• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾತಿ, ಭೇದ ಮರೆತು ಜನ್ಮಭೂಮಿಗಾಗಿ ಒಗ್ಗೂಡಿ: ಭಾಗವತ್ ಸಲಹೆ

TNN Correspondent Posted On January 6, 2018
0


0
Shares
  • Share On Facebook
  • Tweet It

ಉಜ್ಜಯಿನಿ: ಭಾರತದ ನಿವಾಸಿಗಳು ಜಾತಿ, ಧರ್ಮಗಳನ್ನು ಮರೆತು ಜನ್ಮಭೂಮಿಯ ಅಭ್ಯುದ್ಯಯಕ್ಕಾಗಿ ಹೋರಾಡಲು ಒಂದುಗೂಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದರು.

ಉಜ್ಜಯಿನಿಯಲ್ಲಿ ನಡೆದ ಭಾರತ ಮಾತೆಯ 16 ಅಡಿಯ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ, ಪ್ರತಿಮೆ ಉದ್ಘಾಟಿಸಿ ಮಾತನಾಡಿ, ಭಾರತ ಕೇವಲ ಭೂಮಿಯ ಒಂದು ಭಾಗವಲ್ಲ, ಇದು ಭಾವನೆಗಳನ್ನು, ಸಂಸ್ಕೃತಿಯನ್ನು, ದಿವ್ಯ ಸಂದೇಶವನ್ನು ನೀಡುವುದು ಸೇರಿ ಎಲ್ಲವನ್ನು ಮೀರಿದ್ದು ಎಂದು ಹೇಳಿದ್ದಾರೆ.

ಭಾರತವಾಸಿಗಳ ಮೂಲ ಗುರಿ ಜನ್ಮಭೂಮಿ ರಕ್ಷಿಸುವುದೇ ಆಗಿರಬೇಕು. ಜನರು ಜಾತಿವಾದ ದ್ವೇಷ, ಮತ್ಸರಗಳಿಂದ ಹೊರಬರಬೇಕು. ಆಗ ಜನ್ಮಭೂಮಿಯ ರಕ್ಷಣೆ ಆಗುತ್ತದೆ ಎಂದು ಹೇಳಿದರು.

ಅಣ್ಣಾದೊರೈ ಸ್ಮರಿಸಿದ ಭಾಗವತ್: ತಮಿಳುನಾಡಿನ್ ಖಟರ್ ದ್ರಾವಿಡವಾದಿ, ಡಿಎಂಕೆ ಪಕ್ಷದ ಸಂಸ್ಥಾಪಕ ಅಣ್ಣಾದೊರೈ ಅವರ ರಾಷ್ಟ್ರೀಯತೆಯನ್ನು ಮೋಹನ್ ಭಾಗವತ್ ಸ್ಮರಿಸಿದರು. ಹಿಂದೆ ಅಣ್ಣಾದೊರೈ ತಮಿಳುನಾಡನ್ನು ಪ್ರತ್ಯೇಕ ದೇಶ ಎಂದು ಘೋಷಿಸಿದ್ದರು. ಆದರೆ 1962ರಲ್ಲಿ ನಡೆದ ಚೀನಾ ಭಾರತದ ಯುದ್ಧದ ವೇಳೆ ತಮ್ಮ ನಿಲುವು ಬದಲಾಯಿಸಿ, ಅಖಂಡ ಭಾರತದ ಬೆಂಬಲಕ್ಕೆ ಅಣ್ಣಾದೊರೈ ನಿಂತಿದ್ದರು. ಅದೇ ವಾಸ್ತವದಲ್ಲಿ ರಾಷ್ಟ್ರೀಯತೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವದ ವೇಳೆ ಜಾತಿ ಹೆಸರಲ್ಲಿ ನಡೆದ ಗಲಭೆ ವೇಳೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರ ಈ ಹೇಳಿಕೆ ತೀವ್ರ ಮಹತ್ವ ಪಡೆದುಕೊಂಡಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ವಿಶ್ವಹಿಂದೂ ಪರಿಷತ್ ಸೇರಿ ಹಲವು ಹಿಂದೂಪರ ಸಂಘಟನೆಗಳು ದೇಶದಲ್ಲಿ ಜಾತಿ ವ್ಯವಸ್ಥೆ ತೊಡೆದು ಹಾಕಬೇಕು ಎಂದು ಶ್ರಮಿಸುತ್ತಿರುವುದು ಗಮನಾರ್ಹ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search