• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿಗೆ ರುಚಿ ರುಚಿ ಅಡುಗೆ ಬಡಿಸಿದ ನೆಚ್ಚಿನ ಬಾಣಸಿಗ ಸಾವು

TNN Correspondent Posted On January 6, 2018
0


0
Shares
  • Share On Facebook
  • Tweet It

ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಾರಣಾಸಿ ಭೇಟಿ ವೇಳೆ ಆಹಾರ ಸಿದ್ಧಪಡಿಸುತ್ತಿದ್ದ, ನೆಚ್ಚಿನ ಬಾಣಸಿಗ  ಮೆದುಳಿನ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭೆ ಕ್ಷೇತ್ರವಾದ ವಾರಣಾಸಿ ಭೇಟಿ ವೇಳೆ, ಮೋದಿ ಅವರಿಗೆ ಅಚ್ಚುಮೆಚ್ಚಾದ ಅಡುಗೆ ಸಿದ್ಧಪಡಿಸುತ್ತಿದ್ದ ಬಾಣಸಿಗ ಪ್ರದೀಪ್ ಕುಮಾರ ಮಲ್ಹೋತ್ರಾ ಮೃತಪಟ್ಟಿದ್ದಾರೆ.

ಪ್ರದೀಪ್ ಕುಮಾರ ಅವರ ಅಡುಗೆ ರುಚಿಗೆ ಮೋದಿ ಮನಸೋತ್ತಿದ್ದು, ಅವರನ್ನು ಹಲವು ಬಾರಿ ಹೊಗಳಿದ್ದರು. ಪ್ರಧಾನಿ ನರೇಂದ್ರ ಮೋದಿ ಪ್ರತಿ ಬಾರಿ ವಾರಣಾಸಿಗೆ ಭೇಟಿ ನೀಡಿದ್ದಾಗ ಡಿಸೆಲ್ ಲೊಕೋಮೊಟಿವ್ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುತ್ತಿದ್ದು, ಅಲ್ಲಿ ಅವರಿಗೆ ಪ್ರದೀಪ್ ಕುಮಾರ ಅಡುಗೆ ಸಿದ್ಧಪಡಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಮೋದಿ ಅವರಿಗೆ ಇಷ್ಟವಾದ ಶುಂಠಿ ಟೀ ಯಿಂದ ಹಿಡಿದ ಗುಜರಾತಿ ಆಹಾರಗಳು ಮತ್ತು ಸೂಪ್ ಗಳನ್ನು, ಸಲಾಡ್ಸ್, ಕಾಶಿಯ ವಿಶೇಷ ಆಹಾರಗಳಾದ ಬಡಾಯಿ, ಸಬ್ಜಿ ಮತ್ತು ಬನಾರಸಿ ರಸ್ ಮಲಾಯಿಗಳನ್ನು ಸಿದ್ಧಪಡಿಸುತ್ತಿದ್ದರು.

ಪ್ರದೀಪ್ ಕುಮಾರ ರಾಜಸ್ಥಾನ ಮೂಲದವರಾಗಿದ್ದು, 1963 ರಲ್ಲಿ ಅವರ ತಂದೆಗೆ ವರ್ಗಾವಣೆಯಾಗಿದ್ದರಿಂದ ವಾರಣಾಸಿಯಲ್ಲೇ ವಾಸಿಸುತ್ತಿದ್ದರು. 1966ರಲ್ಲಿ ಕ್ಯಾಂಟೀನ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಂತರ ಅವರು ಅತಿಥಿ ಗೃಹಗಳಲ್ಲಿ ವಾಸಿಸುವ ವಿವಿಐಪಿಗಳಿಗೆ ಆಹಾರ ಸಿದ್ಧಪಡಿಸುವ ಕೆಲಸ ಮಾಡುತ್ತಿದ್ದರು. ಅವರ ಸೇವಾ ಅವಧಿ 2005ರಲ್ಲಿ ಮುಕ್ತಾಯವಾಗಿದ್ದರು, ಅವರು ತಮ್ಮ ಕಾರ್ಯವನ್ನು ಮುಂದುವರಿಸಿದ್ದರು.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search