• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೀಪಕ್ ಕುಟುಂಬಕ್ಕೆ ನೆರವಿನ ಮಹಾಪುರ : ಸರ್ಕಾರದ ಹಂಗಿಲ್ಲ ಎಂದು ಸಾಬೀತುಪಡಿಸಿದ ಸ್ವಾಭಿಮಾನಿ ಹಿಂದೂಗಳು

TNN Correspondent Posted On January 6, 2018
0


0
Shares
  • Share On Facebook
  • Tweet It

ಮಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಂದೂಗಳ ಸರಣಿ ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಚಕಾರ ಎತ್ತುತ್ತಿಲ್ಲ. ಕಾಟಾಚಾರಕ್ಕೆ ತನಿಖೆ ನಡೆಸಿ, ಕೆಲವೊಮ್ಮೆ ತನಿಖೆ ಆರಂಭವಾಗುವ ಮುನ್ನವೇ ಗೃಹ ಸಚಿವರು, ಮುಖ್ಯಮಂತ್ರಿಗಳೇ ಷರಾ ಬರೆದು ಬಿಟ್ಟಿದ್ದಾರೆ. ಇನ್ನು ಹತ್ಯೆಯಾದವರ ಕುಟುಂಬದವರು ನಿತ್ಯ ಕಣ್ಣೀರಲ್ಲಿ ಕೈ ತೊಳೆದುಕೊಳ್ಳುತ್ತಿದ್ದರೂ ಸರ್ಕಾರ ಕಾಟಾಚಾರಕ್ಕೆ ಕೆಲ ಲಕ್ಷ ನೀಡಿ, ಕೈ ತೊಳೆದುಕೊಂಡು, ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಆದರೆ ಹಿಂದೂ ಸಮಾಜದ ಯಾವುದೇ ವ್ಯಕ್ತಿ ಸಂಕಷ್ಟದಲ್ಲಿದ್ದರೂ ಸ್ಪಂದಿಸುವ ಹೃದಯ ವೈಶಾಲ್ಯವುಳ್ಳ ಹಿಂದುಗಳಿದ್ದಾರೆ ಎಂಬುದು ಮತ್ತೆ ಸಾಬೀತಾಗಿದೆ.

ಇತ್ತೀಚೆಗೆ ಮಂಗಳೂರಿನಲ್ಲಿ ಜಿಹಾದಿಗಳ ದಾಳಿಗೆ ಬಲಿಯಾಗಿರುವ ದೀಪಕ್ ರಾವ್ ಕುಟುಂಬದ ಬೆನ್ನೆಲುಬಾಗಿ ಹಿಂದೂ ಸಮಾಜ ನಿಂತಿದೆ. ತಾಯಿ, ವಿಕಲಚೇತನ ಸಹೋದರ ಸೇರಿ ಮೂವರ ಆ ಚಿಕ್ಕ ಕುಟುಂಬಕ್ಕೆ ಆಶ್ರಯವಾಗಿದ್ದ ದೀಪಕ್ ರಾವ್ ಇಂದು ಜಿಹಾದಿಗಳ ಕ್ರೌರ್ಯಕ್ಕೆ ಬಲಿಯಾಗಿದ್ದಾರೆ. ದೀಪಕ್ ಹತ್ಯೆಯಾಗಿದ್ದರಿಂದ ಅವರ ಕುಟುಂಬ ಅಕ್ಷರಶಃ ನಲುಗಿ ಹೋಗಿದೆ. ದೀಪಕ್ ತಾಯಿ ಮತ್ತು ಸಹೋದರ ನಿತ್ಯ ಕಣ್ಣೀರಲ್ಲಿ ಕೈತೊಳೆದುಕೊಳ್ಳುತ್ತಿದ್ದಾರೆ. ಆದರೆ ಅವರ ನೋವಿಗೆ ಇಡೀ ಹಿಂದೂ ಸಮಾಜ ಸ್ಪಂದಿಸಿದೆ, ಹಿಂದುಗಳ ಕುಟುಂಬ ಸಂಕಷ್ಟದಲ್ಲಿರುವುದನ್ನು ನೋಡಿ ಸಾವಿರಾರು ಹಿಂದೂಗಳು ಸಹಾಯ ಹಸ್ತಚಾಚಿದ್ದಾರೆ.

ಅದರ ಫಲವಾಗಿ ಇದೀಗ ದೀಪಕ್ ರಾವ್ ಅವರ ತಾಯಿಯ ಬ್ಯಾಂಕ್ ಖಾತೆಗೆ 17 ಲಕ್ಷ ರೂಪಾಯಿ ಜಮೆ ಆಗಿದ್ದು, ಈ ಸಂಖ್ಯೆ ಇನ್ನು ಮುಂದುವರಿಯುತ್ತಿದೆ. ರಾಜ್ಯ, ದೇಶ್ಯಾದ್ಯಂತ ಇರುವ ಲಕ್ಷಾಂತರ ಹಿಂದೂಗಳು ತಮ್ಮ ಕೈಲಾದಷ್ಟು ಸಹಾಯ ಮಾಡುವ ಮೂಲಕ ಹಿಂದೂ ಸಮಾಜ ಸರ್ಕಾರದ ದುಡ್ಡಿಗೆ ಕೈಯೊಡ್ಡುವುದಿಲ್ಲ. ಸತ್ತವರಿಗೆ ನ್ಯಾಯ ಕೊಡಿಸಿ, ನಮ್ಮವರನ್ನು ನಾವು ಸಲಹಿಕೊಳ್ಳುತ್ತೇವೆ. ಕೇವಲ ರಕ್ಷಣೆ ನೀಡಿ, ದುಷ್ಟ ಮತಾಂಧರ ಕ್ರೌರ್ಯ ನಿಯಂತ್ರಿಸಿ ಎಂಬ ಸಂದೇಶವನ್ನು ಸರ್ಕಾರಕ್ಕೆ ರವಾನಿಸಿದ್ದಾರೆ.

ದೀಪಕ್ ರಾವ್ ಅವರ ಕುಟುಂಬದ ಸಂಕಷ್ಟದ ಸ್ಥಿತಿ ಸಾಮಾಜಿಕ ಜಾಲತಾಣದ ಮೂಲಕ ಎಲ್ಲ ಹಿಂದೂಗಳಿಗೆ ತಲುಪಿತ್ತು. ಅವರ ಕಣ್ಣೀರು ನೋಡಿ, ಸಾಗರೋಪಾದಿಯಲ್ಲಿ ಹಿಂದೂಗಳು ಸಹಾಯಕ್ಕೆ ಮುಂದಾಗಿದ್ದು, ಹಿಂದೂಗಳಿಗೆ ಮತ್ತಷ್ಟು  ಸ್ಥೈರ್ಯ ಬಂದಿದೆ. ಇದೇ ಹಿಂದೂಗಳ ತಾಕತ್ತು ಎಂಬ ಸಂದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಳುಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search