬಲಿಯಾಗಿದ್ದ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search