• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರ್ ಎಸ್ ಎಸ್ ಕಚೇರಿ ಮೇಲೆ ಬಾಂಬ್ ದಾಳಿ ಮಾಡಿದ ಆರೋಪಿ ಮತಾಂಧ ಮುಸ್ತಾಖ್ ಬಂಧನ

TNN Correspondent Posted On January 6, 2018
0


0
Shares
  • Share On Facebook
  • Tweet It

ದೆಹಲಿ: ಚೆನ್ನೈನಲ್ಲಿ 1993ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿ ಮೇಲೆ ದಾಳಿ ಮಾಡಿ, 11 ರಾಷ್ಟ್ರ ಭಕ್ತರ ಸಾವಿಗೆ ಕಾರಣವಾಗಿದ್ದ ಆರೋಪಿ ಮತಾಂಧ ಮುಸ್ತಾಖ್ ನನ್ನು ಕೇಂದ್ರ ತನಿಖಾ ತಂಡ (ಸಿಬಿಐ) ಅಧಿಕಾರಿಗಳು ಬಂಧಿಸಿ, ಜೈಲಿಗಟ್ಟಿದ್ದಾರೆ.

ತಮಿಳುನಾಡು ಮೂಲದ ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್ ಉಮ್ಮಾ ದ ಸದಸ್ಯ 56 ವರ್ಷದ ಮುಸ್ತಾಖ್ ಅಹ್ಮದ್ ನನ್ನು ಚೆನ್ನೈನ ಹೊರವಲಯದಲ್ಲಿ ಬಂಧಿಸಲಾಗಿದೆ. ಮತಾಂಧ ಮುಸ್ತಾಖ್ ನ ಬಗ್ಗೆ ಮಾಹಿತಿ ನೀಡಿದ್ದವರಿಗೆ ಸಿಬಿಐ 10 ಲಕ್ಷ ಹಣ ಘೋಷಿಸಿದ್ದರು.

ಚೆನ್ನೈನ ಚೆತ್ ಪುಟ್ ನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿ ಮೇಲೆ 1993 ಆಗಸ್ಟ್ 8ರಂದು ಬಾಂಬ್ ದಾಳಿ ನಡೆಸಿದ್ದರು. ದಾಳಿಯಲ್ಲಿ 11 ಜನರು ಮೃತಪಟ್ಟು, 7 ಜನರಿಗೆ ಗಾಯಗಳಾಗಿದ್ದವು. ಮುಸ್ತಾಖ್ ವಿರುದ್ಧ ಆರ್ ಡಿಎಕ್ಸ್ ಬಾಂಬ್ ಮೂಲಕ ದಾಳಿ ನಡೆಸುವುದು ಮತ್ತು ಇತರರಿಗೆ ಬಾಂಬ್ ಸರಬರಾಜು ಮಾಡುತ್ತಿರುವ ಆರೋಪವು ಇದೆ.

1994 ಜೂನ್ 8 ರಂದು ತನಿಖಾಧಿಕಾರಿಗಳು 18 ಜನರ ವಿರುದ್ಧ ಭಯೋತ್ಪಾದನೆ ಹಾಗೂ ವಿಧ್ವಂಸಕ ಚಟುವಟಿಕೆಗಳ ಕಾಯಿದೆ ಪ್ರಕಾರ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 2007 ಜೂನ್ 21 ರಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯ 11 ಜನರನ್ನು ಅಪರಾಧಿಗಳೆಂದು ಹಾಗೂ ಸಾಕ್ಷಾಧಾರ ಕೊರತೆ ಹಿನ್ನೆಲೆಯಲ್ಲಿ ನಿಷೇಧಿತ ಉಗ್ರ ಸಂಘಟನೆ ಅಲ್ ಉಮ್ಮಾ ಸ್ಥಾಪಕ ಎಸ್ .ಎ ಭಾಷಾ ಸೇರಿ ನಾಲ್ವರ ವಿರುದ್ಧದ ಪ್ರಕರಣವನ್ನು ಖುಲಾಸೆಗೊಳಿಸಿತ್ತು. ಐಎಸ್ ಐ ಏಜೆಂಟ್ ಇಮಾಮ್ ಅಲಿ ಮದುರೈ ಜೈಲಿನಿಂದ ತಪ್ಪಿಸಿಕೊಂಡು ಹೋಗಿದ್ದಾಗ ಬೆಂಗಳೂರಿನಲ್ಲಿ ಪೊಲೀಸರ ಗುಂಡಿಗೆ ಬಲಿಯಾಗಿದ್ದ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search