• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊನೆಗೂ ಮಣಿದ ಪಾಕಿಸ್ತಾನ, 72 ಉಗ್ರ ಸಂಘಟನೆ ನಿಷೇಧ

TNN Correspondent Posted On January 7, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಉಗ್ರ ಸಂಘಟನೆಗಳನ್ನು ನಿಷೇಧಿಸಬೇಕು ಹಾಗೂ ಹಫೀಜ್ ಸಯೀದ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸುವಂತೆ ಅಮೆರಿಕ ಒತ್ತಾಯಿಸಿದ್ದಕ್ಕೆ ಪಾಕಿಸ್ತಾನ ಕೊನೆಗೂ ಮಣಿದಿದ್ದು, ಪಾಕಿಸ್ತಾನದ ಸುಮಾರು 72ಕ್ಕೂ ಅಧಿಕ ಉಗ್ರ ಸಂಘಟನೆಗಳನ್ನು ನಿಷೇಧಿಸಿದೆ.

26/11ರ ಮುಂಬೈ ದಾಳಿಯ ರೂವಾರಿ, ಉಗ್ರ ಹಫೀಜ್ ಸಯೀದ್ ನೇತೃತ್ವದ ಜಮಾತ್ ಉದ್ ದವಾ ಸೇರಿ ಹಲವು ಉಗ್ರ ಸಂಘಟನೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಪಾಕಿಸ್ತಾನವು ಅಫ್ಘಾನಿಸ್ತಾನದ ತಾಲಿಬಾನ್ ಮತ್ತು ಹಕ್ಕಾನಿ ನೆಟ್ ವರ್ಕ್  ಉಗ್ರ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳದ ಕುರಿತು ಅಮೆರಿಕ ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಪಾಕಿಸ್ತಾನ ಈ ನಿರ್ಧಾರ ಪ್ರಕಟಿಸಿದೆ.

ಅಷ್ಟೇ ಅಲ್ಲ, ಅಮೆರಿಕದ ನೀಡಿದ ಹಲವು ಎಚ್ಚರಿಕೆ ಪಾಲಿಸದ ಪಾಕಿಸ್ತಾನಕ್ಕೆ ತಾವು ನೀಡುತ್ತಿದ್ದ ಸುಮಾರು 200 ಕೋಟಿ ಡಾಲರ್ ಆರ್ಥಿಕ ನೆರವನ್ನು ಸಹ ಸ್ಥಗಿತಗೊಳಿಸಿತ್ತು. ಇದರಿಂದ ಬೆಚ್ಚಿಬಿದ್ದ ಪಾಕಿಸ್ತಾನ ಸಂಘಟನೆ ನಿಷೇಧಿಸಿದೆ.

ಆದಾಗ್ಯೂ ಭಾರತ ಸಹ ಹಲವು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಅವಕಾಶ ಸಿಕ್ಕಾಗಲೆಲ್ಲ ಪಾಕಿಸ್ತಾನ ಉಗ್ರರ ತವರೂರು ಎಂಬಂತೆ ಬಿಂಬಿಸುತ್ತಲೇ ಇದೆ. ಈಗ ಕೊನೆಗೂ ಅಮೆರಿಕ ಒತ್ತಾಯಕ್ಕೆ ಮಣಿದ ಪಾಕಿಸ್ತಾನ ಬುದ್ಧಿ ಕಲಿಯಿತಲ್ಲ ಎಂಬುದೇ ಸಕಾರಾತ್ಮಕ ಮನೋಭಾವನೆ ಮೂಡಲು ಕಾರಣವಾಗಿದೆ. ಆದರೂ ಅದನ್ನು ಎಷ್ಟರಮಟ್ಟಿಗೆ ನಿಷ್ಠೆಯಿಂದ ಕಾಯ್ದುಕೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search