• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೇವಾನಿ, ಖಲೀದನ ಬಣ್ಣ ಬಯಲು ಮಾಡಿದ ಕೋರೇಗಾಂವ್ ಗ್ರಾಪಂ ಸದಸ್ಯೆ

TNN Correspondent Posted On January 6, 2018


  • Share On Facebook
  • Tweet It

ಪುಣೆ: ಭೀಮಾ ಕೋರೇಗಾಂವ್ 200ನೇ ವಿಜಯೋತ್ಸವದ ವೇಳೆ ಮೇಲ್ವರ್ಗದವರು ದಲಿತರ ಮೆರವಣಿಗೆ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ, ಮಹಾರಾಷ್ಟ್ರಾದ್ಯಂತ ಗಲಭೆ ಸೃಷ್ಟಿಸಿದ್ದವರಿಗೆ ಕೋರೇಗಾಂವ್ ಗ್ರಾಮ ಪಂಚಾಯಿತಿ ಸದಸ್ಯೆ ತಕ್ಕ ಉತ್ತರ ನೀಡಿದ್ದಾರೆ.

ಕೋರೇಗಾಂವ್ ನಲ್ಲಿ ಮೇಲ್ವರ್ಗದವರು, ಕೆಳವರ್ಗದವರು, ಮುಸ್ಲಿಮರು ಎಂಬ ಭೇದ ಭಾವವಿಲ್ಲದೇ ಜೀವನ ನಡೆಸುತ್ತಿದ್ದೇವೆ ಎಂದು ಪುಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ನಮ್ಮ ಗ್ರಾಮದಲ್ಲಿ ಯಾವುದೇ ಗಲಭೆಗೆ ನಾವು ಅವಕಾಶ ನೀಡಿಲ್ಲ. ನಮ್ಮ ಜನರು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ತಿಳಿಸಿದರು.

ನಮ್ಮ ಜನರು ಯಾವುದೇ ಗಲಭೆಗೆ ಪ್ರಚೋಧನೆ ನೀಡುವುದಿಲ್ಲ ಮತ್ತು ಅಂತಹ ದುಷ್ಕೃತ್ಯಗಳಲ್ಲಿ ಭಾಗವಹಿಸುವುದಿಲ್ಲ. ನಾವೇ ಗಲಭೆ ಸೃಷ್ಟಿಸಿ, ನಮ್ಮವರಿಗೆ ತೊಂದರೆ ಕೊಡುವಷ್ಟು ಮೂರ್ಖರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು ನಮ್ಮ ಮನೆಗಳಿಗೆ, ಮನೆಗಳಿಗೆ ಬೆಂಕಿ ಇಟ್ಟಿಲ್ಲ, ನಮ್ಮ ತಾಯಿಯಂದಿರು ಮತ್ತು ಸಹೋದರಿಯರ ಮಧ್ಯೆ ಅಟ್ರಾಸಿಟಿ ಪ್ರಕರಣ ದಾಖಲಿಸಿ, ಭೇದ ಹುಟ್ಟುವಂತೆ ಮಾಡಲಾಗುತ್ತಿದೆ. ನಮ್ಮಲಿ ಜಾತಿ, ಧರ್ಮಗಳ ಹಂಗಿಲ್ಲದೇ ಜೀವನ ನಡೆಸುತ್ತಿದ್ದೇವೆ ಎಂದು ಹೇಳಿದರು.

ಇತ್ತೀಚೆಗೆ ಜನವರಿ 1 ರಂದು ನಡೆದ ಭೀಮಾ ಕೋರೇಗಾಂವ್ ವಿಜಯೋತ್ಸವದ ವೇಳೆ ದಲಿತ ನಾಯಕನಂತೆ ಬಿಂಬಿಸಿಕೊಂಡಿರುವ ಜಿಗ್ನೇಶ್ ಮೇವಾನಿ ಮತ್ತು ಕಮ್ಯುನಿಸ್ಟ್ ಬೆಂಬಲಿಗ, ಭಾರತ ತೇರೆ ತುಕ್ಡೆ ಹೋಂಗೆ ಎನ್ನುವ ಉಮರ್ ಖಲೀದ್ ಪ್ರಚೋಧನಕಾರಿ ಭಾಷಣವನ್ನು ಮಾಡುವ ಮೂಲಕ ಗಲಭೆಗೆ ಪ್ರೇರಣೆ ನೀಡಿದ್ದರು. ಮತ್ತು ಮೇಲ್ವರ್ಗದವರು ದಲಿತರ ಮೇಲೆ ದಾಳಿ ನಡೆಸಿದ್ದಾರೆ ಎಂದು ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾರೆ ಎಂದು ಅವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search