• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋ ರಕ್ಷರ ನಿರಂತರ ಶ್ರಮ, ಗೋವಾಕ್ಕೆ ಗೋ ಮಾಂಸದ ಕೊರತೆ

TNN Correspondent Posted On January 7, 2018
0


0
Shares
  • Share On Facebook
  • Tweet It

ಪಣಜಿ: ಕರ್ನಾಟಕದಲ್ಲಿ ಗೋ ರಕ್ಷಕರು, ಗೋ ಅಭಿಯಾನ ನಡೆಸಿ, ಅಕ್ರಮ ಗೋ ಸಾಗಣೆ ತಡೆಯುತ್ತಿರುವುದರಿಂದ  ಗೋವಾದಲ್ಲಿ ಗೋ ಮಾಂಸ ಮಾರಾಟಗಾರರಿಗೆ ಮಾಂಸದ ಕೊರತೆ ಉಂಟಾಗಿದೆ ಎಂದು ಗೋ ಮಾಂಸ ಮಾರಾಟಗಾರರ ಸಂಘ ತಿಳಿಸಿದೆ. ಇದು ಗೋ ರಕ್ಷಣೆ, ಗೋ ರಕ್ಷಣೆ ಅಭಿಯಾನ ನಡೆಸುತ್ತಿರುವ ಎಲ್ಲರಿಗೂ ಸಲ್ಲಲೇಬೇಕಾದ ಗೌರವ.

ಕರ್ನಾಟಕದ ಬೆಳಗಾವಿಯಿಂದ ನಿತ್ಯ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಆದರೆ ಇದೀಗ ಗೋ ರಕ್ಷಕರ ಭೀತಿಯಿಂದ ಸಾಗಣೆಗೆ ತಡೆಯುಂಟಾಗುತ್ತಿದೆ. ಇದರಿಂದ ಗೋ ಮಾಂಸಕ್ಕೆ ಕೊರತೆ ಉಂಟಾಗಿದೆ ಎಂದು ಗೋ ಮಾಂಸ ಮಾರಾಟಗಾರರ ಸಂಘ ಆರೋಪಿಸಿದೆ. ಸರ್ಕಾರ ಗೋ ರಕ್ಷಕರ ಕುರಿತು ಕೂಡಲೇ ಮಧ್ಯ ಪ್ರವೇಶಿಸಬೇಕು. ಇಲ್ಲವಾದಲ್ಲಿ ಗೋ ಮಾಂಸಕ್ಕೆ ತೀವ್ರ ಸಮಸ್ಯೆಯಾಗಲಿದೆ ಎಂದು ಗೋ ಮಾಂಸ ಮಾರಾಟಗಾರರ ಸಂಘ ತಿಳಿಸಿದೆ.

ಕರ್ನಾಟಕದಿಂದ ಗೋವಾಕ್ಕೆ ಗೋ ಸಾಗಣೆ ವೇಳೆ ಗೋ ರಕ್ಷಕರು ತಡೆಯೊಡ್ಡುತ್ತಿದ್ದಾರೆ. ಈ ಪ್ರಕ್ರಿಯೆ ಕ್ರಿಸ್ ಮಸ್ ನಿಂದ ಹೆಚ್ಚಾಗಿದ್ದು, ಮಾರಾಟಗಾರರು ಅಕ್ರಮವಾಗಿ ಗೋವು ಸಾಗಣೆ ಮಾಡುತ್ತಾರೆ ಎಂದು ತಡೆಯೊಡ್ಡುತ್ತಿರುವುದರಿಂದ ಕರ್ನಾಟಕದಿಂದ ಸಾಗಣೆ ಮಾಡುವುದನ್ನೇ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಗೋವಾ ಖುರೇಷಿ ಮಾಂಸ ಮಾರಾಟಗಾರರ ಸಂಘದ ಅಧ್ಯಕ್ಷ ಮನ್ನಾ ಬಪ್ಪಾರಿ ಹೇಳಿದ್ದಾರೆ.

ಬೆಳಗಾವಿಯಿಂದ ನಿತ್ಯ 25 ಟನ್ ಗೋ ಮಾಂಸ ಸಾಗಣೆ..!

ಗೋವಾಕ್ಕೆ ಕರ್ನಾಟಕದ ಬೆಳಗಾವಿಯಿಂದ ನಿತ್ಯ 25 ಟನ್ ಗೋ ಮಾಂಸ ಸಾಗಣೆಯಾಗುತ್ತದೆ. ಗೋವಾದಲ್ಲಿ ಗೋವುಗಳ ಉತ್ಪಾದನೆ ಇಲ್ಲ. ಇದರಿಂದ ಗೋವಾದಲ್ಲಿ ಮಾಂಸದ ಕೊರತೆ ಉಂಟಾಗಿದೆ ಎ ಖುರೇಷಿ ಮಾಂಸ ಮಾರಾಟಗಾರರ ಸಂಘದ ಅಧ್ಯಕ್ಷ ಮನ್ನಾ ಬಪ್ಪಾರಿ.

ಕರ್ನಾಟಕದಲ್ಲಿರುವ ಗೋ ರಕ್ಷಣಾ ತಂಡಗಳು, ಗೋ ರಕ್ಷಕ ಅಭಿಯಾನಗಳು ಗೋವಾಕ್ಕೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂದು ದೂರುತ್ತಿವೆ. ನಾವು ಕರ್ನಾಟಕದಿಂದ ಅಕ್ರಮವಾಗಿ ಗೋವುಗಳನ್ನು ತರುವುದಿಲ್ಲ. ಕಾನೂನಾತ್ಮಕವಾಗಿ ಕರ್ನಾಟಕದಲ್ಲಿ ನಡೆಯುತ್ತಿರುವ ಕಸಾಯಿಖಾನೆಗಳಿಂದ ತರುತ್ತೇವೆ. ಆದರೆ ಗಡಿಯಲ್ಲಿ ನಮ್ಮ ವಾಹನಗಳನ್ನು ತಡೆದು, ಅಕ್ರಮವಾಗಿ ಗೋ ಮಾಂಸ ಸಾಗಿಸಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ ಎನ್ನುತ್ತಾರೆ ಬಪ್ಪಾರಿ.

ನಾವು ಕಾನೂನಾತ್ಮಕವಾಗಿ ನಡೆಸುತ್ತಿರುವ ಕಸಾಯಿ ಖಾನೆಗಳಿಂದಲೇ ಮಾಂಸವನ್ನು ಸಾಗಿಸುತ್ತೇವೆ. ಯಾವುದಾರರೂ ಸಂಘಟನೆಗಳಿಗೆ ವಿರೋಧವಿದ್ದರೇ, ಮಾರಾಟ ಮಾಡುವ ಕಸಾಯಿ ಖಾನೆಗಳ ಎದುರು ಹೋಗಿ ಪ್ರತಿಭಟನೆ ನಡೆಸಲಿ, ತಡೆಯಲಿ. ಅದನ್ನು ಬಿಟ್ಟು ಸಾಗಣೆ ಮಾಡುವ ವಾಹನಗಳನ್ನು ತಡೆದರೇ ಲಕ್ಷಾಂತರ ರೂಪಾಯಿ ಹಾನಿಯಾಗುತ್ತದೆ ಎಂದು ಗೋವಾ ಗೋ ಮಾಂಸ ಮಾರಾಟಗಾರರು ಹೇಳಿದ್ದಾರೆ.

ಅನುಮತಿಯಿಲ್ಲದೇ ಗೋ ಮಾಂಸ ಸಾಗಣೆ

ಗೋವಾ ಮತ್ತು ಕರ್ನಾಟಕ ಗಡಿಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಅನುಮತಿಯಿಲ್ಲದೇ ಗೋ ಮಾಂಸ ಸಾಗಣೆ ಮಾಡಲಾಗುತ್ತಿದೆ. ಆದ್ದರಿಂದ ಗೋ ರಕ್ಷಕ ಪಡೆಗಳು ಗೋವುಗಳ ಸಂರಕ್ಷಣೆ ಮುಂದಾಗಿವೆ. ಗಡಿಯಲ್ಲಿ ಅಕ್ರಮವಾಗಿ ನಡೆಸುತ್ತಿರುವ ಕಸಾಯಿಖಾನೆಗಳು ಮತ್ತು ಸಾಗಣೆ ಸಮಯದಲ್ಲಿ ಪೊಲೀಸರ ಜತೆ ಪರೀಕ್ಷಿಸಲು ಮುಂದಾಗಿದ್ದೇವೆ ಎನ್ನುತ್ತಾರೆ ಗೋ ರಕ್ಷಕ ಅಭಿಯಾನದ ಮುಖಂಡ ಹನುಮಂತ ಪರಬ್.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search