• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊನೆಗೂ ಮಣಿದ ಪಾಕಿಸ್ತಾನ, 72 ಉಗ್ರ ಸಂಘಟನೆ ನಿಷೇಧ

TNN Correspondent Posted On January 7, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಉಗ್ರ ಸಂಘಟನೆಗಳನ್ನು ನಿಷೇಧಿಸಬೇಕು ಹಾಗೂ ಹಫೀಜ್ ಸಯೀದ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸುವಂತೆ ಅಮೆರಿಕ ಒತ್ತಾಯಿಸಿದ್ದಕ್ಕೆ ಪಾಕಿಸ್ತಾನ ಕೊನೆಗೂ ಮಣಿದಿದ್ದು, ಪಾಕಿಸ್ತಾನದ ಸುಮಾರು 72ಕ್ಕೂ ಅಧಿಕ ಉಗ್ರ ಸಂಘಟನೆಗಳನ್ನು ನಿಷೇಧಿಸಿದೆ.

26/11ರ ಮುಂಬೈ ದಾಳಿಯ ರೂವಾರಿ, ಉಗ್ರ ಹಫೀಜ್ ಸಯೀದ್ ನೇತೃತ್ವದ ಜಮಾತ್ ಉದ್ ದವಾ ಸೇರಿ ಹಲವು ಉಗ್ರ ಸಂಘಟನೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಪಾಕಿಸ್ತಾನವು ಅಫ್ಘಾನಿಸ್ತಾನದ ತಾಲಿಬಾನ್ ಮತ್ತು ಹಕ್ಕಾನಿ ನೆಟ್ ವರ್ಕ್  ಉಗ್ರ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳದ ಕುರಿತು ಅಮೆರಿಕ ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಪಾಕಿಸ್ತಾನ ಈ ನಿರ್ಧಾರ ಪ್ರಕಟಿಸಿದೆ.

ಅಷ್ಟೇ ಅಲ್ಲ, ಅಮೆರಿಕದ ನೀಡಿದ ಹಲವು ಎಚ್ಚರಿಕೆ ಪಾಲಿಸದ ಪಾಕಿಸ್ತಾನಕ್ಕೆ ತಾವು ನೀಡುತ್ತಿದ್ದ ಸುಮಾರು 200 ಕೋಟಿ ಡಾಲರ್ ಆರ್ಥಿಕ ನೆರವನ್ನು ಸಹ ಸ್ಥಗಿತಗೊಳಿಸಿತ್ತು. ಇದರಿಂದ ಬೆಚ್ಚಿಬಿದ್ದ ಪಾಕಿಸ್ತಾನ ಸಂಘಟನೆ ನಿಷೇಧಿಸಿದೆ.

ಆದಾಗ್ಯೂ ಭಾರತ ಸಹ ಹಲವು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಅವಕಾಶ ಸಿಕ್ಕಾಗಲೆಲ್ಲ ಪಾಕಿಸ್ತಾನ ಉಗ್ರರ ತವರೂರು ಎಂಬಂತೆ ಬಿಂಬಿಸುತ್ತಲೇ ಇದೆ. ಈಗ ಕೊನೆಗೂ ಅಮೆರಿಕ ಒತ್ತಾಯಕ್ಕೆ ಮಣಿದ ಪಾಕಿಸ್ತಾನ ಬುದ್ಧಿ ಕಲಿಯಿತಲ್ಲ ಎಂಬುದೇ ಸಕಾರಾತ್ಮಕ ಮನೋಭಾವನೆ ಮೂಡಲು ಕಾರಣವಾಗಿದೆ. ಆದರೂ ಅದನ್ನು ಎಷ್ಟರಮಟ್ಟಿಗೆ ನಿಷ್ಠೆಯಿಂದ ಕಾಯ್ದುಕೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search