• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದುತ್ವವೆಂದರೇನೇ ಸೌಹಾರ್ದ, ಪರ್ಯಾಯವೇ ಅದಕ್ಕೆ ನಿದರ್ಶನ

TNN Correspondent Posted On January 7, 2018
0


0
Shares
  • Share On Facebook
  • Tweet It

ಉಡುಪಿ: ಪೇಜಾವರ ಶ್ರೀಗಳು ಹಿಂದೂ ಧರ್ಮ ರಕ್ಷಣೆಗೆ ಶ್ರಮಿಸುತ್ತಿದ್ದಾರೆ ಎಂದರೆ ಅವರ ವಿರುದ್ಧ ಕೋಮುವಾದಿ ಎಂದು ಟೀಕಿಸಲಾಗುತ್ತದೆ. ಅವರು ಮುಸ್ಲಿಮರಿಗೆ ಮಠದಲ್ಲಿ ಪ್ರವೇಶ ನೀಡಿದರೆ ಎಲ್ಲ ನಾಟಕ ಎಂದು ಜರಿಯುತ್ತಾರೆ. ಆದರೂ ಉಡುಪಿಯ ಅಷ್ಟಮಠಗಳು ಹಾಗೂ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಮಾತ್ರ ಎಂದಿಗೂ ಸೌಹಾರ್ದ ಮೆರೆಯುತ್ತಾರೆ.

ಈಗ ಅಂಥಾದ್ದೇ ಮತ್ತೊಂದು ನಿದರ್ಶನಕ್ಕೆ ಉಡುಪಿ ಸಾಕ್ಷಿಯಾಗಲಿದ್ದು, ಜನವರಿ 18ರಂದು ನಡೆಯುವ ಪಲಿಮಾರು ಮಠದ ಪರ್ಯಾಯೋತ್ಸವದಲ್ಲಿ ನೂರಾರು ಮುಸ್ಲಿಂ ಯುವಕರು ಸೇವೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮೊದಲಿನಿಂದಲೂ ಅಷ್ಟಮಠಗಳೊಂದಿಗೆ ನಿಕಟ ಸಂಬಂಧಹೊಂದಿರುವ ಉಡುಪಿಯ ಮುಸ್ಲಿಂ ಯುವ ಮನಸ್ಸುಗಳು ಪರ್ಯಾಯೋತ್ಸವದಲ್ಲಿ ಸೇವೆ ಸಲ್ಲಿಸಲು ನಿರ್ಧರಿಸಿವೆ ಎಂದು ಉಡುಪಿ ಜಿಲ್ಲಾ ಸೌಹಾರ್ದ ಸಮಿತಿ ಅಧ್ಯಕ್ಷ ಮೊಹಮ್ಮದ್ ಆರೀಫ್ ತಿಳಿಸಿದ್ದಾರೆ. ಪರ್ಯಾಯೋತ್ಸವದಲ್ಲಿ ರಕ್ತದಾನ, ಹೊರೆಕಾಣಿಕೆ ಸೇರಿ ಹಲವು ರೀತಿಯಾಗಿ ಸೇವೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗೋರಕ್ಷಣೆಗೂ ಬೆಂಬಲ

ಮುಸ್ಲಿಮರು ಎಂದ ತಕ್ಷಣ ಗೋಭಕ್ಷರಕು ಎಂದೇ ಭಾವಿಸಲಾಗುತ್ತದೆ. ಆದರೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಯುವಕರು ಗೋರಕ್ಷಣೆಗೆ ಕಂಕಣಬದ್ಧರಾಗಿದ್ದಾರೆ. ಅಲ್ಲದೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಜನರಿಂದ ಗೋರಕ್ಷಣೆಗಾಗಿ ಸುಮಾರು 10 ಸಾವಿರಕ್ಕೂ ಅಧಿಕ ಜನರಿಂದ ಸಹಿ ಸಂಗ್ರಹಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಎರಡು ವರ್ಷಗಳ ಹಿಂದೆ ಸಹ ನಡೆದ ಪರ್ಯಾಯೋತ್ಸವ ನಡೆದಾಗ ನೂರಾರು ಮುಸ್ಲಿಂ ಯುವಕರು ಸೇವೆ ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಕರಾವಳಿ ಕೋಮುಸಂಘರ್ಷಕ್ಕೆ ಹೆಸರಾಗುತ್ತಿರುವ ಮಧ್ಯೆಯೇ ಕೋಮುಸೌಹಾರ್ದದ ಪ್ರತೀಕವಾಗಿ ಪರ್ಯಾಯೋತ್ಸವದಲ್ಲಿ ಮುಸ್ಲಿಂ ಯುವಕರು ಸೌಹಾರ್ದ ಮೆರೆಯುತ್ತಿರುವುದು ಸ್ವಾಗತಾರ್ಹವಾಗಿದೆ.

 

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search