• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋ ರಕ್ಷರ ನಿರಂತರ ಶ್ರಮ, ಗೋವಾಕ್ಕೆ ಗೋ ಮಾಂಸದ ಕೊರತೆ

TNN Correspondent Posted On January 7, 2018
0


0
Shares
  • Share On Facebook
  • Tweet It

ಪಣಜಿ: ಕರ್ನಾಟಕದಲ್ಲಿ ಗೋ ರಕ್ಷಕರು, ಗೋ ಅಭಿಯಾನ ನಡೆಸಿ, ಅಕ್ರಮ ಗೋ ಸಾಗಣೆ ತಡೆಯುತ್ತಿರುವುದರಿಂದ  ಗೋವಾದಲ್ಲಿ ಗೋ ಮಾಂಸ ಮಾರಾಟಗಾರರಿಗೆ ಮಾಂಸದ ಕೊರತೆ ಉಂಟಾಗಿದೆ ಎಂದು ಗೋ ಮಾಂಸ ಮಾರಾಟಗಾರರ ಸಂಘ ತಿಳಿಸಿದೆ. ಇದು ಗೋ ರಕ್ಷಣೆ, ಗೋ ರಕ್ಷಣೆ ಅಭಿಯಾನ ನಡೆಸುತ್ತಿರುವ ಎಲ್ಲರಿಗೂ ಸಲ್ಲಲೇಬೇಕಾದ ಗೌರವ.

ಕರ್ನಾಟಕದ ಬೆಳಗಾವಿಯಿಂದ ನಿತ್ಯ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಆದರೆ ಇದೀಗ ಗೋ ರಕ್ಷಕರ ಭೀತಿಯಿಂದ ಸಾಗಣೆಗೆ ತಡೆಯುಂಟಾಗುತ್ತಿದೆ. ಇದರಿಂದ ಗೋ ಮಾಂಸಕ್ಕೆ ಕೊರತೆ ಉಂಟಾಗಿದೆ ಎಂದು ಗೋ ಮಾಂಸ ಮಾರಾಟಗಾರರ ಸಂಘ ಆರೋಪಿಸಿದೆ. ಸರ್ಕಾರ ಗೋ ರಕ್ಷಕರ ಕುರಿತು ಕೂಡಲೇ ಮಧ್ಯ ಪ್ರವೇಶಿಸಬೇಕು. ಇಲ್ಲವಾದಲ್ಲಿ ಗೋ ಮಾಂಸಕ್ಕೆ ತೀವ್ರ ಸಮಸ್ಯೆಯಾಗಲಿದೆ ಎಂದು ಗೋ ಮಾಂಸ ಮಾರಾಟಗಾರರ ಸಂಘ ತಿಳಿಸಿದೆ.

ಕರ್ನಾಟಕದಿಂದ ಗೋವಾಕ್ಕೆ ಗೋ ಸಾಗಣೆ ವೇಳೆ ಗೋ ರಕ್ಷಕರು ತಡೆಯೊಡ್ಡುತ್ತಿದ್ದಾರೆ. ಈ ಪ್ರಕ್ರಿಯೆ ಕ್ರಿಸ್ ಮಸ್ ನಿಂದ ಹೆಚ್ಚಾಗಿದ್ದು, ಮಾರಾಟಗಾರರು ಅಕ್ರಮವಾಗಿ ಗೋವು ಸಾಗಣೆ ಮಾಡುತ್ತಾರೆ ಎಂದು ತಡೆಯೊಡ್ಡುತ್ತಿರುವುದರಿಂದ ಕರ್ನಾಟಕದಿಂದ ಸಾಗಣೆ ಮಾಡುವುದನ್ನೇ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಗೋವಾ ಖುರೇಷಿ ಮಾಂಸ ಮಾರಾಟಗಾರರ ಸಂಘದ ಅಧ್ಯಕ್ಷ ಮನ್ನಾ ಬಪ್ಪಾರಿ ಹೇಳಿದ್ದಾರೆ.

ಬೆಳಗಾವಿಯಿಂದ ನಿತ್ಯ 25 ಟನ್ ಗೋ ಮಾಂಸ ಸಾಗಣೆ..!

ಗೋವಾಕ್ಕೆ ಕರ್ನಾಟಕದ ಬೆಳಗಾವಿಯಿಂದ ನಿತ್ಯ 25 ಟನ್ ಗೋ ಮಾಂಸ ಸಾಗಣೆಯಾಗುತ್ತದೆ. ಗೋವಾದಲ್ಲಿ ಗೋವುಗಳ ಉತ್ಪಾದನೆ ಇಲ್ಲ. ಇದರಿಂದ ಗೋವಾದಲ್ಲಿ ಮಾಂಸದ ಕೊರತೆ ಉಂಟಾಗಿದೆ ಎ ಖುರೇಷಿ ಮಾಂಸ ಮಾರಾಟಗಾರರ ಸಂಘದ ಅಧ್ಯಕ್ಷ ಮನ್ನಾ ಬಪ್ಪಾರಿ.

ಕರ್ನಾಟಕದಲ್ಲಿರುವ ಗೋ ರಕ್ಷಣಾ ತಂಡಗಳು, ಗೋ ರಕ್ಷಕ ಅಭಿಯಾನಗಳು ಗೋವಾಕ್ಕೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂದು ದೂರುತ್ತಿವೆ. ನಾವು ಕರ್ನಾಟಕದಿಂದ ಅಕ್ರಮವಾಗಿ ಗೋವುಗಳನ್ನು ತರುವುದಿಲ್ಲ. ಕಾನೂನಾತ್ಮಕವಾಗಿ ಕರ್ನಾಟಕದಲ್ಲಿ ನಡೆಯುತ್ತಿರುವ ಕಸಾಯಿಖಾನೆಗಳಿಂದ ತರುತ್ತೇವೆ. ಆದರೆ ಗಡಿಯಲ್ಲಿ ನಮ್ಮ ವಾಹನಗಳನ್ನು ತಡೆದು, ಅಕ್ರಮವಾಗಿ ಗೋ ಮಾಂಸ ಸಾಗಿಸಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ ಎನ್ನುತ್ತಾರೆ ಬಪ್ಪಾರಿ.

ನಾವು ಕಾನೂನಾತ್ಮಕವಾಗಿ ನಡೆಸುತ್ತಿರುವ ಕಸಾಯಿ ಖಾನೆಗಳಿಂದಲೇ ಮಾಂಸವನ್ನು ಸಾಗಿಸುತ್ತೇವೆ. ಯಾವುದಾರರೂ ಸಂಘಟನೆಗಳಿಗೆ ವಿರೋಧವಿದ್ದರೇ, ಮಾರಾಟ ಮಾಡುವ ಕಸಾಯಿ ಖಾನೆಗಳ ಎದುರು ಹೋಗಿ ಪ್ರತಿಭಟನೆ ನಡೆಸಲಿ, ತಡೆಯಲಿ. ಅದನ್ನು ಬಿಟ್ಟು ಸಾಗಣೆ ಮಾಡುವ ವಾಹನಗಳನ್ನು ತಡೆದರೇ ಲಕ್ಷಾಂತರ ರೂಪಾಯಿ ಹಾನಿಯಾಗುತ್ತದೆ ಎಂದು ಗೋವಾ ಗೋ ಮಾಂಸ ಮಾರಾಟಗಾರರು ಹೇಳಿದ್ದಾರೆ.

ಅನುಮತಿಯಿಲ್ಲದೇ ಗೋ ಮಾಂಸ ಸಾಗಣೆ

ಗೋವಾ ಮತ್ತು ಕರ್ನಾಟಕ ಗಡಿಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಅನುಮತಿಯಿಲ್ಲದೇ ಗೋ ಮಾಂಸ ಸಾಗಣೆ ಮಾಡಲಾಗುತ್ತಿದೆ. ಆದ್ದರಿಂದ ಗೋ ರಕ್ಷಕ ಪಡೆಗಳು ಗೋವುಗಳ ಸಂರಕ್ಷಣೆ ಮುಂದಾಗಿವೆ. ಗಡಿಯಲ್ಲಿ ಅಕ್ರಮವಾಗಿ ನಡೆಸುತ್ತಿರುವ ಕಸಾಯಿಖಾನೆಗಳು ಮತ್ತು ಸಾಗಣೆ ಸಮಯದಲ್ಲಿ ಪೊಲೀಸರ ಜತೆ ಪರೀಕ್ಷಿಸಲು ಮುಂದಾಗಿದ್ದೇವೆ ಎನ್ನುತ್ತಾರೆ ಗೋ ರಕ್ಷಕ ಅಭಿಯಾನದ ಮುಖಂಡ ಹನುಮಂತ ಪರಬ್.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search