• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮೇವಾನಿ, ಖಲೀದನ ಬಣ್ಣ ಬಯಲು ಮಾಡಿದ ಕೋರೇಗಾಂವ್ ಗ್ರಾಪಂ ಸದಸ್ಯೆ

TNN Correspondent Posted On January 6, 2018
0


0
Shares
  • Share On Facebook
  • Tweet It

ಪುಣೆ: ಭೀಮಾ ಕೋರೇಗಾಂವ್ 200ನೇ ವಿಜಯೋತ್ಸವದ ವೇಳೆ ಮೇಲ್ವರ್ಗದವರು ದಲಿತರ ಮೆರವಣಿಗೆ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ, ಮಹಾರಾಷ್ಟ್ರಾದ್ಯಂತ ಗಲಭೆ ಸೃಷ್ಟಿಸಿದ್ದವರಿಗೆ ಕೋರೇಗಾಂವ್ ಗ್ರಾಮ ಪಂಚಾಯಿತಿ ಸದಸ್ಯೆ ತಕ್ಕ ಉತ್ತರ ನೀಡಿದ್ದಾರೆ.

ಕೋರೇಗಾಂವ್ ನಲ್ಲಿ ಮೇಲ್ವರ್ಗದವರು, ಕೆಳವರ್ಗದವರು, ಮುಸ್ಲಿಮರು ಎಂಬ ಭೇದ ಭಾವವಿಲ್ಲದೇ ಜೀವನ ನಡೆಸುತ್ತಿದ್ದೇವೆ ಎಂದು ಪುಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನಮ್ಮ ಗ್ರಾಮದಲ್ಲಿ ಯಾವುದೇ ಗಲಭೆಗೆ ನಾವು ಅವಕಾಶ ನೀಡಿಲ್ಲ. ನಮ್ಮ ಜನರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ತಿಳಿಸಿದರು.

ನಮ್ಮ ಜನರು ಯಾವುದೇ ಗಲಭೆಗೆ ಪ್ರಚೋಧನೆ ನೀಡುವುದಿಲ್ಲ ಮತ್ತು ಅಂತಹ ದುಷ್ಕೃತ್ಯಗಳಲ್ಲಿ ಭಾಗವಹಿಸುವುದಿಲ್ಲ. ನಾವೇ ಗಲಭೆ ಸೃಷ್ಟಿಸಿ, ನಮ್ಮವರಿಗೆ ತೊಂದರೆ ಕೊಡುವಷ್ಟು ಮೂರ್ಖರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು ನಮ್ಮ ಮನೆಗಳಿಗೆ, ಮನೆಗಳಿಗೆ ಬೆಂಕಿ ಇಟ್ಟಿಲ್ಲ, ನಮ್ಮ ತಾಯಿಯಂದಿರು ಮತ್ತು ಸಹೋದರಿಯರ ಮಧ್ಯೆ ಅಟ್ರಾಸಿಟಿ ಪ್ರಕರಣ ದಾಖಲಿಸಿ, ಭೇದ ಹುಟ್ಟುವಂತೆ ಮಾಡಲಾಗುತ್ತಿದೆ. ನಮ್ಮಲಿ ಜಾತಿ, ಧರ್ಮಗಳ ಹಂಗಿಲ್ಲದೇ ಜೀವನ ನಡೆಸುತ್ತಿದ್ದೇವೆ ಎಂದು ಹೇಳಿದರು.

ಇತ್ತೀಚೆಗೆ ಜನವರಿ 1 ರಂದು ನಡೆದ ಭೀಮಾ ಕೋರೇಗಾಂವ್ ವಿಜಯೋತ್ಸವದ ವೇಳೆ ದಲಿತ ನಾಯಕನಂತೆ ಬಿಂಬಿಸಿಕೊಂಡಿರುವ ಜಿಗ್ನೇಶ್ ಮೇವಾನಿ ಮತ್ತು ಕಮ್ಯುನಿಸ್ಟ್ ಬೆಂಬಲಿಗ, ಭಾರತ ತೇರೆ ತುಕ್ಡೆ ಹೋಂಗೆ ಎನ್ನುವ ಉಮರ್ ಖಲೀದ್ ಪ್ರಚೋಧನಕಾರಿ ಭಾಷಣವನ್ನು ಮಾಡುವ ಮೂಲಕ ಗಲಭೆಗೆ ಪ್ರೇರಣೆ ನೀಡಿದ್ದರು. ಮತ್ತು ಮೇಲ್ವರ್ಗದವರು ದಲಿತರ ಮೇಲೆ ದಾಳಿ ನಡೆಸಿದ್ದಾರೆ ಎಂದು ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾರೆ ಎಂದು ಅವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search