• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದುತ್ವವೆಂದರೇನೇ ಸೌಹಾರ್ದ, ಪರ್ಯಾಯವೇ ಅದಕ್ಕೆ ನಿದರ್ಶನ

TNN Correspondent Posted On January 7, 2018


  • Share On Facebook
  • Tweet It

ಉಡುಪಿ: ಪೇಜಾವರ ಶ್ರೀಗಳು ಹಿಂದೂ ಧರ್ಮ ರಕ್ಷಣೆಗೆ ಶ್ರಮಿಸುತ್ತಿದ್ದಾರೆ ಎಂದರೆ ಅವರ ವಿರುದ್ಧ ಕೋಮುವಾದಿ ಎಂದು ಟೀಕಿಸಲಾಗುತ್ತದೆ. ಅವರು ಮುಸ್ಲಿಮರಿಗೆ ಮಠದಲ್ಲಿ ಪ್ರವೇಶ ನೀಡಿದರೆ ಎಲ್ಲ ನಾಟಕ ಎಂದು ಜರಿಯುತ್ತಾರೆ. ಆದರೂ ಉಡುಪಿಯ ಅಷ್ಟಮಠಗಳು ಹಾಗೂ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಮಾತ್ರ ಎಂದಿಗೂ ಸೌಹಾರ್ದ ಮೆರೆಯುತ್ತಾರೆ.

ಈಗ ಅಂಥಾದ್ದೇ ಮತ್ತೊಂದು ನಿದರ್ಶನಕ್ಕೆ ಉಡುಪಿ ಸಾಕ್ಷಿಯಾಗಲಿದ್ದು, ಜನವರಿ 18ರಂದು ನಡೆಯುವ ಪಲಿಮಾರು ಮಠದ ಪರ್ಯಾಯೋತ್ಸವದಲ್ಲಿ ನೂರಾರು ಮುಸ್ಲಿಂ ಯುವಕರು ಸೇವೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮೊದಲಿನಿಂದಲೂ ಅಷ್ಟಮಠಗಳೊಂದಿಗೆ ನಿಕಟ ಸಂಬಂಧಹೊಂದಿರುವ ಉಡುಪಿಯ ಮುಸ್ಲಿಂ ಯುವ ಮನಸ್ಸುಗಳು ಪರ್ಯಾಯೋತ್ಸವದಲ್ಲಿ ಸೇವೆ ಸಲ್ಲಿಸಲು ನಿರ್ಧರಿಸಿವೆ ಎಂದು ಉಡುಪಿ ಜಿಲ್ಲಾ ಸೌಹಾರ್ದ ಸಮಿತಿ ಅಧ್ಯಕ್ಷ ಮೊಹಮ್ಮದ್ ಆರೀಫ್ ತಿಳಿಸಿದ್ದಾರೆ. ಪರ್ಯಾಯೋತ್ಸವದಲ್ಲಿ ರಕ್ತದಾನ, ಹೊರೆಕಾಣಿಕೆ ಸೇರಿ ಹಲವು ರೀತಿಯಾಗಿ ಸೇವೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗೋರಕ್ಷಣೆಗೂ ಬೆಂಬಲ

ಮುಸ್ಲಿಮರು ಎಂದ ತಕ್ಷಣ ಗೋಭಕ್ಷರಕು ಎಂದೇ ಭಾವಿಸಲಾಗುತ್ತದೆ. ಆದರೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಯುವಕರು ಗೋರಕ್ಷಣೆಗೆ ಕಂಕಣಬದ್ಧರಾಗಿದ್ದಾರೆ. ಅಲ್ಲದೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಜನರಿಂದ ಗೋರಕ್ಷಣೆಗಾಗಿ ಸುಮಾರು 10 ಸಾವಿರಕ್ಕೂ ಅಧಿಕ ಜನರಿಂದ ಸಹಿ ಸಂಗ್ರಹಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಎರಡು ವರ್ಷಗಳ ಹಿಂದೆ ಸಹ ನಡೆದ ಪರ್ಯಾಯೋತ್ಸವ ನಡೆದಾಗ ನೂರಾರು ಮುಸ್ಲಿಂ ಯುವಕರು ಸೇವೆ ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಕರಾವಳಿ ಕೋಮುಸಂಘರ್ಷಕ್ಕೆ ಹೆಸರಾಗುತ್ತಿರುವ ಮಧ್ಯೆಯೇ ಕೋಮುಸೌಹಾರ್ದದ ಪ್ರತೀಕವಾಗಿ ಪರ್ಯಾಯೋತ್ಸವದಲ್ಲಿ ಮುಸ್ಲಿಂ ಯುವಕರು ಸೌಹಾರ್ದ ಮೆರೆಯುತ್ತಿರುವುದು ಸ್ವಾಗತಾರ್ಹವಾಗಿದೆ.

 

  • Share On Facebook
  • Tweet It


- Advertisement -


Trending Now
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
Tulunadu News March 20, 2023
Leave A Reply

  • Recent Posts

    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
    • ಜೆಎನ್ ಯು ದಂಡದ ಮೂಲಕವಾದರೂ ಸ್ವಚ್ಛವಾಗಲಿ!!
  • Popular Posts

    • 1
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 2
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 3
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 4
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • 5
      ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search