• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮೇವಾನಿ, ಖಲೀದನ ಬಣ್ಣ ಬಯಲು ಮಾಡಿದ ಕೋರೇಗಾಂವ್ ಗ್ರಾಪಂ ಸದಸ್ಯೆ

TNN Correspondent Posted On January 6, 2018
0


0
Shares
  • Share On Facebook
  • Tweet It

ಪುಣೆ: ಭೀಮಾ ಕೋರೇಗಾಂವ್ 200ನೇ ವಿಜಯೋತ್ಸವದ ವೇಳೆ ಮೇಲ್ವರ್ಗದವರು ದಲಿತರ ಮೆರವಣಿಗೆ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ, ಮಹಾರಾಷ್ಟ್ರಾದ್ಯಂತ ಗಲಭೆ ಸೃಷ್ಟಿಸಿದ್ದವರಿಗೆ ಕೋರೇಗಾಂವ್ ಗ್ರಾಮ ಪಂಚಾಯಿತಿ ಸದಸ್ಯೆ ತಕ್ಕ ಉತ್ತರ ನೀಡಿದ್ದಾರೆ.

ಕೋರೇಗಾಂವ್ ನಲ್ಲಿ ಮೇಲ್ವರ್ಗದವರು, ಕೆಳವರ್ಗದವರು, ಮುಸ್ಲಿಮರು ಎಂಬ ಭೇದ ಭಾವವಿಲ್ಲದೇ ಜೀವನ ನಡೆಸುತ್ತಿದ್ದೇವೆ ಎಂದು ಪುಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನಮ್ಮ ಗ್ರಾಮದಲ್ಲಿ ಯಾವುದೇ ಗಲಭೆಗೆ ನಾವು ಅವಕಾಶ ನೀಡಿಲ್ಲ. ನಮ್ಮ ಜನರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ತಿಳಿಸಿದರು.

ನಮ್ಮ ಜನರು ಯಾವುದೇ ಗಲಭೆಗೆ ಪ್ರಚೋಧನೆ ನೀಡುವುದಿಲ್ಲ ಮತ್ತು ಅಂತಹ ದುಷ್ಕೃತ್ಯಗಳಲ್ಲಿ ಭಾಗವಹಿಸುವುದಿಲ್ಲ. ನಾವೇ ಗಲಭೆ ಸೃಷ್ಟಿಸಿ, ನಮ್ಮವರಿಗೆ ತೊಂದರೆ ಕೊಡುವಷ್ಟು ಮೂರ್ಖರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು ನಮ್ಮ ಮನೆಗಳಿಗೆ, ಮನೆಗಳಿಗೆ ಬೆಂಕಿ ಇಟ್ಟಿಲ್ಲ, ನಮ್ಮ ತಾಯಿಯಂದಿರು ಮತ್ತು ಸಹೋದರಿಯರ ಮಧ್ಯೆ ಅಟ್ರಾಸಿಟಿ ಪ್ರಕರಣ ದಾಖಲಿಸಿ, ಭೇದ ಹುಟ್ಟುವಂತೆ ಮಾಡಲಾಗುತ್ತಿದೆ. ನಮ್ಮಲಿ ಜಾತಿ, ಧರ್ಮಗಳ ಹಂಗಿಲ್ಲದೇ ಜೀವನ ನಡೆಸುತ್ತಿದ್ದೇವೆ ಎಂದು ಹೇಳಿದರು.

ಇತ್ತೀಚೆಗೆ ಜನವರಿ 1 ರಂದು ನಡೆದ ಭೀಮಾ ಕೋರೇಗಾಂವ್ ವಿಜಯೋತ್ಸವದ ವೇಳೆ ದಲಿತ ನಾಯಕನಂತೆ ಬಿಂಬಿಸಿಕೊಂಡಿರುವ ಜಿಗ್ನೇಶ್ ಮೇವಾನಿ ಮತ್ತು ಕಮ್ಯುನಿಸ್ಟ್ ಬೆಂಬಲಿಗ, ಭಾರತ ತೇರೆ ತುಕ್ಡೆ ಹೋಂಗೆ ಎನ್ನುವ ಉಮರ್ ಖಲೀದ್ ಪ್ರಚೋಧನಕಾರಿ ಭಾಷಣವನ್ನು ಮಾಡುವ ಮೂಲಕ ಗಲಭೆಗೆ ಪ್ರೇರಣೆ ನೀಡಿದ್ದರು. ಮತ್ತು ಮೇಲ್ವರ್ಗದವರು ದಲಿತರ ಮೇಲೆ ದಾಳಿ ನಡೆಸಿದ್ದಾರೆ ಎಂದು ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾರೆ ಎಂದು ಅವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search