• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದುತ್ವವೆಂದರೇನೇ ಸೌಹಾರ್ದ, ಪರ್ಯಾಯವೇ ಅದಕ್ಕೆ ನಿದರ್ಶನ

TNN Correspondent Posted On January 7, 2018
0


0
Shares
  • Share On Facebook
  • Tweet It

ಉಡುಪಿ: ಪೇಜಾವರ ಶ್ರೀಗಳು ಹಿಂದೂ ಧರ್ಮ ರಕ್ಷಣೆಗೆ ಶ್ರಮಿಸುತ್ತಿದ್ದಾರೆ ಎಂದರೆ ಅವರ ವಿರುದ್ಧ ಕೋಮುವಾದಿ ಎಂದು ಟೀಕಿಸಲಾಗುತ್ತದೆ. ಅವರು ಮುಸ್ಲಿಮರಿಗೆ ಮಠದಲ್ಲಿ ಪ್ರವೇಶ ನೀಡಿದರೆ ಎಲ್ಲ ನಾಟಕ ಎಂದು ಜರಿಯುತ್ತಾರೆ. ಆದರೂ ಉಡುಪಿಯ ಅಷ್ಟಮಠಗಳು ಹಾಗೂ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಮಾತ್ರ ಎಂದಿಗೂ ಸೌಹಾರ್ದ ಮೆರೆಯುತ್ತಾರೆ.

ಈಗ ಅಂಥಾದ್ದೇ ಮತ್ತೊಂದು ನಿದರ್ಶನಕ್ಕೆ ಉಡುಪಿ ಸಾಕ್ಷಿಯಾಗಲಿದ್ದು, ಜನವರಿ 18ರಂದು ನಡೆಯುವ ಪಲಿಮಾರು ಮಠದ ಪರ್ಯಾಯೋತ್ಸವದಲ್ಲಿ ನೂರಾರು ಮುಸ್ಲಿಂ ಯುವಕರು ಸೇವೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮೊದಲಿನಿಂದಲೂ ಅಷ್ಟಮಠಗಳೊಂದಿಗೆ ನಿಕಟ ಸಂಬಂಧಹೊಂದಿರುವ ಉಡುಪಿಯ ಮುಸ್ಲಿಂ ಯುವ ಮನಸ್ಸುಗಳು ಪರ್ಯಾಯೋತ್ಸವದಲ್ಲಿ ಸೇವೆ ಸಲ್ಲಿಸಲು ನಿರ್ಧರಿಸಿವೆ ಎಂದು ಉಡುಪಿ ಜಿಲ್ಲಾ ಸೌಹಾರ್ದ ಸಮಿತಿ ಅಧ್ಯಕ್ಷ ಮೊಹಮ್ಮದ್ ಆರೀಫ್ ತಿಳಿಸಿದ್ದಾರೆ. ಪರ್ಯಾಯೋತ್ಸವದಲ್ಲಿ ರಕ್ತದಾನ, ಹೊರೆಕಾಣಿಕೆ ಸೇರಿ ಹಲವು ರೀತಿಯಾಗಿ ಸೇವೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗೋರಕ್ಷಣೆಗೂ ಬೆಂಬಲ

ಮುಸ್ಲಿಮರು ಎಂದ ತಕ್ಷಣ ಗೋಭಕ್ಷರಕು ಎಂದೇ ಭಾವಿಸಲಾಗುತ್ತದೆ. ಆದರೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಯುವಕರು ಗೋರಕ್ಷಣೆಗೆ ಕಂಕಣಬದ್ಧರಾಗಿದ್ದಾರೆ. ಅಲ್ಲದೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಜನರಿಂದ ಗೋರಕ್ಷಣೆಗಾಗಿ ಸುಮಾರು 10 ಸಾವಿರಕ್ಕೂ ಅಧಿಕ ಜನರಿಂದ ಸಹಿ ಸಂಗ್ರಹಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಎರಡು ವರ್ಷಗಳ ಹಿಂದೆ ಸಹ ನಡೆದ ಪರ್ಯಾಯೋತ್ಸವ ನಡೆದಾಗ ನೂರಾರು ಮುಸ್ಲಿಂ ಯುವಕರು ಸೇವೆ ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಕರಾವಳಿ ಕೋಮುಸಂಘರ್ಷಕ್ಕೆ ಹೆಸರಾಗುತ್ತಿರುವ ಮಧ್ಯೆಯೇ ಕೋಮುಸೌಹಾರ್ದದ ಪ್ರತೀಕವಾಗಿ ಪರ್ಯಾಯೋತ್ಸವದಲ್ಲಿ ಮುಸ್ಲಿಂ ಯುವಕರು ಸೌಹಾರ್ದ ಮೆರೆಯುತ್ತಿರುವುದು ಸ್ವಾಗತಾರ್ಹವಾಗಿದೆ.

 

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search