• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೀಪಕ್ ಕುಟುಂಬಕ್ಕೆ ನೆರವಿನ ಮಹಾಪುರ : ಸರ್ಕಾರದ ಹಂಗಿಲ್ಲ ಎಂದು ಸಾಬೀತುಪಡಿಸಿದ ಸ್ವಾಭಿಮಾನಿ ಹಿಂದೂಗಳು

TNN Correspondent Posted On January 6, 2018
0


0
Shares
  • Share On Facebook
  • Tweet It

ಮಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಂದೂಗಳ ಸರಣಿ ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಚಕಾರ ಎತ್ತುತ್ತಿಲ್ಲ. ಕಾಟಾಚಾರಕ್ಕೆ ತನಿಖೆ ನಡೆಸಿ, ಕೆಲವೊಮ್ಮೆ ತನಿಖೆ ಆರಂಭವಾಗುವ ಮುನ್ನವೇ ಗೃಹ ಸಚಿವರು, ಮುಖ್ಯಮಂತ್ರಿಗಳೇ ಷರಾ ಬರೆದು ಬಿಟ್ಟಿದ್ದಾರೆ. ಇನ್ನು ಹತ್ಯೆಯಾದವರ ಕುಟುಂಬದವರು ನಿತ್ಯ ಕಣ್ಣೀರಲ್ಲಿ ಕೈ ತೊಳೆದುಕೊಳ್ಳುತ್ತಿದ್ದರೂ ಸರ್ಕಾರ ಕಾಟಾಚಾರಕ್ಕೆ ಕೆಲ ಲಕ್ಷ ನೀಡಿ, ಕೈ ತೊಳೆದುಕೊಂಡು, ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಆದರೆ ಹಿಂದೂ ಸಮಾಜದ ಯಾವುದೇ ವ್ಯಕ್ತಿ ಸಂಕಷ್ಟದಲ್ಲಿದ್ದರೂ ಸ್ಪಂದಿಸುವ ಹೃದಯ ವೈಶಾಲ್ಯವುಳ್ಳ ಹಿಂದುಗಳಿದ್ದಾರೆ ಎಂಬುದು ಮತ್ತೆ ಸಾಬೀತಾಗಿದೆ.

ಇತ್ತೀಚೆಗೆ ಮಂಗಳೂರಿನಲ್ಲಿ ಜಿಹಾದಿಗಳ ದಾಳಿಗೆ ಬಲಿಯಾಗಿರುವ ದೀಪಕ್ ರಾವ್ ಕುಟುಂಬದ ಬೆನ್ನೆಲುಬಾಗಿ ಹಿಂದೂ ಸಮಾಜ ನಿಂತಿದೆ. ತಾಯಿ, ವಿಕಲಚೇತನ ಸಹೋದರ ಸೇರಿ ಮೂವರ ಆ ಚಿಕ್ಕ ಕುಟುಂಬಕ್ಕೆ ಆಶ್ರಯವಾಗಿದ್ದ ದೀಪಕ್ ರಾವ್ ಇಂದು ಜಿಹಾದಿಗಳ ಕ್ರೌರ್ಯಕ್ಕೆ ಬಲಿಯಾಗಿದ್ದಾರೆ. ದೀಪಕ್ ಹತ್ಯೆಯಾಗಿದ್ದರಿಂದ ಅವರ ಕುಟುಂಬ ಅಕ್ಷರಶಃ ನಲುಗಿ ಹೋಗಿದೆ. ದೀಪಕ್ ತಾಯಿ ಮತ್ತು ಸಹೋದರ ನಿತ್ಯ ಕಣ್ಣೀರಲ್ಲಿ ಕೈತೊಳೆದುಕೊಳ್ಳುತ್ತಿದ್ದಾರೆ. ಆದರೆ ಅವರ ನೋವಿಗೆ ಇಡೀ ಹಿಂದೂ ಸಮಾಜ ಸ್ಪಂದಿಸಿದೆ, ಹಿಂದುಗಳ ಕುಟುಂಬ ಸಂಕಷ್ಟದಲ್ಲಿರುವುದನ್ನು ನೋಡಿ ಸಾವಿರಾರು ಹಿಂದೂಗಳು ಸಹಾಯ ಹಸ್ತಚಾಚಿದ್ದಾರೆ.

ಅದರ ಫಲವಾಗಿ ಇದೀಗ ದೀಪಕ್ ರಾವ್ ಅವರ ತಾಯಿಯ ಬ್ಯಾಂಕ್ ಖಾತೆಗೆ 17 ಲಕ್ಷ ರೂಪಾಯಿ ಜಮೆ ಆಗಿದ್ದು, ಈ ಸಂಖ್ಯೆ ಇನ್ನು ಮುಂದುವರಿಯುತ್ತಿದೆ. ರಾಜ್ಯ, ದೇಶ್ಯಾದ್ಯಂತ ಇರುವ ಲಕ್ಷಾಂತರ ಹಿಂದೂಗಳು ತಮ್ಮ ಕೈಲಾದಷ್ಟು ಸಹಾಯ ಮಾಡುವ ಮೂಲಕ ಹಿಂದೂ ಸಮಾಜ ಸರ್ಕಾರದ ದುಡ್ಡಿಗೆ ಕೈಯೊಡ್ಡುವುದಿಲ್ಲ. ಸತ್ತವರಿಗೆ ನ್ಯಾಯ ಕೊಡಿಸಿ, ನಮ್ಮವರನ್ನು ನಾವು ಸಲಹಿಕೊಳ್ಳುತ್ತೇವೆ. ಕೇವಲ ರಕ್ಷಣೆ ನೀಡಿ, ದುಷ್ಟ ಮತಾಂಧರ ಕ್ರೌರ್ಯ ನಿಯಂತ್ರಿಸಿ ಎಂಬ ಸಂದೇಶವನ್ನು ಸರ್ಕಾರಕ್ಕೆ ರವಾನಿಸಿದ್ದಾರೆ.

ದೀಪಕ್ ರಾವ್ ಅವರ ಕುಟುಂಬದ ಸಂಕಷ್ಟದ ಸ್ಥಿತಿ ಸಾಮಾಜಿಕ ಜಾಲತಾಣದ ಮೂಲಕ ಎಲ್ಲ ಹಿಂದೂಗಳಿಗೆ ತಲುಪಿತ್ತು. ಅವರ ಕಣ್ಣೀರು ನೋಡಿ, ಸಾಗರೋಪಾದಿಯಲ್ಲಿ ಹಿಂದೂಗಳು ಸಹಾಯಕ್ಕೆ ಮುಂದಾಗಿದ್ದು, ಹಿಂದೂಗಳಿಗೆ ಮತ್ತಷ್ಟು  ಸ್ಥೈರ್ಯ ಬಂದಿದೆ. ಇದೇ ಹಿಂದೂಗಳ ತಾಕತ್ತು ಎಂಬ ಸಂದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಳುಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search