• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿಗರೇ ಇಲ್ಲಿ ಕೇಳಿ ಮನಮೋಹನ್ ಸಿಂಗ್ ಆರ್ಥಿಕ ಸುಧಾರಣೆ ತಂದಾಗ ಜಿಡಿಪಿ ಶೇ 1.1 ಕುಸಿದಿತ್ತು

TNN Correspondent Posted On January 7, 2018
0


0
Shares
  • Share On Facebook
  • Tweet It

ದೆಹಲಿ: ಡಾ.ಮನಮೋಹನ್ ಸಿಂಗ್ 1991-92ರಲ್ಲಿ ಕೆಲವು ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತಂದಾಗ ದೇಶದ ರಾಷ್ಟ್ರೀಯ ಒಟ್ಟು ಉತ್ಪನ್ನ (ಜಿಡಿಪಿ) ಶೇ.1.1 ಕ್ಕೆ ಇಳಿದಿತ್ತು. ಯಾವುದೇ ಒಂದು ಆರ್ಥಿಕ ಸುಧಾರಣೆ ದೂರದೃಷ್ಟಿಯನ್ನಿಟ್ಟುಕೊಂಡು ಜಾರಿಗೆ ತರಲಾಗುತ್ತದೆ. ಅದರಂತೆ ನೋಟ್ಯಂತರ ಮತ್ತು ಜಿಎಸ್ ಟಿ ಜಾರಿಯಿಂದಲೂ ಕೆಲ ಹೊತ್ತು ಜಿಡಿಪಿ ಮೇಲೆ ಪರಿಣಾಮ ಬೀರಿದ್ದರು, ಭವಿಷ್ಯದಲ್ಲಿ ಉತ್ತಮ ಸ್ಥಿತಿ ಕಾಣಲಿದೆ ಎಂದು ಕೇಂದ್ರ ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ ಹೇಳಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೋಟು ನಿಷೇಧ ಮತ್ತು ಜಿಎಸ್ ಟಿ ಜಾರಿ ವಿರುದ್ಧ ಪ್ರತಿ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿರುವುದಕ್ಕೆ ರಾಜೀವ್ ಕುಮಾರ್ ಈ ರೀತಿಯ ಸ್ಪಷ್ಟನೆ ನೀಡಿದ್ದಾರೆ. ನಾಲ್ಕು ವರ್ಷದಲ್ಲಿ ನೋಟ್ಯಂತರ ಮತ್ತು ಜಿಎಸ್ ಟಿಯಂತ ನೂತನ ನಿಯಮಗಳನ್ನು ಜಾರಿಗೆ ತಂದರೂ ಜಿಡಿಪಿ ಶೇ.6.5 ರಷ್ಟು ಮಾತ್ರ ಇಳಿದಿದೆ. 1991-92ರ ವೇಳೆಗಿಂತ ಪ್ರಸ್ತುತ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಜಿಡಿಪಿ ದರ ಕುಸಿದಿದೆ ಎಂದು ತಿಳಿಸಿದ್ದಾರೆ.

ಕೃಷಿ ಮತ್ತು ಉತ್ಪಾದನೆ ಕ್ಷೇತ್ರದಲ್ಲಿ ಹಿನ್ನಡೆಯಾಗಿದ್ದರಿಂದ ಕಳೆದ ಆರ್ಥಿಕ ವರ್ಷಕ್ಕಿಂತ ಈ ಬಾರಿ ಜಿಡಿಪಿ ದರ ಶೇ.7.1ಕ್ಕಿಂತ ಕುಸಿದಿದೆ ಎಂದು ಕೇಂದ್ರ ಅಂಕಿ ಮತ್ತು ಸಾಂಖಿಕ್ಯ ಇಲಾಖೆ ತಿಳಿಸಿದೆ.

ನೋಟು ಬ್ಯಾನ್ ಮಾಡಿದ್ದು ಮತ್ತು ಜಿಎಸ್ ಟಿ ಜಾರಿ ಮಾಡಿದ್ದರಿಂದಲೇ ದೇಶದ ಆರ್ಥಿಕ ಸ್ಥಿತಿ ಕುಸಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತ್ತು. ನೂತನ ನೀತಿಗಳು ದೇಶಕ್ಕೆ ಎದುರಾದ ದುರಂತ ಎಂದು ಬಿಂಬಿಸಿದ್ದವು. ಕೇಂದ್ರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಮ್ ‘ಕೇಂದ್ರದ ನೂತನ ಆರ್ಥಿಕ ನೀತಿಗಳಿಂದ ತೀವ್ರ ಸಮಸ್ಯೆಯಾಗುತ್ತಿದೆ. ದೇಶದ ಆರ್ಥಿಕ ಸ್ಥಿತಿ ಹೀನಾಯ ಮಟ್ಟಕ್ಕೆ ತಲುಪಿದೆ ಎಂದು ಆರೋಪಿಸಿದ್ದರು.

ಕೇಂದ್ರದ ನೂತನ ಯೋಜನೆಗಳ ಕುರಿತು ಪ್ರತಿ ಪಕ್ಷಗಳ ವಿನಾಕಾರಣದ ಆರೋಪಕ್ಕೆ ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ ತಕ್ಕ ಉತ್ತರ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search