• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೀಪಕ್ ಕುಟುಂಬಕ್ಕೆ ನೆರವಿನ ಮಹಾಪುರ : ಸರ್ಕಾರದ ಹಂಗಿಲ್ಲ ಎಂದು ಸಾಬೀತುಪಡಿಸಿದ ಸ್ವಾಭಿಮಾನಿ ಹಿಂದೂಗಳು

TNN Correspondent Posted On January 6, 2018
0


0
Shares
  • Share On Facebook
  • Tweet It

ಮಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಂದೂಗಳ ಸರಣಿ ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಚಕಾರ ಎತ್ತುತ್ತಿಲ್ಲ. ಕಾಟಾಚಾರಕ್ಕೆ ತನಿಖೆ ನಡೆಸಿ, ಕೆಲವೊಮ್ಮೆ ತನಿಖೆ ಆರಂಭವಾಗುವ ಮುನ್ನವೇ ಗೃಹ ಸಚಿವರು, ಮುಖ್ಯಮಂತ್ರಿಗಳೇ ಷರಾ ಬರೆದು ಬಿಟ್ಟಿದ್ದಾರೆ. ಇನ್ನು ಹತ್ಯೆಯಾದವರ ಕುಟುಂಬದವರು ನಿತ್ಯ ಕಣ್ಣೀರಲ್ಲಿ ಕೈ ತೊಳೆದುಕೊಳ್ಳುತ್ತಿದ್ದರೂ ಸರ್ಕಾರ ಕಾಟಾಚಾರಕ್ಕೆ ಕೆಲ ಲಕ್ಷ ನೀಡಿ, ಕೈ ತೊಳೆದುಕೊಂಡು, ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಆದರೆ ಹಿಂದೂ ಸಮಾಜದ ಯಾವುದೇ ವ್ಯಕ್ತಿ ಸಂಕಷ್ಟದಲ್ಲಿದ್ದರೂ ಸ್ಪಂದಿಸುವ ಹೃದಯ ವೈಶಾಲ್ಯವುಳ್ಳ ಹಿಂದುಗಳಿದ್ದಾರೆ ಎಂಬುದು ಮತ್ತೆ ಸಾಬೀತಾಗಿದೆ.

ಇತ್ತೀಚೆಗೆ ಮಂಗಳೂರಿನಲ್ಲಿ ಜಿಹಾದಿಗಳ ದಾಳಿಗೆ ಬಲಿಯಾಗಿರುವ ದೀಪಕ್ ರಾವ್ ಕುಟುಂಬದ ಬೆನ್ನೆಲುಬಾಗಿ ಹಿಂದೂ ಸಮಾಜ ನಿಂತಿದೆ. ತಾಯಿ, ವಿಕಲಚೇತನ ಸಹೋದರ ಸೇರಿ ಮೂವರ ಆ ಚಿಕ್ಕ ಕುಟುಂಬಕ್ಕೆ ಆಶ್ರಯವಾಗಿದ್ದ ದೀಪಕ್ ರಾವ್ ಇಂದು ಜಿಹಾದಿಗಳ ಕ್ರೌರ್ಯಕ್ಕೆ ಬಲಿಯಾಗಿದ್ದಾರೆ. ದೀಪಕ್ ಹತ್ಯೆಯಾಗಿದ್ದರಿಂದ ಅವರ ಕುಟುಂಬ ಅಕ್ಷರಶಃ ನಲುಗಿ ಹೋಗಿದೆ. ದೀಪಕ್ ತಾಯಿ ಮತ್ತು ಸಹೋದರ ನಿತ್ಯ ಕಣ್ಣೀರಲ್ಲಿ ಕೈತೊಳೆದುಕೊಳ್ಳುತ್ತಿದ್ದಾರೆ. ಆದರೆ ಅವರ ನೋವಿಗೆ ಇಡೀ ಹಿಂದೂ ಸಮಾಜ ಸ್ಪಂದಿಸಿದೆ, ಹಿಂದುಗಳ ಕುಟುಂಬ ಸಂಕಷ್ಟದಲ್ಲಿರುವುದನ್ನು ನೋಡಿ ಸಾವಿರಾರು ಹಿಂದೂಗಳು ಸಹಾಯ ಹಸ್ತಚಾಚಿದ್ದಾರೆ.

ಅದರ ಫಲವಾಗಿ ಇದೀಗ ದೀಪಕ್ ರಾವ್ ಅವರ ತಾಯಿಯ ಬ್ಯಾಂಕ್ ಖಾತೆಗೆ 17 ಲಕ್ಷ ರೂಪಾಯಿ ಜಮೆ ಆಗಿದ್ದು, ಈ ಸಂಖ್ಯೆ ಇನ್ನು ಮುಂದುವರಿಯುತ್ತಿದೆ. ರಾಜ್ಯ, ದೇಶ್ಯಾದ್ಯಂತ ಇರುವ ಲಕ್ಷಾಂತರ ಹಿಂದೂಗಳು ತಮ್ಮ ಕೈಲಾದಷ್ಟು ಸಹಾಯ ಮಾಡುವ ಮೂಲಕ ಹಿಂದೂ ಸಮಾಜ ಸರ್ಕಾರದ ದುಡ್ಡಿಗೆ ಕೈಯೊಡ್ಡುವುದಿಲ್ಲ. ಸತ್ತವರಿಗೆ ನ್ಯಾಯ ಕೊಡಿಸಿ, ನಮ್ಮವರನ್ನು ನಾವು ಸಲಹಿಕೊಳ್ಳುತ್ತೇವೆ. ಕೇವಲ ರಕ್ಷಣೆ ನೀಡಿ, ದುಷ್ಟ ಮತಾಂಧರ ಕ್ರೌರ್ಯ ನಿಯಂತ್ರಿಸಿ ಎಂಬ ಸಂದೇಶವನ್ನು ಸರ್ಕಾರಕ್ಕೆ ರವಾನಿಸಿದ್ದಾರೆ.

ದೀಪಕ್ ರಾವ್ ಅವರ ಕುಟುಂಬದ ಸಂಕಷ್ಟದ ಸ್ಥಿತಿ ಸಾಮಾಜಿಕ ಜಾಲತಾಣದ ಮೂಲಕ ಎಲ್ಲ ಹಿಂದೂಗಳಿಗೆ ತಲುಪಿತ್ತು. ಅವರ ಕಣ್ಣೀರು ನೋಡಿ, ಸಾಗರೋಪಾದಿಯಲ್ಲಿ ಹಿಂದೂಗಳು ಸಹಾಯಕ್ಕೆ ಮುಂದಾಗಿದ್ದು, ಹಿಂದೂಗಳಿಗೆ ಮತ್ತಷ್ಟು  ಸ್ಥೈರ್ಯ ಬಂದಿದೆ. ಇದೇ ಹಿಂದೂಗಳ ತಾಕತ್ತು ಎಂಬ ಸಂದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಳುಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search